Featured

ಮಂಗಳೂರು : ಹೊಸ ರೌಡಿ ಗ್ಯಾಂಗ್ ಕಟ್ಟಲು ಹಣ ಸುಲಿಗೆಗೆ ಇಳಿದಿದ್ದ ನಾಲ್ವರು ಪೊಲೀಸ್ ವಶಕ್ಕೆ -Vishwanews24

ಮಂಗಳೂರು : ಹೊಸ ರೌಡಿ ಗ್ಯಾಂಗ್ ಕಟ್ಟಲು ಹಣ ಸುಲಿಗೆಗೆ ಇಳಿದಿದ್ದ ನಾಲ್ವರು ಪೊಲೀಸ್ ವಶಕ್ಕೆ -Vishwanews24

ಮಂಗಳೂರು : ಹೊಸ ರೌಡಿ ಗ್ಯಾಂಗ್ ಕಟ್ಟಲು ಹಣಕ್ಕಾಗಿ ಸುಲಿಗೆಗೆ ಇಳಿದಿದ್ದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರು ಹಣಕ್ಕಾಗಿ ನಗರದ ಎರಡು ಕಡೆಗಳಲ್ಲಿ 2 ದ್ವಿಚಕ್ರ ವಾಹನಗಳ ಸಹಿತ ಸವಾರರನ್ನು ಸುಲಿಗೆಗೈದ ಪ್ರಕರಣದಲ್ಲಿ ಭಾಗಿಯಾಗಿದ್ದು, ವಿಚಾರಣೆ ಹಲವಾರು ಮಾಹಿತಿಗಳನ್ನು ಬಾಯಿಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಬಂಧಿತರನ್ನು ಮಂಗಳೂರು ನಗರದ‌ ಕುಲಶೇಖರದ ದೀಕ್ಷಿತ್ ಪೂಜಾರಿ, ಸೋಮೇಶ್ವರದ ಚಂದ್ರಹಾಸ ಪೂಜಾರಿ , ಕೋಟೆಕಾರ್‌ ನ ಹೇಮಚಂದ್ರ, ಸುರತ್ಕಲ್ ಚೇಳಾರಿನ‌ ಸಂತೋಷ್ ಪೂಜಾರಿ ಎಂದು ಗುರುತಿಸಲಾಗಿದೆಯ. ಇವರ ಮೇಲೆ ಬೇರೆ ಬೇರೆ ಠಾಣೆಗಳಲ್ಲಿ‌ ರೌಡಿಶೀಟ್ ತೆರೆಯಲಾಗಿದೆ.

ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಶಶಿಕುಮಾರ್ ದರೋಡೆ, ಕಳ್ಳತನ, ಸುಲಿಗೆ ಮೂಲಕ ಮೊದಲು ಹಣ ಗಳಿಸುವುದು ಮತ್ತು ಬಳಿಕ ಕ್ರಿಮಿನಲ್ ಹಿನ್ನಲೆಯ ವ್ಯಕ್ತಿಗಳ ಕೊಲೆ ಮಾಡುವುದು ಹಾಗೂ‌ ಮಂಗಳೂರಿನ ಕ್ರಿಮಿನಲ್ ಚಟುವಟಿಕೆಯ ಮೇಲೆ‌ ನಿಯಂತ್ರಣ ಸಾಧಿಸುವುದು ಬಂಧಿತರ ಆರೋಪಿಗಳ ಯೋಜನೆಯಾಗಿತ್ತು.

ಇವರು ಮರಳು, ಗಾಂಜಾ ದಂಧೆಯಲ್ಲೂ ಭಾಗಿಯಾಗಿದ್ದರು.‌ ಭೂಗತ ಪಾತಕಿ‌ ರವಿ ಪೂಜಾರಿ ಹಾಗೂ ಕ್ರಿಮಿನಲ್‌ಗಳ ಜೊತೆ‌ ನಿಕಟ ಸಂಪರ್ಕದಲ್ಲಿದ್ದ ಇವರು ತಮ್ಮದೇ ಆದ ರೌಡಿ ಗ್ಯಾಂಗ್ ಕಟ್ಟಲು ಸಿದ್ಧತೆ ನಡೆಸಿದ್ದರು.‌ಇವರು ಸುಲಿಗೆಗೈದ ಎರಡು ದ್ವಿಚಕ್ರ ವಾಹನ, ನಗದು, ಮೊಬೈಲ್ ಫೋನ್,‌ ಮಾರಕಾಸ್ತ್ರವನ್ನು ವಶಕ್ಕೆ ‌ಪಡೆಯಲಾಗಿದೆ ಎಂದರು.

Vishwa News 24

Recent Posts

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ – vishwanews24

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್‌ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…

27 minutes ago

ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ – vishwanews24

ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…

57 minutes ago

ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ – vishwanews24

‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್‌ವುಡ್‌ನ ರಾಕಿಂಗ್ ಸ್ಟಾರ್…

1 hour ago

ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ – vishwanews24

ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…

1 hour ago

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್,ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ ನ ಆಹಾರ ಪರವಾನಗಿ ಅಮಾನತು – vishwanews24

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…

2 hours ago

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  – vishwanews24

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  ಉಡುಪಿ: ಉದ್ಯಮಿ…

2 hours ago