Featured

ಮಂಗಳೂರು SCDCC BANK –  ದಾಖಲೆಯ 50.49 ಕೋಟಿ ರೂ. ಲಾಭ, ತನ್ನ ಸದಸ್ಯಸಂಘಗಳಿಗೆ 8% ಡಿವಿಡೆಂಡ್‌ ಘೋಷಣೆ – Vishwanews24

SCDCC BANK –  ದಾಖಲೆಯ 50.49 ಕೋಟಿ ರೂ. ಲಾಭ

ತನ್ನ ಸದಸ್ಯ ಸಂಘಗಳಿಗೆ ಶೇ. 8 ಡಿವಿಡೆಂಡ್‌ನ್ನು ಘೋಷಿಸಿದ ಬ್ಯಾಂಕ್‌

ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್‌. ರಾಜೇಂದ್ರ ಕುಮಾರ್‌ ಮಾಹಿತಿ

ಅಪೆಕ್ಸ್‌ ಬ್ಯಾಂಕ್‌ – ಡಿಸಿಸಿ ಬ್ಯಾಂಕ್‌ಗಳ ವಿಲೀನ ಪ್ರಸ್ತಾಪದ ಹಿನ್ನೆಲೆ ಏನು?

ಗುರಿ ಮೀರಿದ ಸಾಧನೆ

ಕೃಷಿ ಸಾಲ ಶೇ.100 ಮರುಪಾವತಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ವೈವಿಧ್ಯಮಯ ಯೋಜನೆಗಳನ್ನು ಕಾರ್ಯಗತಗೊಳಿಸಿ, ಆಧುನಿಕ ಬ್ಯಾಂಕಿಂಗ್‌ ಸೇವೆಯಲ್ಲಿ ರಾಷ್ಟ್ರಕ್ಕೆ ಮಾದರಿಯಾಗಿದೆ. ಸಮಸ್ತ ರೈತಾಪಿ ವರ್ಗದ ಹಾಗೂ ಗ್ರಾಹಕರ ಸೇವೆಯಲ್ಲಿ ಜನ ಮನ್ನಣೆ ಗಳಿಸಿಕೊಂಡಿರುವ ಎಸ್‌ಸಿಡಿಸಿಸಿ ಬ್ಯಾಂಕ್‌ ಜನಸ್ನೇಹಿ ಬ್ಯಾಂಕ್‌ ಎನ್ನುವ ಪ್ರೀತಿ ವಿಶ್ವಾಸಕ್ಕೆ ಪಾತ್ರವಾಗಿದೆ. 2021-22ನೇ ಸಾಲಿನಲ್ಲಿ ಬ್ಯಾಂಕ್‌ ಸಾರ್ವಕಾಲಿಕ ಗರಿಷ್ಠ 50.49 ಕೋಟಿ ರೂ. ಲಾಭ ಗಳಿಸಿ ತನ್ನ ಸದಸ್ಯ ಸಂಘಗಳಿಗೆ ಶೇ. 8 ಡಿವಿಡೆಂಡ್‌ನ್ನು ಘೋಷಿಸಲಾಗಿದೆ ಎಂದು ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್‌. ರಾಜೇಂದ್ರ ಕುಮಾರ್‌ ತಿಳಿಸಿದ್ದಾರೆ.
ಕ್ರೇಜಿ ಎಲೆಕ್ಟ್ರಾನಿಕ್ಸ್‌ ಡೇನಲ್ಲಿ ಭಾರಿ ರಿಯಾಯಿತಿ ಸೇಲ್‌! ಅಮೆಜಾನ್‌ನಲ್ಲಿ ಮಾತ್ರ!

ಎಸ್‌ಸಿಡಿಸಿಸಿ ಬ್ಯಾಂಕ್‌ನ ಸಭಾಭವನದಲ್ಲಿ ಶುಕ್ರವಾರ ನಡೆದ ಬ್ಯಾಂಕ್‌ನ 108ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಹಕಾರ ತತ್ವದ ಮೂಲ ಆಶಯಕ್ಕೆ ಧಕ್ಕೆ ಬಾರದ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಸ್‌ಸಿಡಿಸಿಸಿ ಬ್ಯಾಂಕ್‌ ಸಾಧನೆಯ 108 ವರ್ಷಗಳನ್ನು ಪೂರೈಸಿ ಅಭಿವೃದ್ಧಿಯ ಮುಂಚೂಣಿಯಲ್ಲಿದೆ. ವರದಿ ವರ್ಷದಲ್ಲಿ ಬ್ಯಾಂಕ್‌ ಸಾಧಿಸಿದ ಯಶಸ್ಸು ಅಭೂತಪೂರ್ವವಾದದ್ದು. ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ದಿನೇ ದಿನೇ ಸ್ಪರ್ಧೆಯನ್ನು ಎದುರಿಸಿದರೂ ಬ್ಯಾಂಕ್‌ ಅಭಿವೃದ್ಧಿಯ ಪಥವನ್ನು ಕಂಡು ದೇಶದ ಅಗ್ರಮಾನ್ಯ ಸಹಕಾರಿ ಬ್ಯಾಂಕ್‌ ಎನಿಸಿಕೊಂಡಿದೆ ಎಂದರು.

