ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು ಅಡ್ಕದ ನಿವಾಸಿಯಾದ 16 ವರ್ಷದ ಬಾಲಕಿಯೊಬ್ಬಳು ಏಪ್ರಿಲ್ 12 ರಿಂದ ನಾಪತ್ತೆಯಾಗಿದ್ದಾಳೆ ಎಂದು ವರದಿಯಾಗಿದೆ.
ನಾಪತ್ತೆಯಾದ ಬಾಲಕಿಯನ್ನು ಜಗದೀಶ್ ಪೂಜಾರಿ ಮತ್ತು ಗುಲಾಬಿ ದಂಪತಿಯ ಪುತ್ರಿ ಚೈತನ್ಯ ಎಂದು ಗುರುತಿಸಲಾಗಿದೆ. ಹರೇಕಳದ ರಾಮಕೃಷ್ಣ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಈಕೆ, ಇತ್ತೀಚೆಗಷ್ಟೇ ಪರೀಕ್ಷೆ ಮುಗಿಸಿ ಮನೆಯಲ್ಲಿದ್ದಳು.
ಬಾಲಕಿಯ ತಾಯಿ ಗುಲಾಬಿ ಅವರು ನೀಡಿದ ದೂರಿನ ಪ್ರಕಾರ, ಏಪ್ರಿಲ್ 12 ರಂದು ಬೆಳಿಗ್ಗೆ ಸುಮಾರು 7:30 ಕ್ಕೆ ಸ್ನೇಹಿತರೊಂದಿಗೆ ಪೊಳಲಿ ದೇವಸ್ಥಾನಕ್ಕೆ ಹೋಗುವುದಾಗಿ ತಂದೆಗೆ ತಿಳಿಸಿ ಚೈತನ್ಯ ಮನೆಯಿಂದ ಹೊರಟಿದ್ದಳು. ಆದರೆ, ಸಂಜೆಯಾದರೂ ಆಕೆ ಮನೆಗೆ ಮರಳಿಲ್ಲ. ಸಂಬಂಧಿಕರ ಮತ್ತು ಸ್ನೇಹಿತರ ಮನೆಗಳಲ್ಲಿ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಸಿಗದ ಕಾರಣ, ಅಂತಿಮವಾಗಿ ಪೊಲೀಸ್ ದೂರು ದಾಖಲಿಸಲಾಗಿದೆ.
ಇದನ್ನೂ ಓದಿ:
ಕೊಣಜೆ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 137(2) ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಅಪ್ರಾಪ್ತ ಬಾಲಕಿಯನ್ನು ಪತ್ತೆಹಚ್ಚಲು ಲುಕ್ಔಟ್ ನೋಟಿಸ್ ಹೊರಡಿಸಿದ್ದಾರೆ.
ನಾಪತ್ತೆಯಾದ ಬಾಲಕಿಯ ಚಹರೆ ವಿವರ:
ಹೆಸರು: ಚೈತನ್ಯ
ವಯಸ್ಸು: 16 ವರ್ಷ
ಎತ್ತರ: 5 ಅಡಿ
ದೈಹಿಕ ರಚನೆ: ದಪ್ಪ ಶರೀರ, ಗೋಧಿ ಮೈಬಣ್ಣ
ಧರಿಸಿದ್ದ ಬಟ್ಟೆ: ನೇರಳೆ ಬಣ್ಣದ ಗೌನ್ ಮತ್ತು ಕಪ್ಪು ಕೋಟ್
ತಿಳಿದಿರುವ ಭಾಷೆಗಳು: ಕನ್ನಡ ಮತ್ತು ತುಳು
ಮಾಹಿತಿ ನೀಡಲು ವಿನಂತಿ:
ಚೈತನ್ಯ ಅವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಿದ್ದಲ್ಲಿ ತಕ್ಷಣ ಮಂಗಳೂರು ನಗರ ನಿಯಂತ್ರಣ ಕೊಠಡಿ (0824-2220800) ಅಥವಾ ಕೊಣಜೆ ಪೊಲೀಸ್ ಠಾಣೆ (0824-2220536, 9480802350) ಸಂಪರ್ಕಿಸಲು ಕೋರಲಾಗಿದೆ.
ಇದನ್ನೂ ಓದಿ:
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…