ಕಾಸರಗೋಡು: ಮಗನೊಬ್ಬ ಬೆಂಕಿ ಹಚ್ಚಿ ತಾಯಿಯನ್ನು ಕೊಲೆಗೈದ ಘಟನೆ ಮಂಜೇಶ್ವರ ತಾಲೂಕಿನ ವರ್ಕಾಡಿಯಲ್ಲಿ ಗುರುವಾರ ಮುಂಜಾನೆ ನಡೆದಿದೆ.
ವರ್ಕಾಡಿ ನಲ್ಲಂಗಿಯ ದಿ. ಲೂಯಿಸ್ ಮೊಂತೆರೋ ರವರ ಪತ್ನಿ ಹಿಲ್ಡಾ (60) ಕೊಲೆಗೀಡಾದವರು. ಪುತ್ರ ಮೆಲ್ವಿನ್ ಈ ಕೃತ್ಯ ನಡೆಸಿದ್ದಾನೆ. ನೆರೆಮನೆಯ ಲೋಲಿಟಾ (30) ಗಂಭೀರ ಗಾಯಗೊಂಡಿದ್ದಾರೆ. ಮಲಗಿದ್ದ ತಾಯಿಗೆ ಬೆಂಕಿ ಹಚ್ಚಿ ಕೊಂದ ಬಳಿಕ ತಾಯಿಗೆ ಹುಷಾರಿಲ್ಲ ಎಂದು ನೆರೆಮನೆಯ ಲೋಲಿಟಾರವರನ್ನು ಮನೆಗೆ ಕರೆಸಿದ್ದಾನೆ ಎನ್ನಲಾಗಿದೆ.
ತಾಯಿ ಮತ್ತು ಮೆಲ್ವಿನ್ ಮಾತ್ರ ಮನೆಯಲ್ಲಿ ವಾಸವಾಗಿದ್ದರು. ಇನ್ನೋರ್ವ ಮಗ ಆಲ್ವಿನ್ ವಿದೇಶದಲ್ಲಿ ಉದ್ಯೋಗ ದಲ್ಲಿದ್ದಾರೆ. ಕೃತಕ್ಕೆ ಕಾರಣ ತಿಳಿದು ಬಂದಿಲ್ಲ.ಮೃತದೇಹ ಮನೆ ಸಮೀಪದ ಪೊದೆಯಲ್ಲಿ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಆರೋಪಿ ತಲೆಮರೆಸಿಕೊಂಡಿದ್ದು, ಮಂಜೇಶ್ವರ ಠಾಣಾ ಪೊಲೀಸರು ಸ್ಥಳಕ್ಕೆ ತಲುಪಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…