ಅಪೆಕ್ಸ್‌ ಬ್ಯಾಂಕ್‌ – ಡಿಸಿಸಿ ಬ್ಯಾಂಕ್‌ಗಳ ವಿಲೀನ ಪ್ರಸ್ತಾಪದ ಹಿನ್ನೆಲೆ ಏನು? ಲಾಭವೇನು?

ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಕೋರ್‌ ಬ್ಯಾಂಕಿಂಗ್‌ನಂತಹ ಉನ್ನತ ಸೇವೆಯು ಬ್ಯಾಂಕಿನ 111 ಶಾಖೆಗಳಲ್ಲಿ ದೊರೆಯುತ್ತಿದೆ. ವರದಿ ವರ್ಷದಲ್ಲಿ ಮೊಬೈಲ್‌ ಆ್ಯಪ್‌, ಟ್ಯಾಬ್‌ ಬ್ಯಾಂಕಿಂಗ್‌ ವ್ಯವಸ್ಥೆಯನ್ನು ಬ್ಯಾಂಕ್‌ ಗ್ರಾಹಕರಿಗೆ ಪರಿಚಯಿಸಿದೆ. ಮುಂದಿನ ದಿನಗಳಲ್ಲಿ ಇಂಟರ್‌ ಬ್ಯಾಂಕಿಂಗ್‌ ಮೊಬೈಲ್‌ ಪೇಮೆಂಟ್‌ ಸಿಸ್ಟಮ್‌ ಯೋಜನೆಯನ್ನು ಹಾಗೂ ಇಂಟರ್‌ ಬ್ಯಾಂಕಿಂಗ್‌ ಸೇವೆಯನ್ನು ರೂಪಿಸಲು ಬ್ಯಾಂಕ್‌ ಮುಂದಾಗಿದೆ. ಏಕರೂಪದ ತಂತ್ರಾಂಶವನ್ನು ಕಾರ್ಯರೂಪಕ್ಕೆ ತರುವ ಉದ್ದೇಶದಿಂದ ಎಲ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಕಾಮನ್‌ ಸಾಫ್ಟ್‌ವೇರ್‌ನ್ನು ಅಳವಡಿಸುವ ಕಾರ್ಯಯೋಜನೆ ಪ್ರಗತಿಯಲ್ಲಿದೆ ಎಂದು ಅವರು ತಿಳಿಸಿದರು.

ಗುರಿ ಮೀರಿದ ಸಾಧನೆ

ಬ್ಯಾಂಕ್‌ ವರದಿ ವರ್ಷದಲ್ಲಿ ಒಟ್ಟು 11,608.04 ಕೋಟಿ ರೂ. ವ್ಯವಹಾರ ಸಾಧಿಸುವ ಮೂಲಕ ಗುರಿ ಮೀರಿದ ಸಾಧನೆಗೈದಿದೆ. ವಾಣಿಜ್ಯ ಬ್ಯಾಂಕ್‌ಗಳಲ್ಲಿ ಠೇವಣಾತಿ ಸಂಗ್ರಹಣೆಯಲ್ಲಿ ಪೈಪೋಟಿ ಇದ್ದರೂ ಬ್ಯಾಂಕ್‌ 111 ಶಾಖೆಗಳ ಮೂಲಕ ಒಟ್ಟು 5,651.17 ಕೋಟಿ ರೂ. ಠೇವಣಿ ಸಂಗ್ರಹಿಸಿ, ಅತೀ ಹೆಚ್ಚು ಠೇವಣಿ ಸಂಗ್ರಹಿಸಿದ ರಾಜ್ಯದ ಪ್ರಥಮ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಎನ್ನುವ ಕೀರ್ತಿಗೆ ಪಾತ್ರವಾಗಿದೆ. ಬ್ಯಾಂಕ್‌ ಆರ್ಥಿಕ ವರ್ಷದಲ್ಲಿ ಸೇವಾ ಬದ್ಧತೆ ಮೆರೆದು 4,516.63 ಕೋಟಿ ರೂ. ಮುಂಗಡ ನೀಡಿದೆ. 1031 ಸಹಕಾರಿ ಸಂಘಗಳು ಬ್ಯಾಂಕಿಗೆ ಸದಸ್ಯರಾಗಿದ್ದು ಪಾಲು ಬಂಡವಾಳ 275.98 ಕೋಟಿ ರೂ., ಬ್ಯಾಂಕಿನ ದುಡಿಯುವ ಬಂಡವಾಳ 8,668.90 ಕೋಟಿ ರೂ., ಬ್ಯಾಂಕ್‌ 2,30.34 ಕೋಟಿ ರೂ. ನಾನಾ ನಿಧಿಗಳನ್ನು ಹೊಂದಿದೆ ಎಂದು ಅವರು ತಿಳಿಸಿದರು.

