ಉಡುಪಿ

ಮಂಗಳೂರು To ಮಣಿಪುರ : ಪರಿಸರ ಜಾಗೃತಿ ಮೂಡಿಸಲು 6 ಸಾವಿರ ಕಿ.ಮೀ. ಸೈಕಲ್ ಪಯಣ ಆರಂಭಿಸಿದ ಕುಡ್ಲದ ಯುವಕ ಶ್ರವಣ್ ಕುಮಾರ್ -Vishwanews24

ಮಂಗಳೂರು To ಮಣಿಪುರ : ಪರಿಸರ ಜಾಗೃತಿ ಮೂಡಿಸಲು 6 ಸಾವಿರ ಕಿ.ಮೀ. ಸೈಕಲ್ ಪಯಣ ಆರಂಭಿಸಿದ ಕುಡ್ಲದ ಯುವಕ ಶ್ರವಣ್ ಕುಮಾರ್ -Vishwanews24

ಉಡುಪಿ : ಪರಿಸರ ಜಾಗೃತಿ, ಮಿಯಾವಾಕಿ ಅರಣ್ಯ ಸಂಪತ್ತು ಬೆಳೆಸುವುದು ಮತ್ತು ಫಾರ್ಮಾ ಕಲ್ಚರ್ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಕುಡ್ಲದ ಯುವಕ ಶ್ರವಣ್ ಕುಮಾರ್ ಮಂಗಳೂರಿನಿಂದ ಮಣಿಪುರದವರೆಗೆ ಫೆಡಲ್ ಫಾರ್ ಗ್ರೀನ್ ಎಂಬ ಸಂಕಲ್ಪದೊಂದಿಗೆ 6,000 ಕಿ.ಮೀ. ದೂರವರೆಗಿನ ಸೈಕಲ್ ಪಯಣವನ್ನು ಹಮ್ಮಿಕೊಂಡು ಯುವಜನರಿಗೆ ಸ್ಪೂರ್ತಿಯಾಗುವ ಪ್ರಯತ್ನ ಮಾಡಿದ್ದಾರೆ.

ಹಸಿರು ಕ್ರಾಂತಿಯ ಸಂಕಲ್ಪ ತೊಟ್ಟಿರುವ ಜೇಸಿಐ ಮಂಗಳೂರು ಲಾಲ್‌ಭಾಗ್‌ನ ಸದಸ್ಯ ಮತ್ತು ಸ್ವತಃ ಸೈಕಲಿಸ್ಟ್ ಆಗಿರುವ ಗುರುಪುರ ನಿವಾಸಿ ಶ್ರವಣ್ ಕುಮಾರ್ ಜನರಲ್ಲಿ ಪರಿಸರದ ಕುರಿತಾಗಿ ಜಾಗೃತಿ ಮೂಡಿಸುವುದರೊಂದಿಗೆ ಗಿಡ ಮರಗಳನ್ನು ಬೆಳೆಸಿ ಎಂಬ ಘೋಷಣೆಯೊಂದಿಗೆ ಪೆಡಲ್ ಫಾರ್ ಗ್ರೀನ್ ಎಂಬ ಹೆಸರಿನಲ್ಲಿ ಸೈಕಲ್ ಪಯಣವನ್ನು ಹಮ್ಮಿಕೊಂಡಿದ್ದು, ಮಾ. 15ರಂದು ಮಂಗಳೂರಿನಲ್ಲಿ ಚಾಲನೆ ನೀಡಲಾಗಿತ್ತು.

10 ರಾಜ್ಯಗಳಲ್ಲಿ ಸಂಚಾರ: ಆರಂಭದಲ್ಲಿ ಪ್ರತೀ ದಿನ 50 ರಿಂದ 60 ಕಿ. ಮೀ. ಸೈಕಲ್ ಸಂಚಾರ ನಡೆಯಲಿದ್ದು, ನಂತರ ವೇಗದ ಮಿತಿ ಹೆಚ್ಚಲಿದೆ. ಸೋಮವಾರ ಸಂಜೆ ಕಾಪುವಿನವರೆಗೆ ಸಾಗಿ ಬಂದಿರುವ ಸೈಕಲ್ ಪಯಣವು ಮಂಗಳವಾರ ಕಾಪುವಿನಿಂದ ಕುಂದಾಪುರಕ್ಕೆ ತೆರಳಿದೆ. ಮಂಗಳೂರಿನಿಂದ ಆರಂಭಗೊಂಡ ಸೈಕಲ್ ಪಯಣವು ಹತ್ತು ರಾಜ್ಯಗಳಲ್ಲಿ ಸಂಚರಿಸಲಿದ್ದು, ಶ್ರವಣ್ ಅವರು ಮುಂಬಯಿ, ನಾಗ್ಪುರ, ಝಾನ್ಸಿ, ಹರಿದ್ವಾರ, ವಾರಣಾಸಿ, ಲಖನೌ, ಮಣಿಪುರ, ಇಂಫಾಲ ಮೊದಲಾದ 10 ಪ್ರಮುಖ ನಗರಗಳಲ್ಲಿ ಜಾಗೃತಿ ಜಾಥಾ ಮತ್ತು ಸಭೆಗಳನ್ನು ನಡೆಸಲಿದ್ದಾರೆ.

