ಮಂಗಳೂರು:ರಾಜ್ಯ ಸರಕಾರ ನಾಡದೋಣಿ ಹಾಗೂ ಗಿಲ್ ನೆಟ್ ಮೀನುಗಾರರಿಗೆ 10 ತಿಂಗಳಾದರೂ ಇನ್ನೂ 300 ಲೀಟರ್ ಉಚಿತ ಡಿಸೇಲ್ ಅನ್ನು ಬಿಡುಗಡೆ ಮಾಡಿಲ್ಲ. 10 ದಿನಗಳೊಳಗೆ ಇದನ್ನು ಬಿಡುಗಡೆ ಮಾಡದಿದ್ದಲ್ಲಿ ಮೀನುಗಾರರ ಪರವಾಗಿ ಕಾಂಗ್ರೆಸ್ ದ.ಕ ಜಿಲ್ಲೆಯಾದ್ಯಂತ ಉಗ್ರ ಹೋರಾಟ ಮಾಡಲಿದೆ ಎಂದು ವಿಧಾನಸಭೆಯ ವಿಪಕ್ಷ ಉಪನಾಯಕ ಖಾದರ್ ಎಚ್ಚರಿಕೆ ನೀಡಿದರು.
ಕಾಂಗ್ರೆಸ್ ಕಚೇರಿಯಲ್ಲಿಂದು ಮಾತನಾಡಿದ ಅವರು, ನಾಡದೋಣಿ ಹಾಗೂ ಗಿಲ್ ನೆಟ್ ಮೀನುಗಾರಿಕೆ ನಡೆಸುವ ಮೀನುಗಾರರಿಗೆ ಕಾಂಗ್ರೆಸ್ ಸರಕಾರ ತಿಂಗಳಿಗೆ 300 ಲೀಟರ್ ಉಚಿತವಾಗಿ ಸೀಮೆಎಣ್ಣೆ ನೀಡುವ ಯೋಜನೆ ಜಾರಿಗೆ ತಂದಿತ್ತು ಎಂದರು.
ಅಲ್ಲದೆ ನಮ್ಮ ಸರಕಾರ ಇರುವಾಗ ಪ್ರತೀವರ್ಷ ಮೀನುಗಾರರಿಗೆ ಉಚಿತವಾಗಿ ಮನೆ ಕಟ್ಟಲು ಅನುದಾನ ನೀಡಲಾಗುತ್ತಿತ್ತು. ಬಿಜೆಪಿ ಸರಕಾರ ಬಂದ ಬಳಿಕ ಒಂದೇ ಒಂದು ಮನೆ ಕೊಟ್ಟಿಲ್ಲ. ಮೊನ್ನೆ ತಾನೆ ಸರಕಾರ ಮೀನುಗಾರರಿಗೆ ಮನೆ ನೀಡುವ ಪಟ್ಟಿ ಬಿಡುಗಡೆ ಮಾಡಿದೆ. ಆದರೆ ನದಿ, ಸಮುದ್ರಗಳಿಲ್ಲದ, ಮೀನುಗಾರರೇ ಇಲ್ಲದ ಬೆಳಗಾವಿಗೆ 250 ಮನೆಗಳನ್ನು ನೀಡಿ ಮೀನುಗಾರರಿರುವ ನನ್ನ ಕ್ಷೇತ್ರಕ್ಕೆ ಕೇವಲ 10 ಮನೆಗಳನ್ನು ನೀಡಿದೆ. ಈ ಮೂಲಕ ಮೀನುಗಾರರಿಗೆ ರಾಜ್ಯದ ಬಿಜೆಪಿ ಸರಕಾರ ದ್ರೋಹವೆಸಗಿದೆ ಎಂದು ಖಾದರ್ ಹೇಳಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…