Featured

ಮಂಗಳೂರು: 2021-22ನೇ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟ – Vishwanews24

ಮಂಗಳೂರು: 2021-22ನೇ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟ – Vishwanews24

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಕಂಬಳ ಸಿದ್ಧತೆ ಭರದಿಂದ ಸಾಗುತ್ತಿದೆ. ಕುದಿ ಕಂಬಳಗಳು ಅಲ್ಲಲ್ಲಿ ನಡೆಯುತ್ತಿದ್ದು, ಈಗ ಕರೆಗಳ ದುರಸ್ತಿ ಕೆಲಸಗಳಿಗೂ ಚಾಲನೆ ನೀಡಲಾಗಿದೆ.

ಮಂಗಳವಾರ ಜಿಲ್ಲಾ ಕಂಬಳ ಸಮಿತಿಯು 2021-22ನೇ ಸಾಲಿನ ಕಂಬಳ ವೇಳಾಪಟ್ಟಿಯನ್ನೂ ಪ್ರಕಟಿಸಿದೆ. ಮಂಗಳೂರಿನಲ್ಲಿ ಸಭೆ ಸೇರಿದ ಕಂಬಳ ಪ್ರಮುಖರು ಸ್ಥಳೀಯ ಸಮಿತಿಗಳ ಮುಖ್ಯಸ್ಥರೊಡನೆ ಸಮಾಲೋಚನೆ ನಡೆಸಿ, ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿ ಕಂಬಳ ನಡೆಸಲು ದಿನಾಂಕ ನಿಗದಿ ಮಾಡಿದ್ದಾರೆ. ಇದರಂತೆ ನ.27ರಿಂದ 2020ರ ಮಾರ್ಚ್ 26ರ ವರೆಗೆ ಒಟ್ಟು 17 ಕಂಬಳ ಕೂಟಗಳನ್ನು ಆಯೋಜಿಸಲು ಉದ್ದೇಶಿಸಲಾಗಿದೆ. ಮೊದಲ ಕಂಬಳ ಮೂಡುಬಿದಿರೆಯಲ್ಲಿ ಹಾಗೂ ಕೊನೆಯ ಕಂಬಳ ವೇಣೂರಿನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ.
ವೇಳಾಪಟ್ಟಿ ಪ್ರಕಟಗೊಂಡಿದ್ದರೂ, ಕೆಲವು ಕಂಬಳಗಳ ದಿನಾಂಕಗಳು ಬದಲಾಗುವ ಸಾಧ್ಯತೆಗಳಿವೆ ಎಂದು ಸಮಿತಿ ಅಧ್ಯಕ್ಷ ಪಿ.ಆರ್.ಶೆಟ್ಟಿ ತಿಳಿಸಿದ್ದಾರೆ.

ಇನ್ನೊಂದೆಡೆ ತಲಪಾಡಿ ಸೂರ್ಯಚಂದ್ರ ಜೋಡುಕರೆ ಕಂಬಳ ಇತಿಹಾಸದ ಪುಟಗಳಿಗೆ ಸೇರುತ್ತಿದೆ. ಜಮೀನು ತಕರಾರಿನಿಂದಾಗಿ ಇಲ್ಲಿ ಈ ವರ್ಷವೂ ಕಂಬಳ ನಡೆಯುತ್ತಿಲ್ಲ. ಕಾಸರಗೋಡಿನ ಪೈವಳಿಕೆ ಕಂಬಳಕ್ಕೆ ದಿನಾಂಕ ನಿಗದಿಯಾಗಿದ್ದರೂ, ಕೇರಳದ ಕೋವಿಡ್-19 ಸ್ಥಿತಿಗತಿಯನ್ನು ಅವಲಂಬಿಸಿದೆ.

ಸಮಿತಿ ಮಹಾಸಭೆ: ಅಕ್ಟೋಬರ್ ಅಂತ್ಯದಲ್ಲಿ ಅಥವಾ ನವೆಂಬರ್ ಮೊದಲ ವಾರದಲ್ಲಿ ಕಂಬಳ ಸಮಿತಿಯ ಮಹಾಸಭೆ ನಡೆಯಲಿದೆ. ಈ ವೇಳೆ ಹೊಸದಾಗಿ ಕಂಬಳ ಸಮಿತಿ ರಚನೆಯಾಗುವ ಅಥವಾ ಹಾಲಿ ಸಮಿತಿಯನ್ನೇ ಮುಂದುವರಿಸುವ ಕುರಿತು ನಿರ್ಣಯವಾಗಲಿದೆ. ಹೊಸದಾಗಿ ಅಸ್ತಿತ್ವಕ್ಕೆ ಬರಲಿರುವ ಕಂಬಳ ಶಿಸ್ತು ಸಮಿತಿಯ ರೂಪುರೇಷೆಯೂ ಇದೇ ವೇಳೆ ಅಂತಿಮಗೊಳ್ಳಲಿದೆ.

ಸಮಿತಿ ಸದಸ್ಯರೊಂದಿಗೆ ಚರ್ಚಿಸಿ ಈ ಬಾರಿ ಕಂಬಳ ಆಯೋಜಿಸುವ ನಿಟ್ಟಿನಲ್ಲಿ ವೇಳಾಪಟ್ಟಿ ಸಿದ್ಧಪಡಿಸಲಾಗಿದೆ. ಒಟ್ಟು 17 ಕಂಬಳ ಕೂಟ ಆಯೋಜನೆಗೊಳ್ಳಲಿದ್ದು, ಅನಿರೀಕ್ಷಿತ ಬದಲಾವಣೆ ಹೊರತುಪಡಿಸಿ ಇದೇ ಅಂತಿಮ ಎನ್ನಬಹುದು.
ಪಿ.ಆರ್.ಶೆಟ್ಟಿ, ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ

ಕಂಬಳ ವೇಳಾಪಟ್ಟಿ:
ನ.27 ಮೂಡುಬಿದಿರೆ
ಡಿ.11 ಹೊಕ್ಕಾಡಿ
ಡಿ.18 ಮಂಗಳೂರು
ಡಿ.26 ಮೂಲ್ಕಿ
ಜ.1 ಕಕ್ಕೆಪದವು
ಜ.8 ಅಡ್ವೆ ನಂದಿಕೂರು
ಜ.16 ಮಿಯ್ಯರು
ಜ.22 ಪುತ್ತೂರು
ಜ.29 ಐಕಳ
ಫೆ.5 ಬಾರಾಡಿ
ಫೆ.12 ಜೆಪ್ಪು
ಫೆ.19 ವಾಮಂಜೂರು
ಫೆ.26 ಪೈವಳಿಕೆ
ಮಾ.5 ಕಟಪಾಡಿ
ಮಾ.12 ಉಪ್ಪಿನಂಗಡಿ
ಮಾ.19 ಬಂಗಾಡಿ
ಮಾ.26 ವೇಣೂರು

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago