ಉಡುಪಿ

ಮಂಗಳೂರು To ಮಣಿಪುರ : ಪರಿಸರ ಜಾಗೃತಿ ಮೂಡಿಸಲು 6 ಸಾವಿರ ಕಿ.ಮೀ. ಸೈಕಲ್ ಪಯಣ ಆರಂಭಿಸಿದ ಕುಡ್ಲದ ಯುವಕ ಶ್ರವಣ್ ಕುಮಾರ್ -Vishwanews24

ಮಂಗಳೂರು To ಮಣಿಪುರ : ಪರಿಸರ ಜಾಗೃತಿ ಮೂಡಿಸಲು 6 ಸಾವಿರ ಕಿ.ಮೀ. ಸೈಕಲ್ ಪಯಣ ಆರಂಭಿಸಿದ ಕುಡ್ಲದ ಯುವಕ ಶ್ರವಣ್ ಕುಮಾರ್ -Vishwanews24

ಉಡುಪಿ : ಪರಿಸರ ಜಾಗೃತಿ, ಮಿಯಾವಾಕಿ ಅರಣ್ಯ ಸಂಪತ್ತು ಬೆಳೆಸುವುದು ಮತ್ತು ಫಾರ್ಮಾ ಕಲ್ಚರ್ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಕುಡ್ಲದ ಯುವಕ ಶ್ರವಣ್ ಕುಮಾರ್ ಮಂಗಳೂರಿನಿಂದ ಮಣಿಪುರದವರೆಗೆ ಫೆಡಲ್ ಫಾರ್ ಗ್ರೀನ್ ಎಂಬ ಸಂಕಲ್ಪದೊಂದಿಗೆ 6,000 ಕಿ.ಮೀ. ದೂರವರೆಗಿನ ಸೈಕಲ್ ಪಯಣವನ್ನು ಹಮ್ಮಿಕೊಂಡು ಯುವಜನರಿಗೆ ಸ್ಪೂರ್ತಿಯಾಗುವ ಪ್ರಯತ್ನ ಮಾಡಿದ್ದಾರೆ.

ಹಸಿರು ಕ್ರಾಂತಿಯ ಸಂಕಲ್ಪ ತೊಟ್ಟಿರುವ ಜೇಸಿಐ ಮಂಗಳೂರು ಲಾಲ್‌ಭಾಗ್‌ನ ಸದಸ್ಯ ಮತ್ತು ಸ್ವತಃ ಸೈಕಲಿಸ್ಟ್ ಆಗಿರುವ ಗುರುಪುರ ನಿವಾಸಿ ಶ್ರವಣ್ ಕುಮಾರ್ ಜನರಲ್ಲಿ ಪರಿಸರದ ಕುರಿತಾಗಿ ಜಾಗೃತಿ ಮೂಡಿಸುವುದರೊಂದಿಗೆ ಗಿಡ ಮರಗಳನ್ನು ಬೆಳೆಸಿ ಎಂಬ ಘೋಷಣೆಯೊಂದಿಗೆ ಪೆಡಲ್ ಫಾರ್ ಗ್ರೀನ್ ಎಂಬ ಹೆಸರಿನಲ್ಲಿ ಸೈಕಲ್ ಪಯಣವನ್ನು ಹಮ್ಮಿಕೊಂಡಿದ್ದು, ಮಾ. 15ರಂದು ಮಂಗಳೂರಿನಲ್ಲಿ ಚಾಲನೆ ನೀಡಲಾಗಿತ್ತು.

