ಮಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ನಡೆದಿರುವ ಕೆಲವು ಚುನಾವಣೆಯ ಫಲಿತಾಂಶವನ್ನು ಗಮನಿಸಿದಾಗ ರಾಜ್ಯದಲ್ಲಿ ಕಾಂಗ್ರೆಸ್ ಪರ ಒಲವಿದ್ದು, ಮುಂದೆ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆಯಲಿದ್ದು, ಆ ಮೂಲಕ 2023ರ ವರ್ಷ ಸಂಪೂರ್ಣ ‘ಕಾಂಗ್ರೆಸ್ ವರ್ಷ’ ಆಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಭವಿಷ್ಯ ನುಡಿದರು.
ನಗರದಲ್ಲಿ ಡಿ.೦4 ರ ಮಂಗಳವಾರ ಮಾಧ್ಯಮದೊಂದಿಗೆ ಮಾತನಾಡಿದ ಅವರು, “ಉಪಚುನಾವಣೆಗಳಲ್ಲಿ, ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಯಲ್ಲಿ ಫಲಿತಾಂಶ ಕಾಂಗ್ರೆಸ್ ಪಕ್ಷಕ್ಕೆ ಪೂರಕವಾಗಿ ಬಂದಿದೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಜನರು ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲಿದ್ದಾರೆ” ಎಂದು ಹೇಳಿದರು
ಇನ್ನು ರಾಮನಗರದಲ್ಲಿ ನಡೆದ ಘಟನೆಗೆ ಪ್ರತಿಕ್ರಿಯಿಸಿದ ಅವರು, “ರಾಮನಗರ ಘಟನೆ ಬಿಜೆಪಿಯ ವಿಶ್ವರೂಪವನ್ನು ತೋರಿಸಿದೆ. ಸಿಎಂ ಹಾಜರಿದ್ದ ಕಾರ್ಯಕ್ರಮದಲ್ಲಿ ಸಚಿವರಾದವರಿಗೆ ಜನರ ಸಮ್ಮುಖದಲ್ಲಿ ಏನು ಮಾತನಾಡಬೇಕು ಎಂಬುದರ ಬಗ್ಗೆ ಅರಿವಿರಬೇಕು. ರಾಮನಗರದಲ್ಲಿ ಬಿಜೆಪಿಗೆ ನೆಲೆ ಇಲ್ಲ. ಹಾಗಾಗಿ ಕೆಟ್ಟ ಚೌಕಟ್ಟಿನಲ್ಲಿ ಕಾಂಗ್ರೆಸ್ನ್ನು ಜನರ ಮುಂದೆ ಬಿಂಬಿಸಲು ಹೊರಟಿದ್ದಾರೆ” ಎಂದು ಆರೋಪಿಸಿದರು.
ಇನ್ನು ಮೇಕೆದಾಟು ವಿಚಾರವಾಗಿ ಮಾತನಾಡಿದ ಅವರು,”ಬಿಜೆಪಿಯೂ ಸಚಿವರುಗಳನ್ನು ಕರೆದು ರಥಯಾತ್ರೆ ನಡೆಸುವುದು, ಚುನಾವಣೆಗಳನ್ನು ನಡೆಸುವುದು ಮಾಡುತ್ತಿದೆ. ಅವರಿಗೆ ಬೇಕಾದಂತೆ ವರ್ತಿಸುವ ಸರ್ಕಾರ, ಕಾಂಗ್ರೆಸ್ ಮಾಡಿದರೆ ಮಾತ್ರ ತಪ್ಪು ಎನ್ನುತ್ತಿದೆ. ಅಧಿಕಾರ ದುರುಪಯೋಗಪಡಿಸಿ ಹೇಗಾದರೂ ಮಾಡಿ ನಮ್ಮ ಪಾದಯಾತ್ರೆಯನ್ನು ತಡೆಯಲು ಯತ್ನಿಸುತ್ತಿದ್ದಾರೆ. ಸಿಎಂ ಕೇಂದ್ರದ ಅನುಮತಿ ಪಡೆದು ಮೇಕೆದಾಟು ಕಾಮಗಾರಿಯನ್ನು ನಾಳೆಯೇ ಆರಂಭಿಸಲಿ, ಆಗ ನಾವು ಅವರನ್ನು ಬೆಂಬಲಿಸುತ್ತೇವೆ” ಎಂದು ಹೇಳಿದರು.
ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ ಜಿಲ್ಲೆಯ ಚಿಂಚಿನಾಡ…
ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…
ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…
ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…
ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…
ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…