ಇದನ್ನೂ ಓದಿ :ಪವಿತ್ರ ಪುಣ್ಯಕ್ಷೇತ್ರ ಶಬರಿಮಲೆಗೆ ಮಾಲಧಾರಿಯಾಗಿ ಅಯ್ಯಪ್ಪ ಸ್ವಾಮಿಯ ದರ್ಶನ ಮಾಡಿದ ಡಿಸಿಎಂ ಡಾ. ಸಿ. ಎನ್‌. ಅಶ್ವತ್ಥನಾರಾಯಣ -Vishwanews24

ಹಿಂದೆಯೂ ಸೈಕಲ್ ಪಯಣ ನಡೆಸಿದ್ದ ಶ್ರವಣ್ ಕುಮಾರ್: ತಾನು ಬಯಸಿದ್ದ ಇಂಜಿನಿಯರಿಂಗ್ ಪದವಿಯನ್ನು ಅರ್ಧಕ್ಕೇ ಮೊಟಕುಗೊಳಿಸಿದ ಶ್ರವಣ್ ಕುಮಾರ್ ವೃತ್ತಿಯಲ್ಲಿ ಸೇಲ್ಸ್ ವ್ಯವಹಾರ ನಡೆಸುತ್ತಿದ್ದು ಪ್ರವೃತಿಯಲ್ಲಿ ಸೈಕಲಿಸ್ಟ್ ಆಗಿ ಜನರಲ್ಲಿ ಪರಿಸರದ ಕುರಿತಾಗಿ ಜಾಗೃತಿ ಮೂಡಿಸುವ ಸಂಕಲ್ಪ ತೊಟ್ಟಿದ್ದಾರೆ. ಸ್ವಚ್ಛತೆ, ಕಸದ ತೊಟ್ಟಿಗಳ ಬಳಕೆ ಮತ್ತು ಪ್ಲಾಸ್ಟಿಕ್ ವಸ್ತುಗಳ ಸಮರ್ಪಕ ವಿಲೇವಾರಿ ಕುರಿತಂತೆ ಜನಲ್ಲಿ ಜಾಗೃತಿ ಮೂಡಿಸುವ ಸಲುವಾಗಿ 2018ರಲ್ಲಿ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ 10 ಸಾವಿರ ಕಿ. ಮೀ. ಸೈಕಲ್ ಪಯಣ ನಡೆಸಿದ್ದರು.

ಶ್ರವಣ್ ಕುಮಾರ್ ಹಮ್ಮಿಕೊಂಡಿರುವ ಸೈಕಲ್ ಪಯಣಕ್ಕೆ ಜೇಸಿಐ ಮಂಗಳೂರು ಲಾಲ್‌ಭಾಗ್ ಮತ್ತು ಮಂಗಳೂರಿನ ರೋಟರಿ ಸಂಸ್ಥೆಗಳು ಸಹಭಾಗಿತ್ವ ನೀಡಿದ್ದು, ಅವಳಿ ಸಂಸ್ಥೆಗಳ ಮನವಿಯ ಮೇರೆಗೆ ವಿವಿಧೆಡೆ ಜೇಸಿಐ ಮತ್ತು ರೊಟರಿ ಸಂಸ್ಥೆಗಳು ಹಾಗೂ ವೈಯಕ್ತಿಕವಾಗಿ ಶ್ರವಣ್ ಕುಮಾರ್ ಅವರ ಸ್ನೇಹಿತರು ಮತ್ತು ಪರಿಚಯಸ್ಥರು ವಿವಿಧ ರೀತಿಯಲ್ಲಿ ಸಹಕಾರ ನೀಡಲಿದ್ದಾರೆ.