10 ರಾಜ್ಯಗಳಲ್ಲಿ ಸಂಚಾರ: ಆರಂಭದಲ್ಲಿ ಪ್ರತೀ ದಿನ 50 ರಿಂದ 60 ಕಿ. ಮೀ. ಸೈಕಲ್ ಸಂಚಾರ ನಡೆಯಲಿದ್ದು, ನಂತರ ವೇಗದ ಮಿತಿ ಹೆಚ್ಚಲಿದೆ. ಸೋಮವಾರ ಸಂಜೆ ಕಾಪುವಿನವರೆಗೆ ಸಾಗಿ ಬಂದಿರುವ ಸೈಕಲ್ ಪಯಣವು ಮಂಗಳವಾರ ಕಾಪುವಿನಿಂದ ಕುಂದಾಪುರಕ್ಕೆ ತೆರಳಿದೆ. ಮಂಗಳೂರಿನಿಂದ ಆರಂಭಗೊಂಡ ಸೈಕಲ್ ಪಯಣವು ಹತ್ತು ರಾಜ್ಯಗಳಲ್ಲಿ ಸಂಚರಿಸಲಿದ್ದು, ಶ್ರವಣ್ ಅವರು ಮುಂಬಯಿ, ನಾಗ್ಪುರ, ಝಾನ್ಸಿ, ಹರಿದ್ವಾರ, ವಾರಣಾಸಿ, ಲಖನೌ, ಮಣಿಪುರ, ಇಂಫಾಲ ಮೊದಲಾದ 10 ಪ್ರಮುಖ ನಗರಗಳಲ್ಲಿ ಜಾಗೃತಿ ಜಾಥಾ ಮತ್ತು ಸಭೆಗಳನ್ನು ನಡೆಸಲಿದ್ದಾರೆ.

ಇದನ್ನೂ ಓದಿ :ಪವಿತ್ರ ಪುಣ್ಯಕ್ಷೇತ್ರ ಶಬರಿಮಲೆಗೆ ಮಾಲಧಾರಿಯಾಗಿ ಅಯ್ಯಪ್ಪ ಸ್ವಾಮಿಯ ದರ್ಶನ ಮಾಡಿದ ಡಿಸಿಎಂ ಡಾ. ಸಿ. ಎನ್‌. ಅಶ್ವತ್ಥನಾರಾಯಣ -Vishwanews24

ಹಿಂದೆಯೂ ಸೈಕಲ್ ಪಯಣ ನಡೆಸಿದ್ದ ಶ್ರವಣ್ ಕುಮಾರ್: ತಾನು ಬಯಸಿದ್ದ ಇಂಜಿನಿಯರಿಂಗ್ ಪದವಿಯನ್ನು ಅರ್ಧಕ್ಕೇ ಮೊಟಕುಗೊಳಿಸಿದ ಶ್ರವಣ್ ಕುಮಾರ್ ವೃತ್ತಿಯಲ್ಲಿ ಸೇಲ್ಸ್ ವ್ಯವಹಾರ ನಡೆಸುತ್ತಿದ್ದು ಪ್ರವೃತಿಯಲ್ಲಿ ಸೈಕಲಿಸ್ಟ್ ಆಗಿ ಜನರಲ್ಲಿ ಪರಿಸರದ ಕುರಿತಾಗಿ ಜಾಗೃತಿ ಮೂಡಿಸುವ ಸಂಕಲ್ಪ ತೊಟ್ಟಿದ್ದಾರೆ. ಸ್ವಚ್ಛತೆ, ಕಸದ ತೊಟ್ಟಿಗಳ ಬಳಕೆ ಮತ್ತು ಪ್ಲಾಸ್ಟಿಕ್ ವಸ್ತುಗಳ ಸಮರ್ಪಕ ವಿಲೇವಾರಿ ಕುರಿತಂತೆ ಜನಲ್ಲಿ ಜಾಗೃತಿ ಮೂಡಿಸುವ ಸಲುವಾಗಿ 2018ರಲ್ಲಿ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ 10 ಸಾವಿರ ಕಿ. ಮೀ. ಸೈಕಲ್ ಪಯಣ ನಡೆಸಿದ್ದರು.

ಶ್ರವಣ್ ಕುಮಾರ್ ಹಮ್ಮಿಕೊಂಡಿರುವ ಸೈಕಲ್ ಪಯಣಕ್ಕೆ ಜೇಸಿಐ ಮಂಗಳೂರು ಲಾಲ್‌ಭಾಗ್ ಮತ್ತು ಮಂಗಳೂರಿನ ರೋಟರಿ ಸಂಸ್ಥೆಗಳು ಸಹಭಾಗಿತ್ವ ನೀಡಿದ್ದು, ಅವಳಿ ಸಂಸ್ಥೆಗಳ ಮನವಿಯ ಮೇರೆಗೆ ವಿವಿಧೆಡೆ ಜೇಸಿಐ ಮತ್ತು ರೊಟರಿ ಸಂಸ್ಥೆಗಳು ಹಾಗೂ ವೈಯಕ್ತಿಕವಾಗಿ ಶ್ರವಣ್ ಕುಮಾರ್ ಅವರ ಸ್ನೇಹಿತರು ಮತ್ತು ಪರಿಚಯಸ್ಥರು ವಿವಿಧ ರೀತಿಯಲ್ಲಿ ಸಹಕಾರ ನೀಡಲಿದ್ದಾರೆ.

