ಮಂಗಳೂರು: ನಗರದ ಎಸ್.ಡಿ.ಎಂ ಕಾನೂನು ಕಾಲೇಜು ಮುಂಭಾಗದಲ್ಲಿ ನಿಲ್ಲಿಸಿದ್ದ ಕೆಟಿಎಮ್ ಬೈಕೊಂದು ನೋಡ ನೋಡುತ್ತಲೇ ಬೆಂಕಿ ಹೊತ್ತಿಕೊಂಡು ಉರಿದು ಬೂದಿಯಾದ ಘಟನೆ ನಡೆದಿದೆ.
ವಿದ್ಯಾರ್ಥಿ ಕಾಲೇಜು ಮುಂಭಾಗ ಬೈಕ್ ನಿಲ್ಲಿಸಿ ಕಾಲೇಜಿಗೆ ಹೋಗಿದ್ದಾನೆ. ಆದರೆ ವಿದ್ಯಾರ್ಥಿ ಹೋದ ಕೆಲ ಹೊತ್ತಿನಲ್ಲೇ ಧಗ ಧಗನೆ ಬೆಂಕಿ ಹೊತ್ತಿಕೊಂಡು ಉರಿಯಲಾರಂಭಿಸಿದ್ದು, ಭಾರೀ ಅನಾಹುತವೊಂದು ತಪ್ಪಿದೆ.
ಮೊದಲು ಬೈಕಿನ ಪೆಟ್ರೋಲ್ ಟ್ಯಾಂಕಿಗೆ ಬೆಂಕಿ ಹತ್ತಿ ಇಡೀ ಬೈಕ್ ಸುಟ್ಟು ಹೋಗಿದೆ. ಬಳಿಕ ಬೈಕಿಗೆ ಬೆಂಕಿ ಹೊತ್ತಿಕೊಂಡ ತಕ್ಷಣ ಕಾಲೇಜಿನ ವಿದ್ಯಾರ್ಥಿಗಳೆಲ್ಲರೂ ಓಡಿ ಬಂದಿದ್ದಾರೆ. ಬಳಿಕ ಬಕೆಟ್ ಮೂಲಕ ನೀರು ತಂದು ವಿದ್ಯಾರ್ಥಿ ಬೆಂಕಿಯನ್ನು ನಂದಿಸಿದ್ದಾನೆ. ಆದರೆ ಬೆಂಕಿ ಹೊತ್ತಿದ ರಭಸಕ್ಕೆ ಬೈಕ್ ಸಂಪೂರ್ಣ ಸುಟ್ಟು ಹೋಗಿದೆ.
ಬೈಕಿಗೆ ಬೆಂಕಿ ಹೇಗೆ ಹೊತ್ತಿಕೊಂಡಿದ್ದು ಎಂದು ಪರಿಶೀಲಿಸಿದಾಗ ಬೈಕಿನ ಸೈಲೆನ್ಸರ್ ಬಳಿ ಬಟ್ಟೆಯ ತುಂಡು ಇದ್ದಿದು ಪತ್ತೆಯಾಗಿದೆ. ಸೈಲೆನ್ಸರ್ ಬಿಸಿಯಾದಾಗ ಬಟ್ಟೆಗೆ ಬೆಂಕಿ ಹೊತ್ತಿಕೊಂಡು ಉರಿದಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…