ಕೃಷಿ ಸಾಲ ಶೇ.100 ಮರುಪಾವತಿ

ಬ್ಯಾಂಕ್‌ ವರದಿ ವರ್ಷದಲ್ಲಿನೀಡಿದ ಎಲ್ಲ ಕೃಷಿ ಸಾಲಗಳು ಶೇಕಡಾ ನೂರರ ಮರುಪಾವತಿಯನ್ನು ಕಂಡಿದೆ. ಇಂತಹ ಸಾಧನೆಯನ್ನು ಬ್ಯಾಂಕ್‌ ಕಳೆದ 27 ವರ್ಷಗಳಿಂದ ನಿರಂತರವಾಗಿ ಮಾಡಿರುವುದು ರಾಷ್ಟ್ರೀಯ ದಾಖಲೆಯಾಗಿದೆ. ವರದಿ ವರ್ಷದಲ್ಲಿ ಕೃಷಿಕರು ಅತ್ಯಂತ ಸಂಕಷ್ಟ ಪರಿಸ್ಥಿತಿಯಲ್ಲೂ ಕೃಷಿ ಸಾಲವನ್ನು ಮರುಪಾವತಿಸಿ ಅಭಿನಂದನೆಗೆ ಪಾತ್ರರಾಗಿದ್ದಾರೆ ಎಂದರು.

ಸ್ವಸಹಾಯ ಗುಂಪುಗಳ ಸಂಘಟನೆಯಲ್ಲೂ ಬ್ಯಾಂಕ್‌ ಮುಂಚೂಣಿಯಲ್ಲಿದೆ. ಈ ಬ್ಯಾಂಕ್‌ ಒಟ್ಟು 33,306 ಸ್ವಸಹಾಯ ಗುಂಪುಗಳನ್ನು ನಾನಾ ಸಹಕಾರ ಸಂಘಗಳ ಜೋಡಣೆಯ ಮೂಲಕ ರಚಿಸಿಕೊಂಡಿದೆ. ಈ ಗುಂಪುಗಳ ಒಟ್ಟು ಉಳಿತಾಯ 120.85 ಕೋಟಿ ರೂ. ಆಗಿದೆ. ಒಟ್ಟು 32,821 ಸ್ವಸಹಾಯ ಗುಂಪುಗಳಿಗೆ ಸಾಲ ಸಂಯೋಜಿಸಲಾಗಿದೆ.

ಅಪೆಕ್ಸ್‌/ನಬಾರ್ಡ್‌ ಪ್ರಶಸ್ತಿ

ಬ್ಯಾಂಕ್‌ಗೆ 19 ಬಾರಿ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್‌ ಬ್ಯಾಂಕ್‌ ಪ್ರಶಸ್ತಿ ದೊರೆತ್ತಿರುವುದು ಬ್ಯಾಂಕ್‌ನ ಕಾರ್ಯಸಾಧನೆಗೆ ಸಂದ ಪುರಸ್ಕಾರ. ಸ್ವಸಹಾಯ ಗುಂಪುಗಳ ನಿರ್ವಹಣೆಗೂ 18 ಬಾರಿ ನಬಾರ್ಡ್‌ ಪ್ರಶಸ್ತಿ ದೊರೆತಿದೆ. ವರದಿ ವರ್ಷದಲ್ಲಿ ಬ್ಯಾಂಕಿನ ಸರ್ವಾಂಗೀಣ ಸಾಧನೆಗಾಗಿ ಪ್ರತಿಷ್ಠಿತ ಬ್ಯಾಂಕೋ ಬ್ಲೂರಿಬ್ಬನ್‌- 2021 ಪ್ರಶಸ್ತಿ ಲಭಿಸಿರುವುದಲ್ಲದೆ, 2021-22ನೇ ಸಾಲಿನಲ್ಲಿ ಅಟಲ್‌ ಪಿಂಚಣಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಬ್ಯಾಂಕಿಗೆ ಎಪಿವೈ ರಾಷ್ಟ್ರೀಯ ಪ್ರಶಸ್ತಿ ಬಂದಿದೆ ಎಂದರು.

