Featured

ಮಂಡ್ಯದ ಐದು ರೂಪಾಯಿ ವೈದ್ಯ ಖ್ಯಾತಿಯ ಶಂಕರೇಗೌಡರಿಗೆ ‘ಇಂಡಿಯನ್ ಆಫ್‌ ದಿ ಇಯರ್’ ಪ್ರಶಸ್ತಿ – Vishwanews24

ಮಂಡ್ಯದ ಐದು ರೂಪಾಯಿ ವೈದ್ಯ ಖ್ಯಾತಿಯ ಶಂಕರೇಗೌಡರಿಗೆ ‘ಇಂಡಿಯನ್ ಆಫ್‌ ದಿ ಇಯರ್’ ಪ್ರಶಸ್ತಿ

ಬೆಂಗಳೂರು: ತಮ್ಮ ಕ್ಲಿನಿಕ್‌ ಗೆ ಬರುವ ರೋಗಿಗಳಿಗೆ ಕೇವಲ ಐದು ರೂಪಾಯಿ ಶುಲ್ಕ ಪಡೆದು ಚಿಕಿತ್ಸೆ ನೀಡುತ್ತಿರುವ ಮಂಡ್ಯದ ಪ್ರಸಿದ್ದ ವೈದ್ಯ ಶಂಕರೇಗೌಡ ಅವರಿಗೆ ಸಿಎನ್‌ಎನ್‌ ನ್ಯೂಸ್‌18 ಸಂಸ್ಥೆ ವತಿಯಿಂದ ನೀಡಲಾಗುವ ಈ ಬಾರಿಯ ‘ಇಂಡಿಯನ್ ಆಫ್‌ ದಿ ಇಯರ್-2022’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಸಾಮಾಜಿಕ ಬದಲಾವಣೆ ವಿಭಾಗದಲ್ಲಿ ಡಾ.ಶಂಕರೇಗೌಡರಿಗೆ ‘ಇಂಡಿಯನ್ ಆಫ್‌ ದಿ ಇಯರ್-2022’ ಪ್ರಶಸ್ತಿ ನೀಡಲಾಗಿದೆ. ಹೊಸದಿಲ್ಲಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಜನತಾದಳ (ಜಾತ್ಯತೀತ) ಪಕ್ಷದ “ಜಿಲ್ಲಾ ವಕ್ತಾರರಾಗಿ ಶ್ರೀ ಶ್ರೀಕಾಂತ್ ಹೆಬ್ರಿ ನೇಮಕ- Vishwanews24

‘ನಾನು 1982ರಿಂದ ಅಭ್ಯಾಸ ಮಾಡುತ್ತಿದ್ದೇನೆ. ಅಂದಿನಿಂದ ಇಂದಿನವರೆಗೆ ಐದು ರೂಪಾಯಿ ಶುಲ್ಕ ಹಾಕುತ್ತೇನೆ. ನಮ್ಮಲ್ಲಿ ಯಾವ ಜ್ಞಾನವಿದೆಯೋ ಅದನ್ನು ಎಲ್ಲರಿಗೂ ಸಮಾನವಾಗಿ ನೀಡಬೇಕು. ಹಾಗಾಗಿ ನನ್ನ ಜ್ಞಾನವನ್ನು ನನ್ನ ಶಿಕ್ಷಣಕ್ಕೆ ಕಾರಣರಾದ ನನ್ನ ಜನರಿಗೆ ನೀಡಬೇಕು ಎನ್ನುವ ಉದ್ದೇಶದಿಂದ ಪದವಿ ಪಡೆದ ನಂತರ ನನ್ನ ಊರಿನಲ್ಲಿ ಅಭ್ಯಾಸ ಮಾಡಲು ಪ್ರಾರಂಭಿಸಿದೆ ಎಂದು ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ವೈದ್ಯ ಡಾ.ಶಂಕರೇಗೌಡ ಹೇಳಿದರು.

ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, 5 ರೂಪಾಯಿ ಡಾಕ್ಟರ್ ಎಂದೇ ಪ್ರಖ್ಯಾತಿಗಳಿಸಿರುವ ಮಂಡ್ಯದ ವೈದ್ಯ ಶ್ರೀ ಶಂಕರೇಗೌಡರಿಗೆ ಇಂಡಿಯನ್ ಆಫ್‌ ದಿ ಇಯರ್-2022′ ಪ್ರಶಸ್ತಿ ಲಭಿಸಿರುವುದು ಅತ್ಯಂತ ಅಭಿನಂದನಾರ್ಹ ಸಂಗತಿಯಾಗಿದೆ. ಗ್ರಾಮೀಣ ಭಾಗದ ಜನರ ಸೇವೆಗಾಗಿಯೇ ತಮ್ಮ ಜೀವನವನ್ನು ಮುಡಿಪಾಗಿಟ್ಟ ಅವರ ವ್ಯಕ್ತಿತ್ವ ಎಲ್ಲರಿಗೂ ಮಾದರಿಯಾಗಿದೆ. ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಮೆಚ್ಚುಗೆ ಸೂಚಿಸಿದ್ದಾರೆ.  ಹಿಜಾಬ್ ವಿವಾದ ಸುಪ್ರೀಂ ತೀರ್ಪು ಸಂತ್ರಸ್ತ ಹೆಣ್ಣು ಮಕ್ಕಳ ಹಕ್ಕುಗಳನ್ನು ಎತ್ತಿ ಹಿಡಿದಿದೆ..: ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿದ ಹಿಜಾಬ್ ಹೋರಾಟಗಾರ್ತಿ ಆಲಿಯಾ ಅಸಾದಿ

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

5 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

5 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

5 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

6 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago