ಮಂಗಳೂರು, : 72 ನೇ ಗಣರಾಜ್ಯೋತ್ಸವವನ್ನು ಜನವರಿ 26 ರ ಮಂಗಳವಾರ ನೆಹರೂ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಭಾರತೀಯ ತ್ರಿವರ್ಣ ಧ್ವಜಾರೋಹಣ ಮಾಡಿದರು.
ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಕೋಟಾ ಶ್ರೀನಿವಾಸ್ ಪೂಜಾರಿ, “2020 ರವರೆಗೆ 43,939 ಫಲಾನುಭವಿಗಳು ಪ್ರಧಾನ ಮಂತ್ರಿ ಮಾತೃ ವಂದನ ಯೋಜನೆಯಡಿ ನೋಂದಾಯಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳಿಗೆ ವಸತಿ ನಿಲಯಗಳ ನಿರ್ಮಾಣಕ್ಕಾಗಿ 19 ತಾಣಗಳನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅನುಮೋದಿಸಿದೆ. 2020-21ರ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಕಾಲನಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಸರ್ಕಾರವು 280 ಲಕ್ಷ ರೂ.ಗಳನ್ನು ಬಿಡುಗಡೆ ಮಾಡಿದೆ. ಪಾಲಿಕೆಯ 100 ಕೋಟಿ ರೂ.ಗಳ ನಗರೋತ್ಥಾನ ಯೋಜನೆಯಡಿ 137 ಕಾಮಗಾರಿಗಳು ಪೂರ್ಣಗೊಂಡಿವೆ ಮತ್ತು ಐದು ಕಾಮಗಾರಿಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದರು.
ಇದನ್ನೂ ಓದಿ : ಚೀನಾದ 59 ಆಯಪ್ ಮೇಲೆ ಶಾಶ್ವತ ನಿಷೇಧ ಹೇರಿದ ಮೋದಿ ಸರ್ಕಾರ -Vishwanews24
“ಮೀನುಗಾರರ ದೋಣಿಗಳಿಗೆ ಡೀಸೆಲ್ ಸಬ್ಸಿಡಿಗಾಗಿ ಸರ್ಕಾರ 915 ಲಕ್ಷ ರೂ. ಒದಗಿಸಿದೆ. ಉಳಿತಾಯ ಮತ್ತು ಪರಿಹಾರಕ್ಕಾಗಿ 2,943 ಲಕ್ಷ ರೂ. ಒದಗಿಸಲಾಗಿದೆ. ವಿಪತ್ತು ಪರಿಹಾರ ನಿಧಿಯಡಿ 16 ಲಕ್ಷ ರೂ. ನೀಡಲಾಗಿದೆ. ಐಸ್ ಪ್ಲಾಂಟ್ಗಳಿಗೆ 56 ಲಕ್ಷ ರೂ. ಸಬ್ಸಿಡಿ ನೀಡಲಾಗಿದೆ. ಪಶ್ಷಿಮವಾಹಿಣಿ ಯೋಜನೆಯಡಿ 1 ಕೆಲಸ ಪೂರ್ಣಗೊಂಡಿದ್ದು, 10 ಕಾಮಗಾರಿಗಳು ಪ್ರಗತಿಯಲ್ಲಿವೆ” ಎಂದು ತಿಳಿಸಿದರು.
ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ್ ಕಾಮತ್, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಮೇಯರ್ ದಿವಾಕರ್ ಪಾಂಡೇಶ್ವರ ಮತ್ತು ಇತರರು ಉಪಸ್ಥಿತರಿದ್ದರು
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…