Featured

ಮಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆ – ಜಿಲ್ಲಾಡಳಿತದಿಂದ ಪ್ರತ್ಯೇಕ ಮಾರ್ಗಸೂಚಿ ಪ್ರಕಟ – Vishwanews24

ಡಿ. 31ರ ರಾತ್ರಿ 12.30 ರವರೆಗೆ ಹೊಸ ವರ್ಷಾಚರಣೆಗೆ ಅನುಮತಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡಿಸೆಂಬರ್ 31 ಮತ್ತು ಜನವರಿ 1ಕ್ಕೆ ಅನ್ವಯವಾಗುವಂತೆ ಜಿಲ್ಲಾಡಳಿತ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸಿದೆ. ನೋಂದಾಯಿತ, ಅಧಿಕೃತ ಕ್ಲಬ್‌, ಪಬ್‌, ರೆಸ್ಟೋರೆಂಟ್‌, ಹೊಟೇಲ್‌ಗ‌ಳಲ್ಲಿ ನಿಯಮಗಳಿಗೆ ಒಳಪಟ್ಟು ರಾತ್ರಿ 12.30ರವರೆಗೆ ಸಂಭ್ರಮಾಚರಣೆಗೆ ಅನುಮತಿ ನೀಡಲಾಗಿದೆ.

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಧ್ವನಿ ವರ್ಧಕ/ವಿದ್ಯುನ್ಮಾನ ಉಪಕರಣಗಳನ್ನು ಮತ್ತು ಶಬ್ದ ಉಂಟುಮಾಡುವ ಉಪಕರಣಗಳನ್ನು ರಾತ್ರಿ 10ರ ಬಳಿಕ ಬಳಸುವಂತಿಲ್ಲ.

ನಿಯಮಗಳಿಗೆ ಒಳಪಟ್ಟು ಕಾರ್ಯಕ್ರಮವನ್ನು ನಡೆಸಲು ಪೊಲೀಸ್‌ಇಲಾಖೆಯಿಂದ ಅನುಮತಿ ಪಡೆಯುವಂತೆ ಆದೇಶಿಸಲಾಗಿದೆ.

ಸಭಾಂಗಣ, ತೆರೆದ ಸ್ಥಳ/ಹೊರಾಂಗಣ ಪ್ರದೇಶಗಳಾದ ಕಲ್ಯಾಣ ಮಂಟಪ, ಸಭಾ ಭವನ, ಸರ್ವೀಸ್‌ಅಪಾರ್ಟ್‌ಮೆಂಟ್‌, ಕಡಲ ತೀರ, ಹೋಂಸ್ಟೇ, ಮಾಲ್‌ಇತ್ಯಾದಿ ತೆರೆದ ಪ್ರದೇಶಗಳಲ್ಲಿ ಡಿಜೆ/ಡಾಲ್ಬಿ ಡ್ಯಾನ್ಸ್‌ಗಳನ್ನು ನಡೆಸುಂತಿಲ್ಲ. ವಿಶೇಷ ಪಾರ್ಟಿ, ಇತ್ಯಾದಿ ಆಯೋಜಿಸುವ ಮುನ್ನ ಕಡ್ಡಾಯವಾಗಿ ನಗರ ಸ್ಥಳೀಯ ಸಂಸ್ಥೆ/ಗ್ರಾಮೀಣ ಸ್ಥಳೀಯ ಸಂಸ್ಥೆ ಮತ್ತು ಪೊಲೀಸ್‌ಇಲಾಖೆಯ ಅನುಮತಿ ಪಡೆಯಬೇಕು.

ಧಾರ್ಮಿಕ ಕಾರ್ಯಕ್ರಮ ನಡೆಸಲು ಯಾವುದೇ ನಿರ್ಬಂಧ ಇರುವುದಿಲ್ಲ. ಧಾರ್ಮಿಕ ಕಾರ್ಯಕ್ರಮವನ್ನು ನಡೆಸುವ ಮೇಲ್ವಿಚಾರಕರು, ಆಯೋಜಕರು ಸರ್ವೋಚ್ಚ ನ್ಯಾಯಾಲಯದ ಆದೇಶಗಳಿಗೆ ಮತ್ತು ಸರಕಾರದ ನಿಯಮಾವಳಿಗೆ ಒಳಪಟ್ಟು ಕ್ರಮ ಕೈಗೊಳ್ಳಬೇಕು.

ದಿನನಿತ್ಯ ನಡೆಯುವ ಕ್ಲಬ್‌, ಪಬ್‌, ರೆಸ್ಟೋರೆಂಟ್‌ಗಳ ದೈನಂದಿನ ವ್ಯವಹಾರ ನಡೆಸಲು ಹಾಗೂ ಪರ್ಮಿಟ್‌ನಂತೆ ನಿಗದಿತ ಸಮಯದೊಳಗೆ ಕಾರ್ಯಕ್ರಮ ಮುಕ್ತಾಯಗೊಳಿಸಬೇಕು ಎಂದು ಸೂಚಿಸಲಾಗಿದೆ.

ಬೈಕ್‌ ವೀಲಿಂಗ್, ಯುವತಿಯರ, ಮಹಿಳೆಯರಿಗೆ, ಮಕ್ಕಳಿಗೆ , ವೃದ್ಧರಿಗೆ ಕೀಟಲೆ ನೀಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ಎಚ್ಚರಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

21 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

21 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago