ಮಂಗಳೂರು:ರಾಜ್ಯ ಸರಕಾರ ನಾಡದೋಣಿ ಹಾಗೂ ಗಿಲ್ ನೆಟ್ ಮೀನುಗಾರರಿಗೆ 10 ತಿಂಗಳಾದರೂ ಇನ್ನೂ 300 ಲೀಟರ್ ಉಚಿತ ಡಿಸೇಲ್ ಅನ್ನು ಬಿಡುಗಡೆ ಮಾಡಿಲ್ಲ. 10 ದಿನಗಳೊಳಗೆ ಇದನ್ನು ಬಿಡುಗಡೆ ಮಾಡದಿದ್ದಲ್ಲಿ ಮೀನುಗಾರರ ಪರವಾಗಿ ಕಾಂಗ್ರೆಸ್ ದ.ಕ ಜಿಲ್ಲೆಯಾದ್ಯಂತ ಉಗ್ರ ಹೋರಾಟ ಮಾಡಲಿದೆ ಎಂದು ವಿಧಾನಸಭೆಯ ವಿಪಕ್ಷ ಉಪನಾಯಕ ಖಾದರ್ ಎಚ್ಚರಿಕೆ ನೀಡಿದರು.
ಕಾಂಗ್ರೆಸ್ ಕಚೇರಿಯಲ್ಲಿಂದು ಮಾತನಾಡಿದ ಅವರು, ನಾಡದೋಣಿ ಹಾಗೂ ಗಿಲ್ ನೆಟ್ ಮೀನುಗಾರಿಕೆ ನಡೆಸುವ ಮೀನುಗಾರರಿಗೆ ಕಾಂಗ್ರೆಸ್ ಸರಕಾರ ತಿಂಗಳಿಗೆ 300 ಲೀಟರ್ ಉಚಿತವಾಗಿ ಸೀಮೆಎಣ್ಣೆ ನೀಡುವ ಯೋಜನೆ ಜಾರಿಗೆ ತಂದಿತ್ತು ಎಂದರು.
ಅಲ್ಲದೆ ನಮ್ಮ ಸರಕಾರ ಇರುವಾಗ ಪ್ರತೀವರ್ಷ ಮೀನುಗಾರರಿಗೆ ಉಚಿತವಾಗಿ ಮನೆ ಕಟ್ಟಲು ಅನುದಾನ ನೀಡಲಾಗುತ್ತಿತ್ತು. ಬಿಜೆಪಿ ಸರಕಾರ ಬಂದ ಬಳಿಕ ಒಂದೇ ಒಂದು ಮನೆ ಕೊಟ್ಟಿಲ್ಲ. ಮೊನ್ನೆ ತಾನೆ ಸರಕಾರ ಮೀನುಗಾರರಿಗೆ ಮನೆ ನೀಡುವ ಪಟ್ಟಿ ಬಿಡುಗಡೆ ಮಾಡಿದೆ. ಆದರೆ ನದಿ, ಸಮುದ್ರಗಳಿಲ್ಲದ, ಮೀನುಗಾರರೇ ಇಲ್ಲದ ಬೆಳಗಾವಿಗೆ 250 ಮನೆಗಳನ್ನು ನೀಡಿ ಮೀನುಗಾರರಿರುವ ನನ್ನ ಕ್ಷೇತ್ರಕ್ಕೆ ಕೇವಲ 10 ಮನೆಗಳನ್ನು ನೀಡಿದೆ. ಈ ಮೂಲಕ ಮೀನುಗಾರರಿಗೆ ರಾಜ್ಯದ ಬಿಜೆಪಿ ಸರಕಾರ ದ್ರೋಹವೆಸಗಿದೆ ಎಂದು ಖಾದರ್ ಹೇಳಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…