Featured

ಮಂಗಳೂರು:  5 ಗ್ಯಾರಂಟಿ ಜಾರಿಗೊಳಿಸುವ ಮೂಲಕ ದೇಶದಲ್ಲೇ ಕಾಂಗ್ರೆಸ್ ಇತಿಹಾಸ ನಿರ್ಮಿಸಿದೆ : ರಮಾನಾಥ ರೈ – Vishwanews24

ಮಂಗಳೂರು: 5 ಗ್ಯಾರಂಟಿ ಜಾರಿಗೊಳಿಸುವ ಮೂಲಕ ದೇಶದಲ್ಲೇ ಕಾಂಗ್ರೆಸ್ ಇತಿಹಾಸ ನಿರ್ಮಿಸಿದೆ : ರಮಾನಾಥ ರೈ

ಮಂಗಳೂರು: ಮತದಾನದ ಸಂದರ್ಭ ಕೈಬೆರಳಿಗೆ ಹಾಕಿದ್ದ ಶಾಯಿಯ ಗುರುತು ಮಾಸುವ ಮುನ್ನವೇ ಕಾಂಗ್ರೆಸ್ ಐದು ಗ್ಯಾರಂಟಿಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದಿದೆ. ಚುನಾವಣಾ ಪ್ರಚಾರ ಸಂದರ್ಭ ನೀಡಿದ್ದ ಭರವಸೆಯ ‘ಗ್ಯಾರಂಟಿ’ಗಳನ್ನು ಅಧಿಕಾರಕ್ಕೇರಿದ ಎರಡೇ ವಾರದಲ್ಲಿ ಜಾರಿಗೊಳಿಸುವ ಮೂಲಕ ದೇಶದಲ್ಲೇ ಕಾಂಗ್ರೆಸ್ ಇತಿಹಾಸ ನಿರ್ಮಿಸಿದೆ. ಈ ಐತಿಹಾಸಿಕ ಕ್ರಮದಿಂದ ಬಿಜೆಪಿಯು ಸಂಪೂರ್ಣವಾಗಿ ತತ್ತರಿಸಿದೆ ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ರಮಾನಾಥ ರೈ ಹೇಳಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಯಾವ ರಾಜ್ಯದಲ್ಲೂ ಇಂತಹ ಗ್ಯಾರಂಟಿಗಳ ಅನುಷ್ಠಾನವಾಗಿಲ್ಲ. ನಮ್ಮದು ನುಡಿದಂತೆ ನಡೆಯುವ ಸರಕಾರವಾಗಿದೆ. ಇತಿಹಾಸದ ಪುಟದಿಂದ ಈ ದಿಟ್ಟ ಕ್ರಮವನ್ನು ಎಂದಿಗೂ ಅಳಿಸಲಾಗದು. ಚುನಾವಣಾ ಪೂರ್ವದಲ್ಲಿ ಗ್ಯಾರಂಟಿಯ ಬಗ್ಗೆ ಟೀಕೆ ಟಿಪ್ಪಣಿ ಮಾಡುತ್ತಿದ್ದ ಬಿಜೆಪಿಗರು ಕಾಂಗ್ರೆಸ್ ಅಧಿಕಾರಕ್ಕೇರಿದಾಗ ತಕ್ಷಣ ಗ್ಯಾರಂಟಿ ಜಾರಿಗೆ ತನ್ನಿ ಎನ್ನುವ ಮೂಲಕ ದ್ವಂದ ನಿಲುವು ತಾಳಿದ್ದರು. ಇದೀಗ ಕಾಂಗ್ರೆಸ್ ಮೊದಲ ಸಚಿವ ಸಂಪುಟ ಸಭೆಯಲ್ಲೇ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿದೆ. ಇದರಿಂದ ಬಿಜೆಪಿ ಉತ್ತರಿಸಲಾಗದೆ ತತ್ತರಿಸಿದೆ ಎಂದರು.

ಉಚಿತ ಭಾಗ್ಯಗಳನ್ನು ಕೊಡುವುದರಿಂದ ದೇಶ ದಿವಾಳಿಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸಹಿತ ಬಿಜೆಪಿ ನಾಯಕರು ಹೇಳಿಕೊಂಡಿದ್ದರು. ಕಾಂಗ್ರೆಸ್ನ ಹಿರಿಯ ನಾಯಕ ಜನಾರ್ದನ ಪೂಜಾರಿ ಸಾಲಮೇಳ ಮಾಡಿದಾಗಲೂ ಬಿಜೆಪಿಗರು ಟೀಕಿಸಿದ್ದರು. ಉಚಿತ ಅಕ್ಕಿ ಕೊಡುವಾಗಲೂ ಆಕ್ಷೇಪಿಸಿದ್ದರು. ರೈತರ ಸಾಲ ಮನ್ನಾ ಮಾಡಲು ಹಿಂದೇಟು ಹಾಕಿದ್ದ ಬಿಜೆಪಿಗರು ಬಂಡವಾಳ ಶಾಹಿಗಳ ಸಾವಿರಾರು ಕೋಟಿ ರೂ. ಸಾಲವನ್ನು ಮನ್ನಾ ಮಾಡಿದನ್ನು ಮರೆಯಲು ಸಾಧ್ಯವಿಲ್ಲ. ಆರು ತಿಂಗಳೊಳಗೆ ವಿದೇಶದಲ್ಲಿರುವ ಕಪ್ಪು ಹಣ ತರುವೆವು. ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ 15 ಲಕ್ಷ ರೂ. ತುಂಬುವೆವು ಎಂದಿದ್ದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೇರಿ ಒಂಭತ್ತು ವರ್ಷಗಳಾದರೂ ಆ ಭರವಸೆಯನ್ನು ಈಡೇರಿಸಿಲ್ಲ. ಆದರೆ ಮತದಾನದ ಸಂದರ್ಭ ಕೈಬೆರಳಿಗೆ ಹಾಕಿದ್ದ ಶಾಯಿಯ ಗುರುತು ಮಾಸುವ ಮುನ್ನವೇ ಕಾಂಗ್ರೆಸ್ ಐದು ಗ್ಯಾರಂಟಿಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದಿದೆ ಎಂದು ರಮಾನಾಥ ರೈ ಹೇಳಿದರು.

Vishwa News 24

Recent Posts

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

5 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

5 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

7 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

7 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

7 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

8 hours ago