ಮಂಗಳೂರು, : ಹಿಂದೆ ಎಸ್ಎಸ್ಎಲ್ ಸಿ, ಪಿಯುಸಿ ಫಲಿತಾಂಶ ಬರುವ ವೇಳೆ ಅವಿಭಜಿತ ದ.ಕ.ಜಿಲ್ಲೆ ಮೇಲುಗೈ ಎಂದು ಪತ್ರಿಕೆಯಲ್ಲಿ ಬರುತ್ತಿತ್ತು. ಆದರೆ ಇದೀಗ ವಿದ್ಯಾರ್ಥಿಗಳ ಫಲಿತಾಂಶವು 20ನೇ ಸ್ಥಾನಕ್ಕೆ ಕುಸಿದಿದೆ.
ಇದಕ್ಕೆ ವಿದ್ಯಾರ್ಥಿಗಳ ಮನಸ್ಸಿನಲ್ಲಿ ವಿಷ ಬೀಜ ಬಿತ್ತಿರುವುದೇ ಕಾರಣ. ಆದ್ದರಿಂದ ಎಲ್ಲರೂ ಎಚ್ಚರವಹಿಸಿ ಮುಂದಕ್ಕೆ ಹೀಗಾಗದಂತೆ ನೋಡಿಕೊಳ್ಳಬೇಕಿದೆ ಎಂದು ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದರು.
ನಕಲಿ ದೇಶ ಭಕ್ತರು ಮಕ್ಕಳನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ. ದೇಶದ ಉನ್ನತಿಗಾಗಿ ಮತ್ತೆ ಶಿಕ್ಷಣಕ್ಕೆ ಆದ್ಯತೆ ನೀಡಿ ಮರಳಿ ನಂ.1 ಸ್ಥಾನಕ್ಕೆ ಕರಾವಳಿ ಜಿಲ್ಲೆಗಳನ್ನು ಕೊಂಡೊಯ್ಯಬೇಕಿದೆ ಎಂದರು.
ದಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ವತಿಯಿಂದ ನಗರದ ಬೋಳಾರದ ಶಾದಿಮಹಲ್ ನಲ್ಲಿ ನಡೆದ ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿದ ಅವರು, ದ.ಕ.ಜಿಲ್ಲೆಯಲ್ಲಿ ನಕಲಿ ದೇಶ ಭಕ್ತರು ದೇಶಭಕ್ತಿಯ ಬಗ್ಗೆ ಮಾತನಾಡುತ್ತಾರೆ.
ಕೇವಲ ಒಂದೇ ಧರ್ಮದವರು ಈ ದೇಶಕ್ಕೆ ಕೊಡುಗೆ ಕೊಟ್ಟಿಲ್ಲ. ಸಾವಿತ್ರಿ ಬಾಯಿ ಪುಲೇ, ಫಾತಿಮಾ ಶೇಖ್ ಅವರು ದೇಶದ ಹೆಣ್ಣುಮಕ್ಕಳಿಗೆ ಶಿಕ್ಷಣ ಕೊಡಲೆಂದು 18ನೇ ಶತಮಾನದಲ್ಲಿಯೇ ಹೋರಾಟ ಮಾಡಿದ್ದಾರೆ. ಇವರು ಯಾವುದೇ ಆಸೆ-ಆಕಾಂಕ್ಷೆಯನ್ನಿರಿಸಿ, ಧರ್ಮದ ಹೆಸರಿನಲ್ಲಿ ಈ ಹೋರಾಟವನ್ನು ಮಾಡಿಲ್ಲ. ಎಲ್ಲರೂ ಸಾಕ್ಷರತಾರಾಗಬೇಕೆಂದು ಈ ಹೋರಾಟ ಮಾಡಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…