ಕಣ್ಣಿಗೆ ಬಟ್ಟೆ ಕಟ್ಟಿಕೊಂಡ ಕಟಪಾಡಿ ಪಂಚಾಯತ್ ಅಧಿಕಾರಿಗಳು vishwanews24

ಪ್ರಶಸ್ತಿ ಪುರಸ್ಕಾರ

ಈ ಸಂದರ್ಭದಲ್ಲಿ 2021-22ನೇ ಸಾಲಿನಲ್ಲಿ ಶೇ. 100ರ ವಸೂಲಾತಿಯಲ್ಲಿ ಸಾಧನೆಗೈದ 14 ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳಿಗೆ, ಲೆಕ್ಕ ಪರಿಶೋಧನಾ ‘ಎ’ ವರ್ಗ ಮತ್ತು ‘ಬಿ’ ವರ್ಗದ ಅತ್ಯುತ್ತಮ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳಲ್ಲಿ ಆಯ್ದ ತಲಾ 3 ಸಂಘಗಳಿಗೆ ಜಿಲ್ಲಾ ಬ್ಯಾಂಕ್‌ನ ಪ್ರಶಸ್ತಿ ಪ್ರದಾನ ಮಾಡಲಾಯಿತು.

2021-22ನೇ ಸಾಲಿನ ಜಿಲ್ಲಾ ಬ್ಯಾಂಕಿನ ಪ್ರೋತ್ಸಾಹಕ ಪ್ರಶಸ್ತಿಯನ್ನು 108 ಸಹಕಾರಿ ಸಂಘಗಳು, 2020-21ನೇ ಸಾಲಿನ ಅಪೆಕ್ಸ್‌ ಬ್ಯಾಂಕಿನ ಪ್ರಶಸ್ತಿಯನ್ನು 10 ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ಪಡೆದಿವೆ. 2021-22ನೇ ಸಾಲಿನ ಪತ್ತಿನ ಸಹಕಾರಿ ಬ್ಯಾಂಕ್‌ ಪ್ರಶಸ್ತಿಯನ್ನು 9 ಪತ್ತಿನ ಸಹಕಾರಿ ಬ್ಯಾಂಕ್‌ಗಳಿಗೆ ಮತ್ತು ಪಟ್ಟಣ ಸಹಕಾರಿ ಬ್ಯಾಂಕುಗಳಿಗೆ ನೀಡುವ ಪ್ರಶಸ್ತಿಯನ್ನು 3 ಪಟ್ಟಣ ಸಹಕಾರಿ ಬ್ಯಾಂಕುಗಳಿಗೆ, ಹಾಲು ಉತ್ಪಾದಕರ ಸಹಕಾರಿ ಸಂಘಗಳ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯಿಂದ ತಲಾ 6 ಸಂಘಗಳು ಪ್ರಶಸ್ತಿಯನ್ನು ಪಡೆದಿವೆ. ಮಹಿಳಾ ಹಾಲು ಉತ್ಪಾದಕರ ಸಂಘಗಳ ಪೈಕಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯಿಂದ ತಲಾ 3 ಸಂಘಗಳಿಗೆ, ವಿವಿಧೋದ್ದೇಶ ಸಹಕಾರ ಸಂಘಗಳಿಗೆ ನೀಡುವ ಪ್ರಶಸ್ತಿಯನ್ನು 21 ಸಹಕಾರಿ ಸಂಘಗಳು ಸ್ವೀಕರಿಸಿಕೊಂಡಿವೆ.

ಎಸ್‌ಸಿಡಿಸಿಸಿ ಬ್ಯಾಂಕ್‌ನ ಸಿಬ್ಬಂದಿ ಹಾಗೂ ಪ್ರಾಥಮಿಕ ಸಹಕಾರಿ ಸಂಘಗಳ 19 ಮಂದಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ನಿವೃತ್ತಿ ಹೊಂದಿದ್ದು ಅವರಿಗೆ ಬ್ಯಾಂಕ್‌ನಿಂದ ತಲಾ 50 ಸಾವಿರ ರೂ. ನೀಡಿ ಗೌರವಿಸಲಾಯಿತು. ಬ್ಯಾಂಕಿನ ಪ್ರಗತಿಯಲ್ಲಿ ಗುರಿ ಮೀರಿದ ಸಾಧನೆಗೈದ 12 ಶಾಖಾ ವ್ಯವಸ್ಥಾಪಕರುಗಳಿಗೆ ಪ್ರಶಂಸನಾ ಪತ್ರ ಹಾಗೂ ಪ್ರೋತ್ಸಾಹಧನವನ್ನು ನೀಡಿ ಅಭಿನಂದಿಸಲಾಯಿತು.

