ಮಂಗಳೂರು: ಹಿರಿಯ ಸಾಹಿತಿ, ಕಾದಂಬರಿಕಾರ, ಭಾಷಾತಜ್ಞ, ಪ್ರಾಧ್ಯಾಪಕ ಕೆ.ಟಿ.ಗಟ್ಟಿ (ಕೂಡ್ಲು ತಿಮ್ಮಪ್ಪ ಗಟ್ಟಿ) ಅವರು ಸೋಮವಾರ ನಿಧನರಾಗಿದ್ದಾರೆ. ಮೂಲತಃ ಕಾಸರಗೋಡು ಸಮೀಪದ ಕೂಡ್ಲೂವಿನಲ್ಲಿ ಜನಿಸಿದ ಕೆ.ಟಿ.ಗಟ್ಟಿ ಅವರು ಮಂಗಳೂರಿನಲ್ಲಿ ನೆಲೆಸಿದ್ದರು.
ತಮ್ಮ ಹದಿನೇಳರ ಹರೆಯದಲ್ಲಿ ಶಿಕ್ಷಕರಾಗಿ ಕೆಲಸಕ್ಕೆ ಸೇರಿದ ಇವರು ಇಂಥಿಯೋಪಿಯಾದಲ್ಲಿ ಒಂಬತ್ತು ವರ್ಷ ಸೇರಿದಂತೆ ಒಟ್ಟು 25 ವರ್ಷ ಇಂಗ್ಲಿಷ್ ಪ್ರಾಧ್ಯಾಪಕರಾಗಿ ದುಡಿದಿದ್ದರು. ಕಲಿಕೆಯಲ್ಲಿ ನಿರಂತರ ಆಸಕ್ತಿ ಹೊಂದಿದ್ದ ಕೆ.ಟಿ.ಗಟ್ಟಿ ಅವರು ಇಂಗ್ಲೆಂಡಿನ ಟ್ರಿನಿಟಿ ಮತ್ತು ಆಕ್ಸಫರ್ಡ್ ಕಾಲೇಜುಗಳಿಂದ ಇಂಗ್ಲಿಷ್ ಕಲಿಕೆಯಲ್ಲಿ ಡಿಪ್ಲೋಮ ಗಳಿಸಿದ್ದರು.
ಇವರ ಮೊದಲ ಕಾದಂಬರಿ ‘ಶಬ್ದಗಳು’ 1973ರಲ್ಲಿ ಪ್ರಕಟವಾಯಿತು. ಈವರೆಗೆ 48 ಕಾದಂಬರಿಗಳು 5 ಕಥಾಸಂಕಲನಗಳು, 6 ಪ್ರಬಂಧ ಸಂಕಲನಗಳು, 22 ನಾಟಕಗಳು, 14 ಬಾನುಲಿ ನಾಟಕಗಳು, 2 ಕವನ ಸಂಕಲನಗಳಲ್ಲದೆ ಆತ್ಮಕಥೆ, ವ್ಯಕ್ತಿಚಿತ್ರ, ಮಕ್ಕಳ ನಾಟಕ ಹಾಗೂ ಪ್ರವಾಸ ಕಥನಗಳನ್ನೂ ಬರೆದು ಸಾಹಿತ್ಯ ಕ್ಷೇತ್ರವನ್ನು ಶ್ರೀಮಂತಗೊಳಿಸಿದ ಹೆಗ್ಗಳಿಕೆ ಇವರದು.
ಕರ್ನಾಟಕ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದಿರುವ ಕೆ.ಟಿ.ಗಟ್ಟಿ ಅವರು, ಪತ್ರಿಕಾ ಕಾದಂಬರಿಗಳ ಮೂಲಕ ಹೆಸರುವಾಸಿಯಾಗಿದ್ದ ಇವರು ಕನ್ನಡ ಸಾರಸ್ವತ ಲೋಕಕ್ಕೆ ನೀಡಿದ ಕೊಡುಗೆ ಅಪಾರ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…