ಇದನ್ನೂ ಓದಿ : ಕರ್ನಾಟಕದಲ್ಲಿ ಮತ್ತೆ ಲಾಕ್ ಡೌನ್, ಸೀಲ್ ಡೌನ್, ನೈಟ್ ಕರ್ಪ್ಯೂ ಜಾರಿ ಮಾಡಲ್ಲ : ಸಚಿವ ಡಾ.ಕೆ. ಸುಧಾಕರ್ – Vishwanews24

ಏನಿದು ಮಿಯಾವಾಕಿ, ಫಾರ್ಮಾ ಕಲ್ಚರ್ ?: ಸಣ್ಣ ಜಾಗದಲ್ಲಿ ಹೆಚ್ಚಿನ ಗಿಡಗಳನ್ನು ಬೆಳೆಸುವ ಮೂಲಕ ಅರಣ್ಯ ಸಂಪತ್ತನ್ನು ಬೆಳೆಸುವುಕ್ಕೆ ಮಿಯಾವಾಕಿ ಅರಣ್ಯ ಸಂಪತ್ತು ಎನ್ನಲಾಗುತ್ತದೆ. ಕಡಿಮೆ ಜಾಗದಲ್ಲಿ ವಿವಿಧ ಜಾತಿ ಮತ್ತು ಪ್ರಭೇಧಗಳ ಮರಗಳನ್ನು ನೆಟ್ಟು, ಪೋಷಿಸಿ, ಬೆಳೆಸುವುದೇ ಮಿಯಾವಾಕಿ ಸಂಸ್ಕೃತಿಯ ಉದ್ದೇಶವಾಗಿದ್ದು, ಇದನ್ನು ನಗರ ಪ್ರದೇಶಗಳಲ್ಲೂ ಮಾಡಬಹುದಾಗಿದೆ. ಮೂರು ವರ್ಷ ನೀರು ಕೊಟ್ಟರೆ ಗಿಡಗಳು ಮರಗಳಾಗಿ ಬೆಳೆಯುತ್ತವೆ. ಫಾರ್ಮಾ ಕಲ್ಚರ್ ಸಂಸ್ಕೃತಿಯನ್ನು ಅಧ್ಯಯನ ಮಾಡಿದರೆ ಕೆಮಿಕಲ್ ರಹಿತವಾಗಿ ಹುಲ್ಲು, ಗೊಬ್ಬರಗಳನ್ನೇ ಬಳಸಿಕೊಂಡು ಅರಣ್ಯ ಸಂಪತ್ತನ್ನು ಬೆಳೆಸಬಹುದಾಗಿದೆ. ಇವರೆಡೂ ಸಂಸ್ಕೃತಿಗಳು ವಿದೇಶದಲ್ಲಿ ಬಹುವಾಗಿ ಪ್ರಚಲಿತದಲ್ಲಿವೆ.

ಜನರಲ್ಲಿ ಗಿಡಮರಗಳನ್ನು ನೆಡುವಂತೆ ಪ್ರೇರೇಪಿಸುವುದು, ದೇಶೀ ತಳಿಯ ಸಸಿಗಳನ್ನು ಬೆಳೆಸುವುದು, ಮಿಯಾವಾಕಿ ಅರಣ್ಯ ಬೆಳೆಸುವುದು, ಸಾವಯವ ಕೃಷಿ, ಮಳೆ ನೀರು ಸಂಗ್ರಹ ಮೊದಲಾದ ಪ್ರಮುಖ ವಿಚಾರಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಸೈಕಲ್ ಪಯಣದ ಮುಖ್ಯ ಉದ್ದೇಶವಾಗಿದೆ. ಮಿಯಾವಾಕಿ ಮತ್ತು ಫಾರ್ಮಾ ಕಲ್ಚರ್ ವ್ಯವಸ್ಥೆಯಿಂದಾಗಿ ಭೂಮಿಯ ಗುಣಮಟ್ಟ ವೃದ್ಧಿಯಾಗುವುದರೊಂದಿಗೆ ಪ್ರಾಣಿ, ಪಕ್ಷಿ ಮತ್ತು ಚಿಟ್ಟೆಗಳ ಜೀವಕ್ಕೆ ಆಗಬಹುದಾದ ತೊಂದರೆಗಳನ್ನೂ ತಪ್ಪಿಸಲು ಸಾಧ್ಯವಿದೆ.

ಶ್ರವಣ್ ಕುಮಾರ್
ಸೈಕಲಿಸ್ಟ್, ಮಂಗಳೂರು

ಇದನ್ನೂ ಓದಿ : ಜೊಮ್ಯಾಟೋ ಡೆಲಿವರಿ ಬಾಯ್ ಹಲ್ಲೆ ಪ್ರಕರಣ : ಎಫ್ಐಆರ್ ದಾಖಲಾಗುತ್ತಿದ್ದಂತೆ ಯುವತಿ ನಾಪತ್ತೆ! Vishwanews24

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

22 minutes ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

31 minutes ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

21 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

23 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

23 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

23 hours ago