ಮಂಗಳೂರು: 2 ಕೋಟಿ ರೂ. ಮೌಲ್ಯದ ಚಿನ್ನ ವಶ -Vishwanews24

ಮಂಗಳೂರು: ಕಳೆದೊಂದು ದಶಕದ ಅವಧಿಯಲ್ಲಿ ಅತೀ ದೊಡ್ಡ ಮೊತ್ತದ ಚಿನ್ನವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ(ಡಿಆರ್‌ಐ) ಅಧಿಕಾರಿಗಳು ಪತ್ತೆ ಹಚ್ಚಿ ಇಬ್ಬರನ್ನು ಬಂಧಿಸಿದ್ದಾರೆ.

ವಿದೇಶದಿಂದ 2 ಕೋಟಿ ರೂ. ಮೌಲ್ಯದ 5 ಕೆ.ಜಿ. ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ಡಿಆರ್‌ಐ ಅಧಿಕಾರಿಗಳು ಸೋಮವಾರ ಕಾರ್ಯಾಚರಣೆ ನಡೆಸಿ ಚಿನ್ನ ವಶಪಡಿಸಿಕೊಂಡಿದ್ದಾರೆ.

ಉಡುಪಿಯ ಸ್ವರೂಪ್ ಮಿನರಲ್ ರಿಸೋರ್ಸಸ್ ಕಂಪನಿ ನಿರ್ದೇಶಕ ಮನೋಹರ್ ಕುಮಾರ್ ಪೂಜಾರಿ ಮತ್ತು ಮಂಗಳೂರಿನ ಅಶೋಕನಗರ ನಿವಾಸಿ ಲೋಹಿತ್ ಶ್ರೀಯಾನ್ ಬಂಧಿತ ಆರೋಪಿಗಳು.

ಗಣಿ ಉದ್ಯಮದಲ್ಲಿ ಬಳಸುವ ಲೋಹದ ಕನ್ವೆಯರ್ ಡ್ರೈವ್ ಚೈನ್‌ನ ಒಳಭಾಗದಲ್ಲಿರಿಸಿ ಚಿನ್ನ ಕಳ್ಳಸಾಗಣೆ ಮಾಡಿದ್ದರು. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಏರ್ ಕಾರ್ಗೋ ಕಾಂಪ್ಲೆಕ್ಸ್‌ನಲ್ಲಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದ್ದು, ಮನೋಹರ್ ಕುಮಾರ್‌ನನ್ನು ಬೆಂಗಳೂರಿನಲ್ಲಿ ಬಂಧಿಸಿದರೆ, ಲೋಹಿತ್‌ನನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ. ಬೆಂಗಳೂರು ಮತ್ತು ಮಂಗಳೂರು ಡಿಆರ್‌ಐ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದ್ದರು.

ಸ್ವರೂಪ್ ಮಿನರಲ್ ರಿಸೋರ್ಸಸ್ ಕಂಪನಿ ಮೈನಿಂಗ್ ಕನ್ವೆಯರ್ ಡ್ರೈವ್ ಚೈನ್ ಆಮದು ಮಾಡಿಕೊಳ್ಳುತ್ತಿದ್ದು, ಸರಕು ಬಜ್ಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿತ್ತು. ಅದರೊಳಗೆ ಚಿನ್ನ ಅಡಗಿಸಿಟ್ಟು ಸಾಗಾಟ ಮಾಡುತ್ತಿರುವ ಬಗ್ಗೆ ಅಧಿಕಾರಿಗಳಿಗೆ ಲಭಿಸಿದ ಮಾಹಿತಿ ಪ್ರಕಾರ ಸರಕನ್ನು ಸ್ಕ್ಯಾನ್ ಮಾಡಲಾಗಿದ್ದು, ತಾಂತ್ರಿಕ ಸಿಬ್ಬಂದಿ ಮತ್ತು ಲೇಥ್ ಬಳಸಿ ಅದನ್ನು ತೆರೆಯಲಾಯಿತು.

ಮೈನಿಂಗ್ ಕನ್ವೇಯರ್ ಬೆಲ್ಟ್‌ನ ಒಳಭಾಗದಲ್ಲಿ ಐದು ವೃತ್ತಾಕಾರದ ಚಿನ್ನದ ತಟ್ಟೆಗಳನ್ನು ಅಡಗಿಸಿಡಲಾಗಿತ್ತು. ಅವುಗಳಲ್ಲಿ 24 ಕ್ಯಾರಟ್ ಗುಣಮಟ್ಟದ ಒಟ್ಟು 4.995 ಕೆ.ಜಿ. ಚಿನ್ನ ಪತ್ತೆಯಾಗಿದೆ. ಚಿನ್ನ ಕಳ್ಳಸಾಗಣೆಯ ಜಾಲ ಮತ್ತು ಅದರಲ್ಲಿ ಹೂಡಿಕೆ ಮಾಡುತ್ತಿದ್ದವರು ಹಾಗೂ ಈವರೆಗೆ ನಡೆದಿರುವ ಕಳ್ಳಸಾಗಣೆಯ ಒಟ್ಟು ಪ್ರಮಾಣದ ಕುರಿತು ತನಿಖೆ ಮುಂದುವರಿದಿದೆ ಎಂದು ಡಿಆರ್‌ಐ ಉಪ ನಿರ್ದೇಶಕ ಶ್ರೇಯಸ್ ಕೆ.ಎಂ. ತಿಳಿಸಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

3 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

3 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

3 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

3 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

4 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

4 hours ago