ಮಂಡ್ಯ: ಪುತ್ರ ನಿಖಿಲ್ ಅವರನ್ನು ಗೆಲ್ಲಿಸಿಕೊಳ್ಳಲು ಪ್ರತಿಷ್ಠೆಯನ್ನು ಪಣಕ್ಕೊಡ್ಡಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಚುನಾವಣೆ ಮುಗಿಯುವವರೆಗೂ ನಗರದಲ್ಲೇ ಠಿಕಾಣಿ ಹೂಡಲು ಮುಂದಾಗಿದ್ದಾರೆ. ಬುಧವಾರ ಆದಿಚುಂಚನಗಿರಿ ಮಠದಲ್ಲಿ ಪೂಜೆ ಸಲ್ಲಿಸುವ ಮೂಲಕ ಅಬ್ಬರದ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.
ನಗರದಲ್ಲಿ ಜೆಡಿಎಸ್ ಚುನಾಯಿತ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲಿದ್ದಾರೆ. ನಂತರ ಕ್ಷೇತ್ರ ಪ್ರವಾಸದಲ್ಲಿರುವ ಪುತ್ರ ನಿಖಿಲ್ ಅವರೊಂದಿಗೆ ಪ್ರಚಾರದಲ್ಲಿ ತೊಡಗಲಿದ್ದಾರೆ. ಪತ್ನಿ, ರಾಮನಗರ ಶಾಸಕಿ ಅನಿತಾ ಕೂಡ ಸಾಥ್ ನೀಡಲಿದ್ದಾರೆ. ಲೋಕಸಭಾ ಚುನಾವಣೆ ಮುಗಿಯುವವರೆಗೂ ಕ್ಷೇತ್ರದಲ್ಲೇ ಉಳಿದು ಪ್ರಚಾರ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಾರ್ಚ್ 25ರಂದು ಪಂಚಮಿಯ ಶುಭ ಗಳಿಗೆಯಲ್ಲಿ ನಿಖಿಲ್ ನಾಮಪತ್ರ ಸಲ್ಲಿಸಲಿದ್ದಾರೆ.
ಮದ್ದೂರು ಪಟ್ಟಣದ ಹೊಳೆ ಆಂಜನೇಯ ದೇವಾಲಯದಲ್ಲಿ ಶಾಸಕಿ ಅನಿತಾ ನಡೆಸುತ್ತಿರುವ ‘ಒಂದೂಕಾಲು ರೂಪಾಯಿ ಹರಕೆ’ ಸೇವೆಗೆ ನಾಲ್ಕು ವಾರ ಪೂರೈಸಿದರು. ಮಂಗಳವಾರ ದೇವಾಲಯಕ್ಕೆ ಭೇಟಿ ನೀಡಿ, ಪುತ್ರನ ಹೆಸರಿನಲ್ಲಿ ಪೂಜೆ ಸಲ್ಲಿಸಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…