Featured

ಮಂಡ್ಯದಲ್ಲಿ ನಿಖಿಲ್​ ರಾಜಕೀಯ ಭವಿಷ್ಯ ಕಷ್ಟ : ಕುಮಾರಸ್ವಾಮಿಗೆ ದ್ವಾರಕಾನಾಥ್ ಗುರೂಜಿ – Vishwanews24

ಬೆಂಗಳೂರು,: ಲೋಕಸಭಾ ಚುನಾವಣೆ ಕಾವೇರುತ್ತಿದ್ದು, ಮಂಡ್ಯ ಕ್ಷೇತ್ರ ತೀವ್ರ ಕುತೂಹಲ ಕೆರಳಿಸಿದೆ. ಈಗಾಗಲೇ ಜೆಡಿಎಸ್ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರಿಗೆ ಟಿಕೆಟ್ ನೀಡುವುದಾಗಿ ಘೋಷಿಸಿದೆ. ಮತ್ತೊಂದೆಡೆ ಸುಮಲತಾ ಕಾಂಗ್ರೆಸ್ ನಿಂದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಆದರೆ, ಮೈತ್ರಿ ಧರ್ಮಕ್ಕೆ ಕಟ್ಟು ಬಿದ್ದು ಕಾಂಗ್ರೆಸ್ ಟಿಕೆಟ್ ಸಿಗುವುದು ಅನುಮಾನವಾಗಿದೆ. ಸ್ವತಂತ್ರವಾಗಿಯಾದರೂ ಚುನಾವಣೆಗೆ ಸ್ಪರ್ಧಿಸುವುದು ಖಚಿತ ಎಂದು ಸುಮಲತಾ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ.

ಸುಮಲತಾ ಅವರಿಗೆ ಸ್ಥಳೀಯ ಕಾಂಗ್ರೆಸ್ ಮುಖಂಡರ ಬೆಂಬಲವೂ ದೊರೆತಿದೆ. ಇನ್ನು ಸುಮಲತಾ ಅವರಿಗೆ ಅನುಕಂಪವೂ ವ್ಯಕ್ತವಾಗುತ್ತಿದ್ದು, ಇದು ಅವರಿಗೆ ಪ್ಲಸ್ ಪಾಯಿಂಟ್ ಆಗಿದೆ. ಮತ್ತೊಂದೆಡೆ ಗುಪ್ತದಳ ಮಂಡ್ಯ ಕ್ಷೇತ್ರದಿಂದ ನಿಖಿಲ್ ಸ್ಪರ್ಧಿಸಿದರೆ ಗೆಲುವು ಕಷ್ಟ ಎಂದು ತಿಳಿಸಿದೆ. ಹೀಗಾಗಿ ಸಿಎಂ ಕುಮಾರಸ್ವಾಮಿ ತಮ್ಮ ಪುತ್ರನ ರಾಜಕೀಯ ಭವಿಷ್ಯದ ಬಗ್ಗೆ ಚಿಂತೆಗೀಡಾಗಿದ್ದಾರೆ. ತಮ್ಮ ಪುತ್ರನ ರಾಜಕೀಯ ಭವಿಷ್ಯದ ಬಗ್ಗೆ ತಿಳಿದುಕೊಳ್ಳಲು ರಾಜಗುರು ದ್ವಾರಕಾನಾಥ್ ಗುರೂಜಿ ಮೊರೆ ಹೋಗಿದ್ದಾರೆ.

ಈ ವೇಳೆ, ದ್ವಾರಕಾನಾಥ್ ಅವರು ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ರಾಜಕೀಯ ಭವಿಷ್ಯ ಕಷ್ಟ ಎಂದು ತಿಳಿಸಿದ್ದಾರಂತೆ. ‘ನಿಖಿಲ್ ಚುನಾವಣೆಗೆ ಸ್ಪರ್ಧೆ ಮಾಡಿದ್ದಾಗಿದೆ. ಈಗ ನಾನು ನಿಖಿಲ್ ಗೆ ಆಶೀರ್ವಾದ ಮಾಡಲೇಬೇಕಿದೆ. ಅಂತೆಯೇ ನಾನು ನನ್ನ ಕರ್ತವ್ಯ ಮಾಡಿದ್ದೇನೆ’ ಎಂದು ಹೇಳಿದ್ದಾರಂತೆ. ದ್ವಾರಕಾನಾಥ್ ಗುರೂಜಿ ಅವರ ಮಾತಿನಿಂದ ಸಿಎಂ ಮತ್ತಷ್ಟು ತಲೆಕೆಡಿಸಿಕೊಂಡಿದ್ದಾರಂತೆ.

ಜೆಡಿಎಸ್ ನಾಯಕರಾದ ಎಚ್.ಡಿ.ರೇವಣ್ಣ ಹಾಗೂ ಕೆ.ಟಿ.ಶ್ರೀಕಂಠೇಗೌಡ ಸುಮಲತಾ ಅವರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಈಗಾಗಲೇ ಸುಮಲತಾ ಅವರಿಗೆ ಕ್ಷೇತ್ರದಾದ್ಯಂತ ಬೆಂಬಲ ವ್ಯಕ್ತವಾಗಿದೆ. ಮತ್ತೊಂದೆಡೆ ತಮ್ಮನ್ನು ಉದ್ದೇಶಿಸಿ ಹಗುರವಾಗಿ ಮಾತನಾಡಿದವರ ಬಗ್ಗೆಯೂ ಸುಮಲತಾ ಎಚ್ಚರಿಕೆಯಿಂದಲೇ ಪ್ರತಿಕ್ರಿಯಿಸಿದ್ದಾರೆ. ಇದು ಕೂಡ ಸುಮಲತಾ ಅವರಿಗೆ ಪ್ಲಸ್ ಪಾಯಿಂಟ್ ಆಗಿದೆ ಎನ್ನಲಾಗಿದೆ.

ಮಂಡ್ಯ ಕ್ಷೇತ್ರದಲ್ಲಿ ಕೆಲವು ಜೆಡಿಎಸ್ ಕಾರ್ಯಕರ್ತರಿಂದಲೇ ನಿಖಿಲ್ ಸ್ಪರ್ಧೆಗೆ ವಿರೋಧ ಕೇಳಿಬಂದಿದೆ. ಇನ್ನು ಸಾಮಾಜಿಕ ಜಾಲತಾಣಗಳಲ್ಲೂ ಗೋ ಬ್ಯಾಕ್ ನಿಖಿಲ್ ಎಂಬುದಾಗಿ ವ್ಯಕ್ತವಾಗಿದೆ. ಕಾಂಗ್ರೆಸ್ ನವರು ಸುಮಲತಾ ಪರವಾಗಿ ಬೆಂಬಲ ನೀಡಲು ಮುಂದಾಗಿದ್ದು, ಕುಮಾರಸ್ವಾಮಿ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಹೀಗಾಗಿಯೇ ತಮ್ಮ ಪುತ್ರನ ರಾಜಕೀಯ ಭವಿಷ್ಯದ ಬಗ್ಗೆ ತಿಳಿಯಲು ಸಚಿವ ಡಿ.ಕೆ.ಶಿವಕುಮಾರ್​ ಅವರ ಆಪ್ತರಾಗಿರುವ ರಾಜಗುರು ದ್ವಾರಕಾನಾಥ್​ಅವರ ಮನೆಗೆ ತೆರಳಿ ಆಶೀರ್ವಾದ ಪಡೆದಿದ್ದಾರೆ….

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

2 hours ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

2 hours ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

2 hours ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

2 hours ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

2 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

4 hours ago