ಮಂಡ್ಯ: ಪುತ್ರ ನಿಖಿಲ್ ಅವರನ್ನು ಗೆಲ್ಲಿಸಿಕೊಳ್ಳಲು ಪ್ರತಿಷ್ಠೆಯನ್ನು ಪಣಕ್ಕೊಡ್ಡಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಚುನಾವಣೆ ಮುಗಿಯುವವರೆಗೂ ನಗರದಲ್ಲೇ ಠಿಕಾಣಿ ಹೂಡಲು ಮುಂದಾಗಿದ್ದಾರೆ. ಬುಧವಾರ ಆದಿಚುಂಚನಗಿರಿ ಮಠದಲ್ಲಿ ಪೂಜೆ ಸಲ್ಲಿಸುವ ಮೂಲಕ ಅಬ್ಬರದ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.
ನಗರದಲ್ಲಿ ಜೆಡಿಎಸ್ ಚುನಾಯಿತ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲಿದ್ದಾರೆ. ನಂತರ ಕ್ಷೇತ್ರ ಪ್ರವಾಸದಲ್ಲಿರುವ ಪುತ್ರ ನಿಖಿಲ್ ಅವರೊಂದಿಗೆ ಪ್ರಚಾರದಲ್ಲಿ ತೊಡಗಲಿದ್ದಾರೆ. ಪತ್ನಿ, ರಾಮನಗರ ಶಾಸಕಿ ಅನಿತಾ ಕೂಡ ಸಾಥ್ ನೀಡಲಿದ್ದಾರೆ. ಲೋಕಸಭಾ ಚುನಾವಣೆ ಮುಗಿಯುವವರೆಗೂ ಕ್ಷೇತ್ರದಲ್ಲೇ ಉಳಿದು ಪ್ರಚಾರ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಾರ್ಚ್ 25ರಂದು ಪಂಚಮಿಯ ಶುಭ ಗಳಿಗೆಯಲ್ಲಿ ನಿಖಿಲ್ ನಾಮಪತ್ರ ಸಲ್ಲಿಸಲಿದ್ದಾರೆ.
ಮದ್ದೂರು ಪಟ್ಟಣದ ಹೊಳೆ ಆಂಜನೇಯ ದೇವಾಲಯದಲ್ಲಿ ಶಾಸಕಿ ಅನಿತಾ ನಡೆಸುತ್ತಿರುವ ‘ಒಂದೂಕಾಲು ರೂಪಾಯಿ ಹರಕೆ’ ಸೇವೆಗೆ ನಾಲ್ಕು ವಾರ ಪೂರೈಸಿದರು. ಮಂಗಳವಾರ ದೇವಾಲಯಕ್ಕೆ ಭೇಟಿ ನೀಡಿ, ಪುತ್ರನ ಹೆಸರಿನಲ್ಲಿ ಪೂಜೆ ಸಲ್ಲಿಸಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…