ಮಂಗಳೂರು: ಉಳ್ಳಾಲದ ಸೋಮೇಶ್ವರ ಉಚ್ಚಿಲ, ಬಟ್ಟಪ್ಪಾಡಿ, ಉಳ್ಳಾಲ ಮೊಗವೀರ ಪಟ್ನ, ಕೈಕೋ, ಹಿಲರಿಯ ನಗರ,ಪ್ರದೇಶಗಳಲ್ಲಿ ಕಡಲಿನ ಅಬ್ಬರ ಜಾಸ್ತಿಯಾಗಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿದರು.
ಬಳಿಕ ಮಾತನಾಡಿದ ಅವರು ಕಡಲಿನ ಅಬ್ಬರ, ತೀವ್ರತೆ ಜಾಸ್ತಿಯಾಗಿರುವ ಹಿನ್ನೆಲೆಯಲ್ಲಿ,ಸರಕಾರದಿಂದ ಯಾವ ಯಾವ ಕಾರ್ಯ ರೂಪಿಸಬೇಕು ಎಂಬುದರ ಕುರಿತು ಜಿಲ್ಲಾಧಿಕಾರಿ ಮತ್ತು ಬಂದರು ಇಲಾಖೆ ಎ.ಡಿ.ಬಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ತಡೆಗೋಡೆ ಹೇಗೆ ನಿರ್ಮಿಸುವುದು ಮತ್ತು ತುರ್ತಾಗಿ ಯಾವ ಕಾರ್ಯ ಮಾಡಬೇಕು ಎಂಬುದರ ಬಗ್ಗೆ ನಿರ್ಧರಿಸಲಾಗುವುದು ಎಂದರು.
ಸ್ವಾಭಾವಿಕವಾಗಿ ಕಡಲ್ಕೊರೆತದಿಂದಾಗಿ ಮೀನುಗಾರರಿಗೆ, ಮೀನುಗಾರಿಕಾ ವೃತ್ತಿಯಲ್ಲಿ ತೊಡಗಿರುವ ಅನೇಕ ಕುಟುಂಬಗಳಿಗೆ ತೊಂದರೆ ಆದ ಹಿನ್ನೆಲೆಯಲ್ಲಿ ತುರ್ತಾಗಿ ತಡೆಗೋಡೆ ಮಾಡಬೇಕಾದ ಅಗತ್ಯವಿದೆ. ರೂ. 230 ಕೋಟಿ ಅನುದಾನದಲ್ಲಿ ಕಡಲ್ಕೊರೆತ ಕಾಮಗಾರಿಯು ಪ್ರಗತಿಯಲ್ಲಿದೆ, ಒಟ್ಟಾರೆಯಾಗಿ ಮೀನುಗಾರರು ಸಂಕಷ್ಟದಿಂದ ಪಾರಾಗಬೇಕೆಂಬುದು ಸರಕಾರದ ಆಶಯವಾಗಿದೆ ಎಂದು ಸಚಿವರು ತಿಳಿಸಿದರು.
ದ.ಕ.ಜಿ.ಪಂ.ಮಾಜಿ ಉಪಾಧ್ಯಕ್ಷ ಸತೀಶ್ ಕುಂಪಲ, ಮುಖಂಡರಾದ ಚಂದ್ರಹಾಸ್ ಉಳ್ಳಾಲ್, ಸಂತೋಷ್ ಕುಮಾರ್ ರೈ ಬೋಳಿಯಾರ್, ಚಂದ್ರಹಾಸ್ ಪಂಡಿತ್ ಹೌಸ್, ಹೇಮಂತ್ ಶೆಟ್ಟಿ, ಚಂದ್ರಶೇಖರ್ ಉಚ್ಚಿಲ್, ರವೀಂದ್ರ ಶೆಟ್ಟಿ ಉಳಿದೊಟ್ಟು, ಸೋಮೇಶ್ವರ ಪುರಸಭೆ ಅಧ್ಯಕ್ಷರಾದ ರಾಜೇಶ್ ಉಚ್ಚಿಲ್, ತಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುರೇಶ್ ಆಳ್ವ, ತಾಲೂಕು ಪಂಚಾಯತ್ ಸದಸ್ಯರಾದ ರವಿಶಂಕರ್ ಸೋಮೇಶ್ವರ, ನವೀನ್ ಪಾದಲ್ಪಾಡಿ, ಸೋಮೇಶ್ವರ ಪುರಸಭಾ ಆಯುಕ್ತರಾದ ವಾಣಿ ಆಳ್ವ, ಉಳ್ಳಾಲ ನಗರಸಭಾ ಆಯುಕ್ತರಾದ ರಾಯಪ್ಪ ಉಪಸ್ಥಿತರಿದ್ದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…