Featured

ಮಂಗಳೂರು: ‘BSWT” ವರ್ಷದ ವ್ಯಕ್ತಿ ಪ್ರಶಸ್ತಿಗೆ ಚಿತ್ರ ನಟ ಅರವಿಂದ್ ಬೋಳಾರ್ ಆಯ್ಕೆ – Vishwanews24

ಮಂಗಳೂರು: ‘BSWT” ವರ್ಷದ ವ್ಯಕ್ತಿ ಪ್ರಶಸ್ತಿಗೆ ಚಿತ್ರ ನಟ ಅರವಿಂದ್ ಬೋಳಾರ್ ಆಯ್ಕೆ

ಮಂಗಳೂರು: ಭಾರತ್ ಸೋಶಿಯಲ್ ವೆಲ್ಫೇರ್ ಟ್ರಸ್ಟ್ “BSWT” ವರ್ಷದ ವ್ಯಕ್ತಿ ಪ್ರಶಸ್ತಿಗೆ ಚಿತ್ರ ನಟ ಅರವಿಂದ್ ಬೋಳಾರ್ ರವರು ಆಯ್ಕೆಯಾಗಿದ್ದಾರೆ. ಅರವಿಂದ ಬೋಳಾರ್ ಅವರು ತುಳು ನಾಟಕ, ಚಲನಚಿತ್ರ ಮತ್ತು ಯಕ್ಷಗಾನ ರಂಗದ ಪ್ರಮುಖ ಕಲಾವಿದರಲ್ಲಿ ಒಬ್ಬರು. ಕನ್ನಡ, ಕೊಂಕಣಿ ಮಲೆಯಾಳಂ ಭಾಷಾ ಸಿನಿಮಾದಲ್ಲಿ ಅಭಿನಯಿಸುತ್ತಾ ಬ್ಯಾರಿ ಭಾಷಾ ಪಾತ್ರದಲ್ಲಿಯೂ ಸೈ ಎನಿಸಿಕೊಂಡವರು.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬೋಳಾರ್ ಎಂಬಲ್ಲಿ ತಂದೆ ಕೃಷ್ಣಪ್ಪ ಮತ್ತು ತಾಯಿ ಸುಂದರಿಯವರ ಮಗನಾಗಿ ಜನಿಸಿದ ಇವರು ತುಳು ನಾಟಕ ಕಲಾವಿದನಾಗಿ ಸಾಂಸ್ಕೃತಿಕ ರಂಗ ಪ್ರವೇಶಿಸಿದರು. ಹಾಗೂ ತುಳು ಚಲನಚಿತ್ರ ರಂಗದ ಪ್ರಮುಖ ಕಲಾವಿದರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ. ತಮ್ಮ ಕಾಮಿಕ್ ಟೈಮಿಂಗ್ ಮತ್ತು ಪಂಚಿಂಗ್ ಡೈಲಾಗ್‌ಗಳಿಂದ ಅವರು ಕರಾವಳಿ ನಾಟಕ ಉದ್ಯಮದಲ್ಲಿ ಮತ್ತು ತುಳು ಚಿತ್ರರಂಗದಲ್ಲಿ ತಮ್ಮದೇ ಆದ ಸಹಿಯನ್ನು ರಚಿಸಿಕೊಂಡಿರುವ ಇವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯ ಜೊತೆಗೆ “ಸಾಧನೆ ಶಾರದಾರ್” ಮತ್ತು “ತುಳುವ ಮಾಣಿಕ್ಯ” ಎಂಬ ಬಿರುದು ಗಳಿಸಿದ್ದಾರೆ ಅದಲ್ಲದೆ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ೫೦೦ ಕ್ಕೂ ಹೆಚ್ಚು ಗೌರವಗಳು ಸಂದಿವೆ.

ದಾಯ್ಜಿವರ್ಲ್ಡ್ ಮೀಡಿಯಾ ಪ್ರೈವೇಟ್ ಲಿಮಿಟೆಡ್‌ನ ಸಂಸ್ಥಾಪಕ ವಾಲ್ಟರ್ ನಂದಳಿಕೆ ಅವರೊಂದಿಗೆ ಜೋಡಿಯಾಗಿ, ಸಾಮಾನ್ಯ ಜನರ ನೋವುಗಳನ್ನು ಅರಿತು ಅವರಂತೆ ಪಾತ್ರಾಭಿನಯಿಸಿ ದಾಯ್ಜಿವಲ್ಡ್ ಟಿವಿ ಶೋ “ಪ್ರೈವೇಟ್ ಚಾಲೆಂಜ್ ” ಎಂಬ ಹೊಸ ಪ್ರಯೋಗದ ಮುಖಾಂತರ ಜನರ ಸಂಕಷ್ಟಗಳಿಗೆ ಸ್ಪಂದಿಸಿದರು. ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ಇದು ಹೆಚ್ಚು ಪ್ರಯೋಜನಕಾರಿಯದ ಬೆಳವಣಿಗೆಯಾಗಿ ಗುರುತಿಸಲಾಗಿದ್ದು ಸಮಾಜದ ಕಣ್ಣು ತೆರೆಯಿತು.

 

ಅವರ ಸಾಮಾಜಿಕ ಬದ್ಧತೆಯನ್ನು ಪರಿಗಣಿಸಿ ಭಾರತ್ ಸೋಶಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್ ಅವರನ್ನು ವರ್ಷದ ವ್ಯಕ್ತಿಯಾಗಿ ಆಯ್ಕೆ ಮಾಡಿದೆ. ಭಾರತ್ ಸೋಶಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್ ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗ ಈ ಮೂರು ಕೇಂದ್ರೀಯ ವಿಷಯಗಳಲ್ಲಿ ಕಳೆದ ಎಂಟು ವರ್ಷಗಳಿಂದ ಕರ್ನಾಟಕದಾದ್ಯಂತ ವಿವಿಧ ಸೇವಾ ಕಾರ್ಯಗಳನ್ನು ಮಾಡುತ್ತಾ ಪ್ರತೀ ವರ್ಷ ನೂರೈವತ್ತು ಅರ್ಹ ಬಡಾ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ನೀಡುತ್ತಾ ಬಂದಿದೆ. ಪ್ರಸಕ್ತ ವರ್ಷದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಜನವರಿ 26- 2023 ರಂದು ಸಂಜೆ 3.00 ಗಂಟೆಗೆ ಸರಿಯಾಗಿ ಸಹೋದಯ ಸಭಾಂಗಣ ಬಲ್ಮಟ ಮಂಗಳೂರು ಇಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಅರವಿಂದ್ ಬೋಳಾರ್ ಅವರಿಗೆ “ವರ್ಷದ ವ್ಯಕ್ತಿ” ಪ್ರಶಸ್ತಿ ನೀಡಿ ಗೌರವಿಸಲಾಗುವುದೆಂದು ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಆಕಿಫ್ ಇಂಜಿನಿಯರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಡುಪಿ ರಜತಮಹೋತ್ಸವ : ಮಲ್ಪೆ ಕಡಲ ಕಿನಾರೆಯಲ್ಲಿ ಸಮಾರಂಭ – Vishwanews24

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

6 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

7 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

9 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

9 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

10 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

10 hours ago