ಮಂಗಳೂರು: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಹೃದಯಾಘಾತದಿಂದ ಸಾವು – Vishwanews24

ಸಭೆಯಲ್ಲಿ ಬ್ಯಾಂಕ್‌ನ ಉಪಾಧ್ಯಕ್ಷ ವಿನಯ ಕುಮಾರ್‌ ಸೂರಿಂಜೆ, ನಿರ್ದೇಶಕರಾದ ಬಿ. ನಿರಂಜನ್‌, ಟಿ.ಜಿ. ರಾಜಾರಾಮ್‌ ಭಟ್‌, ಭಾಸ್ಕರ್‌ ಎಸ್‌. ಕೋಟ್ಯಾನ್‌, ದೇವಿ ಪ್ರಸಾದ್‌ ಶೆಟ್ಟಿ ಬೆಳಪು, ಎಂ. ವಾದಿರಾಜ ಶೆಟ್ಟಿ, ರಾಜು ಪೂಜಾರಿ, ಶಶಿಕುಮಾರ್‌ ರೈ ಬಿ., ಎಸ್‌.ಬಿ. ಜಯರಾಮ ರೈ, ಮೋನಪ್ಪ ಶೆಟ್ಟಿ ಎಕ್ಕಾರು, ಕೆ. ಹರಿಶ್ಚಂದ್ರ, ಎಂ. ಮಹೇಶ್‌ ಹೆಗ್ಡೆ, ಕೆ. ಜೈರಾಜ್‌ ಬಿ.ರೈ, ಬಿ. ಅಶೋಕ್‌ ಕುಮಾರ್‌ ಶೆಟ್ಟಿ, ಸದಾಶಿವ ಉಳ್ಳಾಲ್‌, ಬಿ. ರಾಜೇಶ್‌ ರಾವ್‌, ಉಭಯ ಜಿಲ್ಲೆಗಳ ಸಹಕಾರಿ ಸಂಘಗಳ ಉಪನಿಬಂಧಕರಾದ ಪ್ರವೀಣ್‌ ಬಿ. ನಾಯಕ್‌ ಹಾಗೂ ಲಕ್ಷ್ಮೀನಾರಾಯಣ, ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಹಕಾರಿ ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ ಕೆ.ಪಿ., ದಕ್ಷಿಣ ಕನ್ನಡ ಮೀನು ಮಾರಾಟ ಸಹಕಾರ ಮಹಾಮಂಡಳದ ಅಧ್ಯಕ್ಷ ಯಶ್‌ಪಾಲ್‌ ಸುವರ್ಣ, ಉಭಯ ಜಿಲ್ಲೆಗಳ ಸಹಕಾರಿ ಯೂನಿಯನ್‌ ಅಧ್ಯಕ್ಷರಾದ ಜಯಕರ್‌ ಶೆಟ್ಟಿ ಇಂದ್ರಾಳಿ, ಪ್ರಸಾದ್‌ ಕೌಶಲ್‌ ಶೆಟ್ಟಿ, ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಬಿ., ಮಹಾ ಪ್ರಬಂಧಕ ಗೋಪಿನಾಥ್‌ ಭಟ್‌ ಹಾಗೂ ಬ್ಯಾಂಕ್‌ನ ಅಧಿಕಾರಿಗಳು ಉಪಸ್ಥಿತರಿದ್ದರು.

ಬ್ಯಾಂಕ್‌ನ ನಿರ್ದೇಶಕ ಟಿ.ಜಿ. ರಾಜಾರಾಮ್‌ ಭಟ್‌ ಸ್ವಾಗತಿಸಿದರು. ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಬಿ. ವಂದಿಸಿದರು. ಮಹಾ ಪ್ರಬಂಧಕ ಗೋಪಿನಾಥ್‌ ಭಟ್‌ ಕಾರ್ಯಕ್ರಮ ನಿರೂಪಿಸಿದರು.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

7 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

7 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

7 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

8 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

9 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

9 hours ago