Featured

ಮಂಗಳೂರು: 21ನೇ ವಯಸ್ಸಿಗೆ ಪೈಲಟ್‌ ಕನಸು ನನಸಾಗಿಸಿದ ಹನಿಯಾ ಹನೀಫ್ – Vishwanews24

ಮಂಗಳೂರು: 21ನೇ ವಯಸ್ಸಿಗೆ ಪೈಲಟ್‌ ಆಗುವ ಮೂಲಕ ಕರಾವಳಿ ಜಿಲ್ಲೆಗೆ ಹೆಮ್ಮೆ ತಂದ ಹನಿಯಾ ಹನೀಫ್

ಮಂಗಳೂರು: ಮಂಗಳೂರಿನ ಯುವತಿಯೊಬ್ಬಳು ತನ್ನ 21ನೇ ವಯಸ್ಸಿಗೆ ಪೈಲೆಟ್ ಆಗುವ ಮೂಲಕ ಕರಾವಳಿ ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ.

ಮಂಗಳೂರಿನ ಪಾಂಡೇಶ್ವರ ನಿವಾಸಿ ಮುಹಮ್ಮದ್ ಹನೀಫ್ ಹಾಗೂ ನಾಝಿಯಾ ದಂಪತಿಯ ಪುತಿಯಾದ ಹನಿಯಾ ಹನೀಫ್ ಕಮರ್ಷಿಯಲ್ ಪೈಲಟ್ ಲೈಸೆನ್ಸ್ ಪಡೆದು ಅಧಿಕೃತ ಪೈಲಟ್ ಆಗಿದ್ದಾರೆ.

ಇನ್ನು ಹನಿಯಾ ಅವರು 9ನೇ ತರಗತಿವರೆಗೆ ದುಬೈನ ‘ದಿ ಇಂಡಿಯನ್ ಹೈಸ್ಕೂಲ್’ನಲ್ಲಿ ಓದಿದ್ದು. ಬಳಿಕ ಮಂಗಳೂರಿನ ಲೂರ್ಡ್ಸ್ ಸೆಂಟ್ರಲ್ ಸ್ಕೂಲ್‌ನಲ್ಲಿ ಹತ್ತನೇ ತರಗತಿ ಹಾಗೂ ಪಿಯು ಶಿಕ್ಷಣವನ್ನು ಮಹೇಶ್ ಪದವಿ ಪೂರ್ವ ಕಾಲೇಜಿನಲ್ಲಿ ಪೂರ್ತಿಗೊಳಿಸಿದ್ದರು.ಚಿಕ್ಕಂದಿನಿಂದಲೆ ವಿದೇಶಕ್ಕೆ ಹೋಗುತ್ತಿದ್ದ ಕಾರಣ ವಿಮಾನಗಳ ಹಾರಾಟ ಕಂಡು ಪೈಲೆಟ್ ಹಾಗಬೇಕು ಎಂದು ಹನಿಯಾ ದೃಢ ನಿರ್ಧಾರಕ್ಕೆ ಬಂದಿದ್ದರು.

ತನ್ನ ಪಿಯುಸಿ ಶಿಕ್ಷಣದ ಬಳಿಕ ಮೈಸೂರಿನ ಒರಿಯಂಟ್ ಫ್ಲೈಟ್ಸ್ ಏವಿಯೇಷನ್ ಅಕಾಡಮಿಯಲ್ಲಿ ಪೈಲಟ್ ತರಬೇತಿಗೆ ಸೇರಿ ಮೂರೂವರೆ ವರ್ಷ ತರಬೇತಿ ಪಡೆದು,  200 ತಾಸುಗಳ ಕಾಲ ವಿಮಾನ ಹಾರಾಟ ನಡೆಸಿದ ಬಳಿಕ ಕಮರ್ಶಿಯಲ್ ಪೈಲಟ್ ಪರವಾನಿಗೆಯನ್ನು ಹನಿಯಾ ತನ್ನದಾಗಿಸಿಕೊಂಡಿದ್ದಾರೆ.

ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಹನಿಯಾ, ಪೈಲೆಟ್ ಹಾಗಬೇಕೆಂದು‌ ನಾನು ದೃಢ ನಿರ್ಧಾರಕ್ಕೆ ಚಿಕ್ಕವಿರುವಾಗ ಬಂದಿದ್ದೆ. ನಾನು ವಿಮಾನದಲ್ಲಿ ದುಬೈಗೆ ಪ್ರಯಾಣ ಮಾಡುತ್ತಿದ್ದ ಕಾರಣ ನಾನು ಪ್ರೇರಿತಳಾದೆ. ಪೈಲೆಟ್ ತರಬೇತಿ ಸುಲಭವಲ್ಲ, ಅದರಲ್ಲೂ ಮಹಿಳೆಯರಿಗಂತೂ ಈ ರಂಗದಲ್ಲಿ ಪ್ರೋತ್ಸಾಹ ನೀಡಲು ಪೋಷಕರು ಬಹಳ ಹಿಂಜರಿಯುತ್ತಾರೆ. ಆದರೆ ನನಗೆ ನನ್ನ ಪೋಷಕರಿಂದ ಸಿಕ್ಕಿದ ಬೆಂಬಲ ಹಾಗೂ ಪ್ರೋತ್ಸಾಹ ನನಗೆ ಮುಂದುವರಿಯಲು ಸಾಧ್ಯವಾಗಿದೆ ಎಂದರು.

ಇನ್ನು ಹನಿಯಾ ಸಣ್ಣ ವಯಸ್ಸಿನಲ್ಲೇ ನಾನು ಪೈಲಟ್ ಆಗುತ್ತೇನೆ ಎಂದು ಹೇಳುತ್ತಿದ್ದಳು. ಅದಕ್ಕೆ‌ ನಾವು ಬೆಂಬಲ್ ನೀಡಿದ್ದೇವೆ. ಇದೀಗ ಮಗಳು ಗುರಿಯನ್ನು ಯಶಸ್ವಿಯಾಗಿ ತಲುಪಿರುವುದು ಸಂತಸ ತಂದಿದೇ ಎಂದು ಹನಿಯಾ ತಾಯಿ ನಾಝಿಯಾ ಹೇಳಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago