ಮಂಗಳೂರು: 50 ವರ್ಷಗಳಿಂದ ನಗರದ ಪ್ರಸಿದ್ಧ ಲ್ಯಾಂಡ್ ಮಾರ್ಕ್ ಆಗಿದ್ದ, ಮಂಗಳೂರಿಗರಿಗೆ ಹೆಮ್ಮೆಯ ಗುರುತಾಗಿದ್ದ ‘ಜ್ಯೋತಿ ಟಾಕೀಸ್’ ಎಂದು ಜನಪ್ರಿಯವಾಗಿರುವ ಜ್ಯೋತಿ ಚಿತ್ರಮಂದಿರ ಇನ್ನು ಬರೀ ನೆನಪು ಮಾತ್ರ. ಲಾಕ್ಡೌನ್ ಪರಿಣಾಮ ಮುಚ್ಚಲ್ಪಟ್ಟಿದ್ದ ಚಿತ್ರಮಂದಿರವಿನ್ನು ಶಾಶ್ವತವಾಗಿ ಮುಚ್ಚಲಿದೆ. ಇದು ನಗರದ ಸಿನಿ ಪ್ರೇಮಿಗಳಿಗೆ ಅತ್ಯಂತ ದುಃಖದ ಸಂಗತಿ ಎನಿಸಿದೆ. ಏಕೆಂದರೆ ಈ ಚಿತ್ರಮಂದಿರ ಅನೇಕ ಸಿನಿಮಾ ಪ್ರಿಯರಿಗೆ ಅದರಲ್ಲಿಯೂ ವಿಶೇಷವಾಗಿ ತುಳು ಸಿನೆಮಾ ಪ್ರಿಯರ ಅಚ್ಚುಮೆಚ್ಚಿನ ಚಿತ್ರಮಂದಿರವಾಗಿತ್ತು.
ಮೂಲಗಳ ಪ್ರಕಾರ, ಕರ್ನಾಟಕ ಥಿಯೇಟರ್ಸ್ ಯುನಿಟ್ ಲಿಮಿಟೆಡ್ ಮುಂಬೈ ಮೂಲದ ಬಿಲ್ಡರ್ ಜೊತೆ ವಾಣಿಜ್ಯ ಸಂಕೀರ್ಣ ನಿರ್ಮಾಣ ಮಾಡಲು ಒಪ್ಪಂದ ಮಾಡಿಕೊಂಡಿದೆ. ಈ ಒಪ್ಪಂದವನ್ನು ಹಲವಾರು ವರ್ಷಗಳ ಹಿಂದೆ ಮಾಡಲಾಗಿತ್ತು ಆದರೆ ತಾಂತ್ರಿಕ ತೊಂದರೆಯಿಂದ ಇದುವರೆಗೆ ಅದನ್ನು ಕಾರ್ಯರೂಪಕ್ಕೆ ತರಲು ಸಾಧ್ಯವಾಗಲಿಲ್ಲ. ಈಗ, ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಚಿತ್ರಮಂದಿರ ಮುಚ್ಚಿರುವುದರಿಂದ,ಚಿತ್ರಮಂದಿರವನ್ನು ಇನ್ನೆಂದೂ ತೆರೆಯಲಾಗುವುದಿಲ್ಲ ಎಂದು ಹೇಳಲಾಗಿದೆ.. ವಾಣಿಜ್ಯ ಸಂಕೀರ್ಣದ ಕೆಲಸವು ಜನವರಿ ಅಥವಾ ಫೆಬ್ರವರಿ 2021 ರಲ್ಲಿ ಪ್ರಾರಂಭವಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಡಾ.ರಾಜ್ಕುಮಾರ್, ಡಾ.ವಿಷ್ಣುವರ್ಧನ್,ಅಂಬರೀಶ್ ಮತ್ತಿತರರು ಸೇರಿದಂತೆ ಹಲವಾರು ಸ್ಯಾಂಡಲ್ ವುಡ್ ಚಲನಚಿತ್ರ ತಾರೆಯರು ತಮ್ಮ ಚಲನಚಿತ್ರಗಳ ಬಿಡುಗಡೆಯ ಸಮಯದಲ್ಲಿ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು.
ಚಿತ್ರಮಂದಿರಕ್ಕೆ 50 ವರ್ಷಗಳಿಗಿಂತ ಹೆಚ್ಚಿನ ಇತಿಹಾಸವಿದ್ದರೂ, ಕೆಲವು ಮಲ್ಟಿಪ್ಲೆಕ್ಸ್ ಪ್ರದರ್ಶನಗಳನ್ನು ಹೊರತುಪಡಿಸಿ ತುಳು ಚಲನಚಿತ್ರಗಳನ್ನು ಪ್ರದರ್ಶಿಸಿದ ಏಕೈಕ ಚಿತ್ರಮಂದಿರ ಇದು. ಪ್ರಾದೇಶಿಕ ಸಿನೆಮಾದ ಅಭಿಮಾನಿಗಳು ಜ್ಯೋತಿ ಟಾಕೀಸ್ಗೆ ಆದ್ಯತೆ ನೀಡುತ್ತಿದ್ದರು. ಏಕೆಂದರೆ ದು ವಾರಕ್ಕೊಮ್ಮೆ ತುಳು ಮತ್ತು ಕನ್ನಡ ಚಲನಚಿತ್ರಗಳ ಪ್ರದರ್ಶನದ ವೇದಿಕೆಯಾಗಿತ್ತು. ಇಲ್ಲಿಯವರೆಗೆ, ತುಳು ಚಲನಚಿತ್ರಗಳ ನಿರ್ಮಾಪಕರು ಜ್ಯೋತಿ ಚಿತ್ರಮಂದಿರಕ್ಕೆ ಮೊದಲ ಆದ್ಯತೆ ನೀಡುತ್ತಾ ಬಂದಿದ್ದಾರೆ.
ಇನ್ನು ಇತ್ತೀಚೆಗೆ ಮಂಗಳೂರಿನ ಮತ್ತೊಂದು ಚಿತ್ರಮಂದಿರ ಸೆಂಟ್ರಲ್ ಸಹ ಶಾಶ್ವತವಾಗಿ ಬಾಗಿಲು ಮುಚ್ಚಿತ್ತು. ಇದೀಗ ಅದರ ಸಾಲಿಗೆ ಜ್ಯೋತಿ ಟಾಕೀಸ್ ಸಹ ಸೇರುತ್ತಿದೆ. ತುಳು ಚಿತ್ರೋದ್ಯಮದೊಂದಿಗೆ ಸಂಬಂಧ ಹೊಂದಿರುವವರಿಗೆ ಇದು ಒಂದು ಭಾವನಾತ್ಮಕ ಸಂಗತಿ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…