ಮಂಗಳೂರು: ದೇಶದಾದ್ಯಂತ ಕೊರೊನಾ ಎರಡನೇ ಅಲೆಯ ಬೀತಿ ನಡುವೆ ರಾಜ್ಯದಲ್ಲೂ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಏರುಗತಿಯಲ್ಲಿ ಇದೆ. ಈ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ನಿಯಂತ್ರಣಕ್ಕೆ ಜಿಲ್ಲಾಡಳಿತ ಕಠಿಣ ಕ್ರಮಕ್ಕೆ ಮುಂದಾಗಿದ್ದು, ದ.ಕ. ಜಿಲ್ಲೆಗೆ ಹೊರ ರಾಜ್ಯಗಳಿಂದ ಆಗಮಿಸುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯಗೊಳಿಸಿ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.
ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಸಭೆಯ ಬಳಿಕ ದ.ಕ. ಜಿಲ್ಲಾಧಿಕಾರಿ ಮಾರ್ಗಸೂಚಿ ಪ್ರಕಟಿಸಿದ್ದಾರೆ. ಹೊರರಾಜ್ಯದಿಂದ ಆಗಮಿಸುವವರಿಗೆ 72 ಗಂಟೆಯೊಳಗಿನ ಆರ್ಟಿಪಿಸಿಆರ್ ಪರೀಕ್ಷಾ ವರದಿಯನ್ನು ಕಡ್ಡಾಯಗೊಳಿಸಲಾಗಿದೆ. ಹೊರರಾಜ್ಯದಿಂದ ಬರುವವರು ನೆಗೆಟಿವ್ ಪರೀಕ್ಷಾ ವರದಿ ನೀಡುವುದು ಕಡ್ಡಾಯ ಎಂಬುವುದಾಗಿ ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.
ಉಡುಪಿ : ಒಮ್ಮೆ ಕೊರೊನಾ ಸೋಂಕು ಪತ್ತೆಯಾದವರಲ್ಲಿ ಮತ್ತೆ ಪತ್ತೆಯಾಗಿಲ್ಲ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24
ಕೇರಳದ ಕಾಸರಗೋಡು ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಜಿಲ್ಲೆಯ ಎಲ್ಲಾ ಗಡಿ ಪ್ರದೇಶಗಳಲ್ಲಿ ಕಟ್ಟು ನಿಟ್ಟಿನ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದು, ಸಾರ್ವಜನಿಕರು ವಿರಳವಾಗಿ ಸಂಚರಿಸುವ ರಸ್ತೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ಅನಾವಶ್ಯಕ ರಸ್ತೆಗಳನ್ನು ಮುಚ್ಚಬೇಕು. ತಾಲೂಕುವಾರು ಚೆಕ್ ಪೋಸ್ಟ್ ಗಳೊಂದಿಗೆ ಹೆಚ್ಚುವರಿ ಚೆಕ್ಪೋಸ್ಟ್ಗಳನ್ನು ತೆರೆಯಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹೊರ ರಾಜ್ಯಗಳಿಂದ ಬರುವ ಎಲ್ಲ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಸ್ಕ್ರೀನಿಂಗ್ ಮಾಡುವುದರೊಂದಿಗೆ 15 ದಿನಗಳಿಗೊಮ್ಮೆ ಪರೀಕ್ಷೆ ಮಾಡಿ ವರದಿ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಒಂದು ವೇಳೆ ವಿದ್ಯಾರ್ಥಿಗಳು ತಮ್ಮ ಸ್ವಂತ ಊರಿಗೆ ಹೋದಂತಹ ಸಂದರ್ಭ ಮರಳಿ ಜಿಲ್ಲೆಗೆ ಬರುವಾಗ ಕಡ್ಡಾಯವಾಗಿ ನೆಗೆಟಿವ್ ಪರೀಕ್ಷಾ ವರದಿಯನ್ನು ತರಬೇಕು ಹಾಗೂ ಅವರ ಜತೆ ಜಿಲ್ಲೆಗೆ ಆಗಮಿಸುವ ಪೋಷಕರು ನಗಟಿವ್ ವರದಿ ತರಬೇಕು ಎಂದು ಹೇಳಿದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…