Featured

ಮಂಗಳೂರು : ಹೊಸ ವರ್ಷಾಚರಣೆ – ಪೊಲೀಸ್ ಆಯುಕ್ತರಿಂದ ಮಾರ್ಗಸೂಚಿ ಪ್ರಕಟ – vishwanews24

ಮಂಗಳೂರು : ಹೊಸ ವರ್ಷಾಚರಣೆ – ಪೊಲೀಸ್ ಆಯುಕ್ತರಿಂದ ಮಾರ್ಗಸೂಚಿ ಪ್ರಕಟ

ಮಂಗಳೂರು  : ನಗರದಲ್ಲಿ ಹೊಸ ವರ್ಷಾಚರಣೆಗೆ ಸಂಬಂಧಿಸಿ ಸಾರ್ವಜನಿಕ ಹಿತದೃಷ್ಟಿಯಿಂದ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿಯವರು ಕೆಲವೊಂದು ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ.

ಹೊಸ ವರ್ಷಾಚರಣೆ ಆಯೋಜಿಸುವ ಹೊಟೇಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಹಾಗೂ ಇತರ ಸಂಸ್ಥೆಗಳು ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಸಹಾಯ ಆಯುಕ್ತರ ಕಚೇರಿಯಿಂದ ಕಡ್ಡಾಯವಾಗಿ ಪೂರ್ವಾನುಮತಿ ಪಡೆಯಬೇಕು. ಕಾರ್ಯಕ್ರಮ ರಾತ್ರಿ 12.30ರ ಒಳಗೆ ಪೂರ್ಣಗೊಳ್ಳಬೇಕು. ಅದಕ್ಕಾಗಿ ಡಿ. 23ರಂದು ಸಂಜೆ 5 ಗಂಟೆಯ ಒಳಗೆ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬೇಕು ಎಂದು ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಇತರ ಪ್ರಮುಖ ಮಾರ್ಗಸೂಚಿಗಳು :

# ಪೂರ್ವಾನುಮತಿ ಇಲ್ಲದೆ ಹೊಸ ವರ್ಷಾಚರಣೆ ನಡೆಸುವ ಮೂಲಕ ನಿಯಮ ಉಲ್ಲಂಘಿಸುವರ ವಿರುದ್ಧ ಕಾನೂನು ಕ್ರಮ ವಹಿಸಲಾಗುವುದು.

# ಧ್ವನಿವರ್ದಕ ಮಟ್ಟವು ಶಬ್ಧ ಮಾಲಿನ್ಯ ನಿಯಮ 2000 ಮತ್ತು ಸುಪ್ರೀಂ ಕೋರ್ಟ್‌ನ ನಿರ್ದೇಶನವನ್ನು ಅನುಸರಿಸಬೇಕು. ಡಿಜೆ ಬಳಕೆಯನ್ನು ಕಟ್ಟು ನಿಟ್ಟಾಗಿ ನಿಷೇಧವಿದ್ದು, ಸಂಭ್ರಮಾಚರಣೆ ನೆಪದಲ್ಲಿ ಅಶ್ಲೀಲ ನೃತ್ಯಗಳು, ಅರೆನಗ್ನ ಪ್ರದರ್ಶನ, ಜೂಜು ಹಾಗೂ ಅನೈತಿಕ ಚಟುವಟಿಕೆಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ.

# ಮದ್ಯ ಮಾರಾಟ ಮತ್ತು ವಿತರಣೆಗೆ ಅಬಕಾರಿ ಇಲಾಖೆಯಿಂದ ಲಿಖಿತ ಅನುಮತಿ ಕಡ್ಡಾಯವಾಗಿ ಪಡೆದಿರಬೇಕು.

# ಆಯೋಜಕರು ಸಂಬಂಧಿತ ಇಲಾಖೆಗಳಿಂದ ಪಡೆದ ಲೈಸೆನ್ಸ್, ಅನುಮತಿ ಪ್ರಕಾರ ನಿರ್ಧರಿತ ನಿಯಮಗಳನ್ನು ಪಾಲಿಸಬೇಕು.

# ಸಾರ್ವಜನಿಕ ಸ್ಥಳಗಳಾದ ಬಸ್ಸು ನಿಲ್ದಾಣ, ಉದ್ಯಾನವನ, ಕ್ರೀಡಾಂಗಣಗಳು, ರೈಲ್ವೇ ನಿಲ್ದಾಣಗಳು ಹಾಗೂ ಇತರ ಸಾರ್ವಜನಿಕ ಪ್ರದೇಶಗಳಲ್ಲಿ ಧೂಮಪಾನ ಮತ್ತು ಮದ್ಯಪಾನ ಮಾಡುವುದು ನಿಷೇಧ.

