ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ, ಸರ್ಕಾರದ ನಿರ್ದೇಶನದಂತೆ, ಜಿಲ್ಲಾಡಳಿತವು ಎಲ್ಲಾ ಅವಶ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಪ್ರಸ್ತುತ ಯುನೈಟೆಡ್ ಕಿಂಗ್ಡಮ್ನಲ್ಲಿ ಹೊಸದಾಗಿ ರೂಪಾಂತರಗೊಂಡಿರುವ ವೈರಾಣು ಪತ್ತೆಯಾಗಿದ್ದು, ತೀವ್ರ ಗತಿಯಲ್ಲಿ ಹರಡಿ ಬೆಳವಣಿಗೆ ಹೊಂದುತ್ತಿದೆ. ಅಲ್ಲದೇ ಯುನೈಟೆಡ್ ಕಿಂಗ್ಡಮ್ನಿಂದ ರಾಜ್ಯಕ್ಕೆ ಇತ್ತೀಚೆಗೆ ಆಗಮಿಸಿರುವ ಪ್ರಯಾಣಿಕರಲ್ಲಿ ಕೋವಿಡ್-19 ಪಾಸಿಟಿವ್ ಇರುವುದು ಕಂಡು ಬಂದಿದೆ.
ಸರ್ಕಾರದ ನಿರ್ದೇಶನದಂತೆ, ಜಿಲ್ಲಾಡಳಿತವು ಎಲ್ಲಾ ಅವಶ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ವೈರಾಣು ಹರಡುವಿಕೆಯನ್ನು ತಡೆಗಟ್ಟಲು ಹಾಗೂ ಹೊಸವರ್ಷ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ಕಡಲ ತೀರ ಪ್ರದೇಶಗಳಲ್ಲಿ ಅತೀ ಹೆಚ್ಚು ಜನಸಂದಣಿ ಸೇರುವುದರಿಂದ ಸೋಂಕು ಹರಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಲ್ಲೆಯ ಉಳ್ಳಾಲ, ಸೋಮೇಶ್ವರ, ಮೊಗವೀರಪಟ್ಣ, ಪಣಂಬೂರು, ತಣ್ಣೀರುಬಾವಿ, ಸಸಿಹಿತ್ಲು ಮತ್ತು ಸುರತ್ಕಲ್ ಬೀಚ್ಗಳಿಗೆ ಸಾರ್ವಜನಿಕರ ಪ್ರವೇಶ ವಿಷೇಧಿಸಲಾಗಿದೆ.
ಎಲ್ಲಾ ಕಡಲ ಕಿನಾರೆಗಳಿಗೆ ಡಿಸೆಂಬರ್ 31 ರಂದು ಮಧ್ಯಾಹ್ನ 12 ಗಂಟೆಯಿಂದ ಜನವರಿ 2 ರಂದು ಮಧ್ಯಾಹ್ನ 12 ಗಂಟೆಯವರೆಗೆ ಸ್ಥಳೀಯರು ಹಾಗೂ ಸಾಂಪ್ರದಾಯಿಕ ಮೀನುಗಾರರನ್ನು ಹೊರತು ಪಡಿಸಿ ಇತರೇ ಯಾವುದೇ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂಬುವುದಾಗಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…
ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…
ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…
ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…
ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…