ಇದನ್ನೂ ಓದಿ : ಕರ್ನಾಟಕದಲ್ಲಿ ಮತ್ತೆ ಲಾಕ್ ಡೌನ್, ಸೀಲ್ ಡೌನ್, ನೈಟ್ ಕರ್ಪ್ಯೂ ಜಾರಿ ಮಾಡಲ್ಲ : ಸಚಿವ ಡಾ.ಕೆ. ಸುಧಾಕರ್ – Vishwanews24

ಏನಿದು ಮಿಯಾವಾಕಿ, ಫಾರ್ಮಾ ಕಲ್ಚರ್ ?: ಸಣ್ಣ ಜಾಗದಲ್ಲಿ ಹೆಚ್ಚಿನ ಗಿಡಗಳನ್ನು ಬೆಳೆಸುವ ಮೂಲಕ ಅರಣ್ಯ ಸಂಪತ್ತನ್ನು ಬೆಳೆಸುವುಕ್ಕೆ ಮಿಯಾವಾಕಿ ಅರಣ್ಯ ಸಂಪತ್ತು ಎನ್ನಲಾಗುತ್ತದೆ. ಕಡಿಮೆ ಜಾಗದಲ್ಲಿ ವಿವಿಧ ಜಾತಿ ಮತ್ತು ಪ್ರಭೇಧಗಳ ಮರಗಳನ್ನು ನೆಟ್ಟು, ಪೋಷಿಸಿ, ಬೆಳೆಸುವುದೇ ಮಿಯಾವಾಕಿ ಸಂಸ್ಕೃತಿಯ ಉದ್ದೇಶವಾಗಿದ್ದು, ಇದನ್ನು ನಗರ ಪ್ರದೇಶಗಳಲ್ಲೂ ಮಾಡಬಹುದಾಗಿದೆ. ಮೂರು ವರ್ಷ ನೀರು ಕೊಟ್ಟರೆ ಗಿಡಗಳು ಮರಗಳಾಗಿ ಬೆಳೆಯುತ್ತವೆ. ಫಾರ್ಮಾ ಕಲ್ಚರ್ ಸಂಸ್ಕೃತಿಯನ್ನು ಅಧ್ಯಯನ ಮಾಡಿದರೆ ಕೆಮಿಕಲ್ ರಹಿತವಾಗಿ ಹುಲ್ಲು, ಗೊಬ್ಬರಗಳನ್ನೇ ಬಳಸಿಕೊಂಡು ಅರಣ್ಯ ಸಂಪತ್ತನ್ನು ಬೆಳೆಸಬಹುದಾಗಿದೆ. ಇವರೆಡೂ ಸಂಸ್ಕೃತಿಗಳು ವಿದೇಶದಲ್ಲಿ ಬಹುವಾಗಿ ಪ್ರಚಲಿತದಲ್ಲಿವೆ.

ಜನರಲ್ಲಿ ಗಿಡಮರಗಳನ್ನು ನೆಡುವಂತೆ ಪ್ರೇರೇಪಿಸುವುದು, ದೇಶೀ ತಳಿಯ ಸಸಿಗಳನ್ನು ಬೆಳೆಸುವುದು, ಮಿಯಾವಾಕಿ ಅರಣ್ಯ ಬೆಳೆಸುವುದು, ಸಾವಯವ ಕೃಷಿ, ಮಳೆ ನೀರು ಸಂಗ್ರಹ ಮೊದಲಾದ ಪ್ರಮುಖ ವಿಚಾರಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಸೈಕಲ್ ಪಯಣದ ಮುಖ್ಯ ಉದ್ದೇಶವಾಗಿದೆ. ಮಿಯಾವಾಕಿ ಮತ್ತು ಫಾರ್ಮಾ ಕಲ್ಚರ್ ವ್ಯವಸ್ಥೆಯಿಂದಾಗಿ ಭೂಮಿಯ ಗುಣಮಟ್ಟ ವೃದ್ಧಿಯಾಗುವುದರೊಂದಿಗೆ ಪ್ರಾಣಿ, ಪಕ್ಷಿ ಮತ್ತು ಚಿಟ್ಟೆಗಳ ಜೀವಕ್ಕೆ ಆಗಬಹುದಾದ ತೊಂದರೆಗಳನ್ನೂ ತಪ್ಪಿಸಲು ಸಾಧ್ಯವಿದೆ.

