ಮಂಗಳೂರು: ಕಳೆದೊಂದು ದಶಕದ ಅವಧಿಯಲ್ಲಿ ಅತೀ ದೊಡ್ಡ ಮೊತ್ತದ ಚಿನ್ನವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ(ಡಿಆರ್ಐ) ಅಧಿಕಾರಿಗಳು ಪತ್ತೆ ಹಚ್ಚಿ ಇಬ್ಬರನ್ನು ಬಂಧಿಸಿದ್ದಾರೆ.
ವಿದೇಶದಿಂದ 2 ಕೋಟಿ ರೂ. ಮೌಲ್ಯದ 5 ಕೆ.ಜಿ. ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ಡಿಆರ್ಐ ಅಧಿಕಾರಿಗಳು ಸೋಮವಾರ ಕಾರ್ಯಾಚರಣೆ ನಡೆಸಿ ಚಿನ್ನ ವಶಪಡಿಸಿಕೊಂಡಿದ್ದಾರೆ.
ಉಡುಪಿಯ ಸ್ವರೂಪ್ ಮಿನರಲ್ ರಿಸೋರ್ಸಸ್ ಕಂಪನಿ ನಿರ್ದೇಶಕ ಮನೋಹರ್ ಕುಮಾರ್ ಪೂಜಾರಿ ಮತ್ತು ಮಂಗಳೂರಿನ ಅಶೋಕನಗರ ನಿವಾಸಿ ಲೋಹಿತ್ ಶ್ರೀಯಾನ್ ಬಂಧಿತ ಆರೋಪಿಗಳು.
ಗಣಿ ಉದ್ಯಮದಲ್ಲಿ ಬಳಸುವ ಲೋಹದ ಕನ್ವೆಯರ್ ಡ್ರೈವ್ ಚೈನ್ನ ಒಳಭಾಗದಲ್ಲಿರಿಸಿ ಚಿನ್ನ ಕಳ್ಳಸಾಗಣೆ ಮಾಡಿದ್ದರು. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಏರ್ ಕಾರ್ಗೋ ಕಾಂಪ್ಲೆಕ್ಸ್ನಲ್ಲಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದ್ದು, ಮನೋಹರ್ ಕುಮಾರ್ನನ್ನು ಬೆಂಗಳೂರಿನಲ್ಲಿ ಬಂಧಿಸಿದರೆ, ಲೋಹಿತ್ನನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ. ಬೆಂಗಳೂರು ಮತ್ತು ಮಂಗಳೂರು ಡಿಆರ್ಐ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದ್ದರು.
ಸ್ವರೂಪ್ ಮಿನರಲ್ ರಿಸೋರ್ಸಸ್ ಕಂಪನಿ ಮೈನಿಂಗ್ ಕನ್ವೆಯರ್ ಡ್ರೈವ್ ಚೈನ್ ಆಮದು ಮಾಡಿಕೊಳ್ಳುತ್ತಿದ್ದು, ಸರಕು ಬಜ್ಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿತ್ತು. ಅದರೊಳಗೆ ಚಿನ್ನ ಅಡಗಿಸಿಟ್ಟು ಸಾಗಾಟ ಮಾಡುತ್ತಿರುವ ಬಗ್ಗೆ ಅಧಿಕಾರಿಗಳಿಗೆ ಲಭಿಸಿದ ಮಾಹಿತಿ ಪ್ರಕಾರ ಸರಕನ್ನು ಸ್ಕ್ಯಾನ್ ಮಾಡಲಾಗಿದ್ದು, ತಾಂತ್ರಿಕ ಸಿಬ್ಬಂದಿ ಮತ್ತು ಲೇಥ್ ಬಳಸಿ ಅದನ್ನು ತೆರೆಯಲಾಯಿತು.
ಮೈನಿಂಗ್ ಕನ್ವೇಯರ್ ಬೆಲ್ಟ್ನ ಒಳಭಾಗದಲ್ಲಿ ಐದು ವೃತ್ತಾಕಾರದ ಚಿನ್ನದ ತಟ್ಟೆಗಳನ್ನು ಅಡಗಿಸಿಡಲಾಗಿತ್ತು. ಅವುಗಳಲ್ಲಿ 24 ಕ್ಯಾರಟ್ ಗುಣಮಟ್ಟದ ಒಟ್ಟು 4.995 ಕೆ.ಜಿ. ಚಿನ್ನ ಪತ್ತೆಯಾಗಿದೆ. ಚಿನ್ನ ಕಳ್ಳಸಾಗಣೆಯ ಜಾಲ ಮತ್ತು ಅದರಲ್ಲಿ ಹೂಡಿಕೆ ಮಾಡುತ್ತಿದ್ದವರು ಹಾಗೂ ಈವರೆಗೆ ನಡೆದಿರುವ ಕಳ್ಳಸಾಗಣೆಯ ಒಟ್ಟು ಪ್ರಮಾಣದ ಕುರಿತು ತನಿಖೆ ಮುಂದುವರಿದಿದೆ ಎಂದು ಡಿಆರ್ಐ ಉಪ ನಿರ್ದೇಶಕ ಶ್ರೇಯಸ್ ಕೆ.ಎಂ. ತಿಳಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…