# ವಿದ್ಯಾರ್ಥಿಗಳು ಅಥವಾ ಯುವಕರು ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯವಾಗಿ ವರ್ತಿಸಿ ಕಿಡಿಗೇಡಿತನ ಪ್ರದರ್ಶಿಸಿದರೆ ನಿರ್ದಾಕ್ಷಿಣ್ಯ ಕ್ರಮ.

# ಆಯೋಜಕರು ಅಗತ್ಯವಿರುವ ಸುರಕ್ಷತಾ ಕ್ರಮಗಳೊಂದಿಗೆ ಅಗ್ನಿಶಾಮಕ ಸಾಧನ, ತುರ್ತು ವೈದ್ಯಕೀಯ ವಾಹನ ಹಾಗೂ ಇತರ ಭದ್ರತಾ ಕ್ರಮ ಸಂಯೋಜಿಸಿರಬೇಕು.

# ಯಾವುದೇ ಅನಾಹುತದ ತಡೆಗಾಗಿ ಪೂರಕ ಮುಂಜಾಗೃತಾ ಕ್ರಮ, ಸಾರ್ವಜನಿಕ ರಸ್ತೆಗಳಲ್ಲಿ ಸುಗಮ ಸಂಚಾರಕ್ಕೆ ಅಡ್ಡಿಯಾಗದಂತೆ ಆಯೋಜಕರು ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಬೇಕು.

# ಹೊಟೇಲ್, ಕ್ಲಬ್ ಅಥವಾ ವಿಶೇಷ ಕೂಟಗಳ ವ್ಯವಸ್ಥಾಪಕರು ಕಾರ್ಯಕ್ರಮಗಳಲ್ಲಿ ಮದ್ಯ ವಿತರಣೆ ವ್ಯವಸ್ಥೆಗೊಳಿಸಿದ್ದರೆ 18 ವರ್ಷ ಕೆಳಗಿನವರಿಗೆ ಪ್ರವೇಶ ನಿಷೇಧಿಸಬೇಕು.

# ಮಹಿಳೆಯರು, ಹೆಣ್ಣು ಮಕ್ಕಳನ್ನು ಚುಡಾಯಿಸುವ, ಕಿರುಕುಳ ನೀಡುವ, ಹಿಂಸಾಚಾರ ಅಥವಾ ಅಶ್ಲೀಲ ಚಟುವಟಿಕೆಗಳನ್ನು ತಡೆಹಿಡಿಯಲು ವಿಶೇಷ ಕಾರ್ಯಪಡೆಗಳು ನಿಯೋಜನೆಗೊಳ್ಳುತ್ತವೆ.

# ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ಬಗ್ಗೆ ನಿಗಾವಹಿಸಲು ಸಂಚಾರ ಪೊಲೀಸರು ಮತ್ತು ತಜ್ಞರನ್ನು ಒಳಗೊಂಡ ಕ್ಷಿಪ್ರ ಕಾರ್ಯಪಡೆ ರಚಿಸಲಾಗಿದೆ. ಕಾರ್ಯಪಡೆಯು ನಗರದ ಎಲ್ಲಾ ಪ್ರದೇಶಗಳಲ್ಲಿ ಕಾರ್ಯಾಚರಣೆಯಲ್ಲಿರುತ್ತವೆ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ ಕಾನೂನು ಕ್ರಮ ವಹಿಸಿ ವಾಹನ ಮುಟ್ಟುಗೋಲುಹಾಕಲಾಗುವುದು.

# ಸ್ಟಂಟ್ ಚಟುವಟಿಕೆಗಳು, ವೀಲಿಂಗ್, ಡ್ರಾಗ್ ರೇಸಿಂಗ್, ವೇಗದ ಚಾಲನೆ ಮತ್ತು ಧ್ವನಿ ಮತ್ತು ಶಬ್ಧ ಉತ್ಪಾದಿಸುವ ಕಾರ್ಯಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

# ಸಾರ್ವಜನಿಕ ಹಾಗೂ ಸಮುದ್ರ ಬದಿಗಳಲ್ಲಿ ಮದ್ಯಪಾನ, ಅಶ್ಲೀಲ ವರ್ತನೆ, ಅಶ್ಲೀಲ ಪ್ರದರ್ಶನ ನಿಷೇಧಿಸಲಾಗಿದೆ.

# ಸಾರ್ವಜನಿಕರ ನೆಮ್ಮದಿಗೆ ಭಂಗ ತರುವ ರೀತಿಯಲ್ಲಿ ಪಟಾಕಿ, ಸಿಡಿಮದ್ದುಗಳನ್ನು ಸಿಡಿಸುವುದನ್ನು ನಿಷೇಧಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

15 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

17 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

18 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

18 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

18 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

18 hours ago