ಶ್ರವಣ್ ಕುಮಾರ್
ಸೈಕಲಿಸ್ಟ್, ಮಂಗಳೂರು

ಇದನ್ನೂ ಓದಿ : ಜೊಮ್ಯಾಟೋ ಡೆಲಿವರಿ ಬಾಯ್ ಹಲ್ಲೆ ಪ್ರಕರಣ : ಎಫ್ಐಆರ್ ದಾಖಲಾಗುತ್ತಿದ್ದಂತೆ ಯುವತಿ ನಾಪತ್ತೆ! Vishwanews24

Vishwa News 24

Recent Posts

ಬೆಂಗಳೂರು: ಯಾವುದೇ ಕಾರಣಕ್ಕೂ ಫುಟ್‌ಪಾತ್ ತೆರವು ಕಾರ್ಯಾಚರಣೆ ನಿಲ್ಲಲ್ಲ : ಸಚಿವ ಕೃಷ್ಣ ಬೈರೇಗೌಡ ಖಡಕ್‌ ಸೂಚನೆ – vishwanews24

ಬೆಂಗಳೂರು: ಫುಟ್‌ಪಾತ್ ತೆರವು ಕಾರ್ಯಾಚರಣೆ ನಿಲ್ಲಲ್ಲ : ಸಚಿವ ಕೃಷ್ಣ ಬೈರೇಗೌಡ ಖಡಕ್‌ ಸೂಚನೆ ಬೆಂಗಳೂರು: ಬೀದಿಬದಿ ವ್ಯಾಪಾರಿಗಳಿಗೆ ಬೆಂಗಳೂರು…

45 minutes ago

ಬೆಳಗಾವಿ: ಅಣಬೆ ಸೇವಿಸಿ ಒಂದೇ ಕುಟುಂಬದ 9 ಮಂದಿ ಅಸ್ವಸ್ಥ – vishwanews24

ಅಣಬೆ ಬೆಳೆದಿದ್ದ ಹೊಲಕ್ಕೆ ಅದರ ಮಾಲೀಕರಿಂದ ಕ್ರಿಮಿನಾಶಕ ಔಷಧಿ ಸಿಂಪಡಿಕೆ.. ಕೀಟನಾಶಕದ ಅಂಶ ಅಣಬೆಯೊಳಗೆ ಸೇರಿ ವಿಷವಾಗಿ ಮಾರ್ಪಟ್ಟು ಇಡೀ…

1 hour ago

ಉಡುಪಿ: ವಂಚನೆ ಹಾಗೂ ಬ್ಲ್ಯಾಕ್‌ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು – vishwanews24

ಉಡುಪಿ: ವಂಚನೆ ಹಾಗೂ ಬ್ಲ್ಯಾಕ್‌ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು ಉಡುಪಿ:ಬಹುಕೋಟಿ ವಂಚನೆ…

2 hours ago

ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ – ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ – vishwanews24

ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ - ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ ತೀರ್ಥಹಳ್ಳಿ: ಲೈಂಗಿಕ ದೌರ್ಜನ್ಯಕ್ಕೆ…

3 hours ago

ಅಯೋಧ್ಯೆ ಪ್ರಕರಣದ ಹಿನ್ನೆಲೆ : ರಾಜ್ಯದ ಎಲ್ಲಾ ಮುಜುರಾಯಿ ದೇಗುಲಗಳಲ್ಲಿ ಕಡ್ಡಾಯ ಸಿಸಿಟಿವಿ ಅಳವಡಿಕೆಗೆ ಸಿಎಂ ಆದೇಶ – vishwanews24

ರಾಮ ಮಂದಿರದಲ್ಲಿ ನಡೆದ ಘಟನೆ ಅವಮಾನಕರ; ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ :ಸಿಎಂ  ಡಿ.ಕೆ. ಶಿ ಬೆಳಗಾವಿ: ಮುಜರಾಯಿ…

3 hours ago

ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮಹಿಳೆ ಬಂಧನ – vishwanews24

ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮುಂಬಯಲ್ಲಿ ಉಡುಪಿ ಮೂಲದ ಮಹಿಳೆ ಬಂಧನ ಮುಂಬೈ,: ಷೇರು…

3 hours ago