ಮಂಗಳೂರು: ನಗರದ ಎಸ್.ಡಿ.ಎಂ ಕಾನೂನು ಕಾಲೇಜು ಮುಂಭಾಗದಲ್ಲಿ ನಿಲ್ಲಿಸಿದ್ದ ಕೆಟಿಎಮ್ ಬೈಕೊಂದು ನೋಡ ನೋಡುತ್ತಲೇ ಬೆಂಕಿ ಹೊತ್ತಿಕೊಂಡು ಉರಿದು ಬೂದಿಯಾದ ಘಟನೆ ನಡೆದಿದೆ.
ವಿದ್ಯಾರ್ಥಿ ಕಾಲೇಜು ಮುಂಭಾಗ ಬೈಕ್ ನಿಲ್ಲಿಸಿ ಕಾಲೇಜಿಗೆ ಹೋಗಿದ್ದಾನೆ. ಆದರೆ ವಿದ್ಯಾರ್ಥಿ ಹೋದ ಕೆಲ ಹೊತ್ತಿನಲ್ಲೇ ಧಗ ಧಗನೆ ಬೆಂಕಿ ಹೊತ್ತಿಕೊಂಡು ಉರಿಯಲಾರಂಭಿಸಿದ್ದು, ಭಾರೀ ಅನಾಹುತವೊಂದು ತಪ್ಪಿದೆ.
ಮೊದಲು ಬೈಕಿನ ಪೆಟ್ರೋಲ್ ಟ್ಯಾಂಕಿಗೆ ಬೆಂಕಿ ಹತ್ತಿ ಇಡೀ ಬೈಕ್ ಸುಟ್ಟು ಹೋಗಿದೆ. ಬಳಿಕ ಬೈಕಿಗೆ ಬೆಂಕಿ ಹೊತ್ತಿಕೊಂಡ ತಕ್ಷಣ ಕಾಲೇಜಿನ ವಿದ್ಯಾರ್ಥಿಗಳೆಲ್ಲರೂ ಓಡಿ ಬಂದಿದ್ದಾರೆ. ಬಳಿಕ ಬಕೆಟ್ ಮೂಲಕ ನೀರು ತಂದು ವಿದ್ಯಾರ್ಥಿ ಬೆಂಕಿಯನ್ನು ನಂದಿಸಿದ್ದಾನೆ. ಆದರೆ ಬೆಂಕಿ ಹೊತ್ತಿದ ರಭಸಕ್ಕೆ ಬೈಕ್ ಸಂಪೂರ್ಣ ಸುಟ್ಟು ಹೋಗಿದೆ.
ಬೈಕಿಗೆ ಬೆಂಕಿ ಹೇಗೆ ಹೊತ್ತಿಕೊಂಡಿದ್ದು ಎಂದು ಪರಿಶೀಲಿಸಿದಾಗ ಬೈಕಿನ ಸೈಲೆನ್ಸರ್ ಬಳಿ ಬಟ್ಟೆಯ ತುಂಡು ಇದ್ದಿದು ಪತ್ತೆಯಾಗಿದೆ. ಸೈಲೆನ್ಸರ್ ಬಿಸಿಯಾದಾಗ ಬಟ್ಟೆಗೆ ಬೆಂಕಿ ಹೊತ್ತಿಕೊಂಡು ಉರಿದಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…