Featured

ಮಂಗಳೂರು: ‘BSWT” ವರ್ಷದ ವ್ಯಕ್ತಿ ಪ್ರಶಸ್ತಿಗೆ ಚಿತ್ರ ನಟ ಅರವಿಂದ್ ಬೋಳಾರ್ ಆಯ್ಕೆ – Vishwanews24

ಮಂಗಳೂರು: ‘BSWT” ವರ್ಷದ ವ್ಯಕ್ತಿ ಪ್ರಶಸ್ತಿಗೆ ಚಿತ್ರ ನಟ ಅರವಿಂದ್ ಬೋಳಾರ್ ಆಯ್ಕೆ

ಮಂಗಳೂರು: ಭಾರತ್ ಸೋಶಿಯಲ್ ವೆಲ್ಫೇರ್ ಟ್ರಸ್ಟ್ “BSWT” ವರ್ಷದ ವ್ಯಕ್ತಿ ಪ್ರಶಸ್ತಿಗೆ ಚಿತ್ರ ನಟ ಅರವಿಂದ್ ಬೋಳಾರ್ ರವರು ಆಯ್ಕೆಯಾಗಿದ್ದಾರೆ. ಅರವಿಂದ ಬೋಳಾರ್ ಅವರು ತುಳು ನಾಟಕ, ಚಲನಚಿತ್ರ ಮತ್ತು ಯಕ್ಷಗಾನ ರಂಗದ ಪ್ರಮುಖ ಕಲಾವಿದರಲ್ಲಿ ಒಬ್ಬರು. ಕನ್ನಡ, ಕೊಂಕಣಿ ಮಲೆಯಾಳಂ ಭಾಷಾ ಸಿನಿಮಾದಲ್ಲಿ ಅಭಿನಯಿಸುತ್ತಾ ಬ್ಯಾರಿ ಭಾಷಾ ಪಾತ್ರದಲ್ಲಿಯೂ ಸೈ ಎನಿಸಿಕೊಂಡವರು.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬೋಳಾರ್ ಎಂಬಲ್ಲಿ ತಂದೆ ಕೃಷ್ಣಪ್ಪ ಮತ್ತು ತಾಯಿ ಸುಂದರಿಯವರ ಮಗನಾಗಿ ಜನಿಸಿದ ಇವರು ತುಳು ನಾಟಕ ಕಲಾವಿದನಾಗಿ ಸಾಂಸ್ಕೃತಿಕ ರಂಗ ಪ್ರವೇಶಿಸಿದರು. ಹಾಗೂ ತುಳು ಚಲನಚಿತ್ರ ರಂಗದ ಪ್ರಮುಖ ಕಲಾವಿದರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ. ತಮ್ಮ ಕಾಮಿಕ್ ಟೈಮಿಂಗ್ ಮತ್ತು ಪಂಚಿಂಗ್ ಡೈಲಾಗ್‌ಗಳಿಂದ ಅವರು ಕರಾವಳಿ ನಾಟಕ ಉದ್ಯಮದಲ್ಲಿ ಮತ್ತು ತುಳು ಚಿತ್ರರಂಗದಲ್ಲಿ ತಮ್ಮದೇ ಆದ ಸಹಿಯನ್ನು ರಚಿಸಿಕೊಂಡಿರುವ ಇವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯ ಜೊತೆಗೆ “ಸಾಧನೆ ಶಾರದಾರ್” ಮತ್ತು “ತುಳುವ ಮಾಣಿಕ್ಯ” ಎಂಬ ಬಿರುದು ಗಳಿಸಿದ್ದಾರೆ ಅದಲ್ಲದೆ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ೫೦೦ ಕ್ಕೂ ಹೆಚ್ಚು ಗೌರವಗಳು ಸಂದಿವೆ.

ದಾಯ್ಜಿವರ್ಲ್ಡ್ ಮೀಡಿಯಾ ಪ್ರೈವೇಟ್ ಲಿಮಿಟೆಡ್‌ನ ಸಂಸ್ಥಾಪಕ ವಾಲ್ಟರ್ ನಂದಳಿಕೆ ಅವರೊಂದಿಗೆ ಜೋಡಿಯಾಗಿ, ಸಾಮಾನ್ಯ ಜನರ ನೋವುಗಳನ್ನು ಅರಿತು ಅವರಂತೆ ಪಾತ್ರಾಭಿನಯಿಸಿ ದಾಯ್ಜಿವಲ್ಡ್ ಟಿವಿ ಶೋ “ಪ್ರೈವೇಟ್ ಚಾಲೆಂಜ್ ” ಎಂಬ ಹೊಸ ಪ್ರಯೋಗದ ಮುಖಾಂತರ ಜನರ ಸಂಕಷ್ಟಗಳಿಗೆ ಸ್ಪಂದಿಸಿದರು. ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ಇದು ಹೆಚ್ಚು ಪ್ರಯೋಜನಕಾರಿಯದ ಬೆಳವಣಿಗೆಯಾಗಿ ಗುರುತಿಸಲಾಗಿದ್ದು ಸಮಾಜದ ಕಣ್ಣು ತೆರೆಯಿತು.

 

ಅವರ ಸಾಮಾಜಿಕ ಬದ್ಧತೆಯನ್ನು ಪರಿಗಣಿಸಿ ಭಾರತ್ ಸೋಶಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್ ಅವರನ್ನು ವರ್ಷದ ವ್ಯಕ್ತಿಯಾಗಿ ಆಯ್ಕೆ ಮಾಡಿದೆ. ಭಾರತ್ ಸೋಶಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್ ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗ ಈ ಮೂರು ಕೇಂದ್ರೀಯ ವಿಷಯಗಳಲ್ಲಿ ಕಳೆದ ಎಂಟು ವರ್ಷಗಳಿಂದ ಕರ್ನಾಟಕದಾದ್ಯಂತ ವಿವಿಧ ಸೇವಾ ಕಾರ್ಯಗಳನ್ನು ಮಾಡುತ್ತಾ ಪ್ರತೀ ವರ್ಷ ನೂರೈವತ್ತು ಅರ್ಹ ಬಡಾ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ನೀಡುತ್ತಾ ಬಂದಿದೆ. ಪ್ರಸಕ್ತ ವರ್ಷದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಜನವರಿ 26- 2023 ರಂದು ಸಂಜೆ 3.00 ಗಂಟೆಗೆ ಸರಿಯಾಗಿ ಸಹೋದಯ ಸಭಾಂಗಣ ಬಲ್ಮಟ ಮಂಗಳೂರು ಇಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಅರವಿಂದ್ ಬೋಳಾರ್ ಅವರಿಗೆ “ವರ್ಷದ ವ್ಯಕ್ತಿ” ಪ್ರಶಸ್ತಿ ನೀಡಿ ಗೌರವಿಸಲಾಗುವುದೆಂದು ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಆಕಿಫ್ ಇಂಜಿನಿಯರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಡುಪಿ ರಜತಮಹೋತ್ಸವ : ಮಲ್ಪೆ ಕಡಲ ಕಿನಾರೆಯಲ್ಲಿ ಸಮಾರಂಭ – Vishwanews24

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

21 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

21 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago