Featured

ಮಂಗಳೂರು : ಹೊಸ ರೌಡಿ ಗ್ಯಾಂಗ್ ಕಟ್ಟಲು ಹಣ ಸುಲಿಗೆಗೆ ಇಳಿದಿದ್ದ ನಾಲ್ವರು ಪೊಲೀಸ್ ವಶಕ್ಕೆ -Vishwanews24

ಮಂಗಳೂರು : ಹೊಸ ರೌಡಿ ಗ್ಯಾಂಗ್ ಕಟ್ಟಲು ಹಣ ಸುಲಿಗೆಗೆ ಇಳಿದಿದ್ದ ನಾಲ್ವರು ಪೊಲೀಸ್ ವಶಕ್ಕೆ -Vishwanews24

ಮಂಗಳೂರು : ಹೊಸ ರೌಡಿ ಗ್ಯಾಂಗ್ ಕಟ್ಟಲು ಹಣಕ್ಕಾಗಿ ಸುಲಿಗೆಗೆ ಇಳಿದಿದ್ದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರು ಹಣಕ್ಕಾಗಿ ನಗರದ ಎರಡು ಕಡೆಗಳಲ್ಲಿ 2 ದ್ವಿಚಕ್ರ ವಾಹನಗಳ ಸಹಿತ ಸವಾರರನ್ನು ಸುಲಿಗೆಗೈದ ಪ್ರಕರಣದಲ್ಲಿ ಭಾಗಿಯಾಗಿದ್ದು, ವಿಚಾರಣೆ ಹಲವಾರು ಮಾಹಿತಿಗಳನ್ನು ಬಾಯಿಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಬಂಧಿತರನ್ನು ಮಂಗಳೂರು ನಗರದ‌ ಕುಲಶೇಖರದ ದೀಕ್ಷಿತ್ ಪೂಜಾರಿ, ಸೋಮೇಶ್ವರದ ಚಂದ್ರಹಾಸ ಪೂಜಾರಿ , ಕೋಟೆಕಾರ್‌ ನ ಹೇಮಚಂದ್ರ, ಸುರತ್ಕಲ್ ಚೇಳಾರಿನ‌ ಸಂತೋಷ್ ಪೂಜಾರಿ ಎಂದು ಗುರುತಿಸಲಾಗಿದೆಯ. ಇವರ ಮೇಲೆ ಬೇರೆ ಬೇರೆ ಠಾಣೆಗಳಲ್ಲಿ‌ ರೌಡಿಶೀಟ್ ತೆರೆಯಲಾಗಿದೆ.

ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಶಶಿಕುಮಾರ್ ದರೋಡೆ, ಕಳ್ಳತನ, ಸುಲಿಗೆ ಮೂಲಕ ಮೊದಲು ಹಣ ಗಳಿಸುವುದು ಮತ್ತು ಬಳಿಕ ಕ್ರಿಮಿನಲ್ ಹಿನ್ನಲೆಯ ವ್ಯಕ್ತಿಗಳ ಕೊಲೆ ಮಾಡುವುದು ಹಾಗೂ‌ ಮಂಗಳೂರಿನ ಕ್ರಿಮಿನಲ್ ಚಟುವಟಿಕೆಯ ಮೇಲೆ‌ ನಿಯಂತ್ರಣ ಸಾಧಿಸುವುದು ಬಂಧಿತರ ಆರೋಪಿಗಳ ಯೋಜನೆಯಾಗಿತ್ತು.

ಇವರು ಮರಳು, ಗಾಂಜಾ ದಂಧೆಯಲ್ಲೂ ಭಾಗಿಯಾಗಿದ್ದರು.‌ ಭೂಗತ ಪಾತಕಿ‌ ರವಿ ಪೂಜಾರಿ ಹಾಗೂ ಕ್ರಿಮಿನಲ್‌ಗಳ ಜೊತೆ‌ ನಿಕಟ ಸಂಪರ್ಕದಲ್ಲಿದ್ದ ಇವರು ತಮ್ಮದೇ ಆದ ರೌಡಿ ಗ್ಯಾಂಗ್ ಕಟ್ಟಲು ಸಿದ್ಧತೆ ನಡೆಸಿದ್ದರು.‌ಇವರು ಸುಲಿಗೆಗೈದ ಎರಡು ದ್ವಿಚಕ್ರ ವಾಹನ, ನಗದು, ಮೊಬೈಲ್ ಫೋನ್,‌ ಮಾರಕಾಸ್ತ್ರವನ್ನು ವಶಕ್ಕೆ ‌ಪಡೆಯಲಾಗಿದೆ ಎಂದರು.

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

48 minutes ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

58 minutes ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

1 hour ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

1 hour ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

2 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

2 hours ago