Featured

ಮಂಗಳೂರು: 2021-22ನೇ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟ – Vishwanews24

ಮಂಗಳೂರು: 2021-22ನೇ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟ – Vishwanews24

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಕಂಬಳ ಸಿದ್ಧತೆ ಭರದಿಂದ ಸಾಗುತ್ತಿದೆ. ಕುದಿ ಕಂಬಳಗಳು ಅಲ್ಲಲ್ಲಿ ನಡೆಯುತ್ತಿದ್ದು, ಈಗ ಕರೆಗಳ ದುರಸ್ತಿ ಕೆಲಸಗಳಿಗೂ ಚಾಲನೆ ನೀಡಲಾಗಿದೆ.

ಮಂಗಳವಾರ ಜಿಲ್ಲಾ ಕಂಬಳ ಸಮಿತಿಯು 2021-22ನೇ ಸಾಲಿನ ಕಂಬಳ ವೇಳಾಪಟ್ಟಿಯನ್ನೂ ಪ್ರಕಟಿಸಿದೆ. ಮಂಗಳೂರಿನಲ್ಲಿ ಸಭೆ ಸೇರಿದ ಕಂಬಳ ಪ್ರಮುಖರು ಸ್ಥಳೀಯ ಸಮಿತಿಗಳ ಮುಖ್ಯಸ್ಥರೊಡನೆ ಸಮಾಲೋಚನೆ ನಡೆಸಿ, ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿ ಕಂಬಳ ನಡೆಸಲು ದಿನಾಂಕ ನಿಗದಿ ಮಾಡಿದ್ದಾರೆ. ಇದರಂತೆ ನ.27ರಿಂದ 2020ರ ಮಾರ್ಚ್ 26ರ ವರೆಗೆ ಒಟ್ಟು 17 ಕಂಬಳ ಕೂಟಗಳನ್ನು ಆಯೋಜಿಸಲು ಉದ್ದೇಶಿಸಲಾಗಿದೆ. ಮೊದಲ ಕಂಬಳ ಮೂಡುಬಿದಿರೆಯಲ್ಲಿ ಹಾಗೂ ಕೊನೆಯ ಕಂಬಳ ವೇಣೂರಿನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ.
ವೇಳಾಪಟ್ಟಿ ಪ್ರಕಟಗೊಂಡಿದ್ದರೂ, ಕೆಲವು ಕಂಬಳಗಳ ದಿನಾಂಕಗಳು ಬದಲಾಗುವ ಸಾಧ್ಯತೆಗಳಿವೆ ಎಂದು ಸಮಿತಿ ಅಧ್ಯಕ್ಷ ಪಿ.ಆರ್.ಶೆಟ್ಟಿ ತಿಳಿಸಿದ್ದಾರೆ.

ಇನ್ನೊಂದೆಡೆ ತಲಪಾಡಿ ಸೂರ್ಯಚಂದ್ರ ಜೋಡುಕರೆ ಕಂಬಳ ಇತಿಹಾಸದ ಪುಟಗಳಿಗೆ ಸೇರುತ್ತಿದೆ. ಜಮೀನು ತಕರಾರಿನಿಂದಾಗಿ ಇಲ್ಲಿ ಈ ವರ್ಷವೂ ಕಂಬಳ ನಡೆಯುತ್ತಿಲ್ಲ. ಕಾಸರಗೋಡಿನ ಪೈವಳಿಕೆ ಕಂಬಳಕ್ಕೆ ದಿನಾಂಕ ನಿಗದಿಯಾಗಿದ್ದರೂ, ಕೇರಳದ ಕೋವಿಡ್-19 ಸ್ಥಿತಿಗತಿಯನ್ನು ಅವಲಂಬಿಸಿದೆ.

ಸಮಿತಿ ಮಹಾಸಭೆ: ಅಕ್ಟೋಬರ್ ಅಂತ್ಯದಲ್ಲಿ ಅಥವಾ ನವೆಂಬರ್ ಮೊದಲ ವಾರದಲ್ಲಿ ಕಂಬಳ ಸಮಿತಿಯ ಮಹಾಸಭೆ ನಡೆಯಲಿದೆ. ಈ ವೇಳೆ ಹೊಸದಾಗಿ ಕಂಬಳ ಸಮಿತಿ ರಚನೆಯಾಗುವ ಅಥವಾ ಹಾಲಿ ಸಮಿತಿಯನ್ನೇ ಮುಂದುವರಿಸುವ ಕುರಿತು ನಿರ್ಣಯವಾಗಲಿದೆ. ಹೊಸದಾಗಿ ಅಸ್ತಿತ್ವಕ್ಕೆ ಬರಲಿರುವ ಕಂಬಳ ಶಿಸ್ತು ಸಮಿತಿಯ ರೂಪುರೇಷೆಯೂ ಇದೇ ವೇಳೆ ಅಂತಿಮಗೊಳ್ಳಲಿದೆ.

ಸಮಿತಿ ಸದಸ್ಯರೊಂದಿಗೆ ಚರ್ಚಿಸಿ ಈ ಬಾರಿ ಕಂಬಳ ಆಯೋಜಿಸುವ ನಿಟ್ಟಿನಲ್ಲಿ ವೇಳಾಪಟ್ಟಿ ಸಿದ್ಧಪಡಿಸಲಾಗಿದೆ. ಒಟ್ಟು 17 ಕಂಬಳ ಕೂಟ ಆಯೋಜನೆಗೊಳ್ಳಲಿದ್ದು, ಅನಿರೀಕ್ಷಿತ ಬದಲಾವಣೆ ಹೊರತುಪಡಿಸಿ ಇದೇ ಅಂತಿಮ ಎನ್ನಬಹುದು.
ಪಿ.ಆರ್.ಶೆಟ್ಟಿ, ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ

ಕಂಬಳ ವೇಳಾಪಟ್ಟಿ:
ನ.27 ಮೂಡುಬಿದಿರೆ
ಡಿ.11 ಹೊಕ್ಕಾಡಿ
ಡಿ.18 ಮಂಗಳೂರು
ಡಿ.26 ಮೂಲ್ಕಿ
ಜ.1 ಕಕ್ಕೆಪದವು
ಜ.8 ಅಡ್ವೆ ನಂದಿಕೂರು
ಜ.16 ಮಿಯ್ಯರು
ಜ.22 ಪುತ್ತೂರು
ಜ.29 ಐಕಳ
ಫೆ.5 ಬಾರಾಡಿ
ಫೆ.12 ಜೆಪ್ಪು
ಫೆ.19 ವಾಮಂಜೂರು
ಫೆ.26 ಪೈವಳಿಕೆ
ಮಾ.5 ಕಟಪಾಡಿ
ಮಾ.12 ಉಪ್ಪಿನಂಗಡಿ
ಮಾ.19 ಬಂಗಾಡಿ
ಮಾ.26 ವೇಣೂರು

Vishwa News 24

Recent Posts

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

3 hours ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

8 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

8 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

8 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

9 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

9 hours ago