Featured

ಮಂಡ್ಯ ಅರ್ಚಕರ ಹತ್ಯೆ ಪ್ರಕರಣ : ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ : ಸಿಎಂ ಬಿಎಸ್ ವೈ ಘೋಷಣೆ -Vishwanews24

ಮಂಡ್ಯ ಅರ್ಚಕರ ಹತ್ಯೆ ಪ್ರಕರಣ : ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ : ಸಿಎಂ ಬಿಎಸ್ ವೈ ಘೋಷಣೆ -Vishwanews24

ಬೆಂಗಳೂರು : ಮಂಡ್ಯದ ಅರಕೇಶ್ವರ ದೇವಾಲಯದ ಮೂವರು ಅರ್ಚಕರನ್ನು ಬರ್ಬರವಾಗಿ ಹತ್ಯೆಗೈಯಲಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಹತ್ಯೆಯಾದ ಮೂವರು ಅರ್ಚಕರ ಕುಟುಂಬಕ್ಕೆ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪನವರು ತಲಾ 5 ಲಕ್ಷ ರೂ.ಪರಿಹಾರ ಘೋಷಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ”ಮಂಡ್ಯದ ಅರಕೇಶ್ವರ ದೇವಸ್ಥಾನದ ಪೂಜಾರಿಗಳಾಗಿದ್ದ ಶ್ರೀ ಗಣೇಶ್, ಶ್ರೀ ಪ್ರಕಾಶ್ ಮತ್ತು ಶ್ರೀ ಆನಂದ್ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ದೇವಸ್ಥಾನದ ಹುಂಡಿಯನ್ನು ಕಳ್ಳತನ ಮಾಡಿರುವ ವಿಷಯ ತಿಳಿದು ಅತ್ಯಂತ ನೋವಾಗಿದೆ” ಎಂದು ಸಂತಾಪ ಸೂಚಿಸಿದ್ದಾರೆ.

ಹಾಗೆಯೇ, ”ಹತ್ಯೆಗೊಳಗಾದ ದೇವಸ್ಥಾನದ ಪೂಜಾರಿಗಳ ಕುಟುಂಬಕ್ಕೆ ತಲಾ 5.00 ಲಕ್ಷ ರೂ. ಪರಿಹಾರ ನೀಡಲಾಗುವುದು. ತಪ್ಪಿತಸ್ಥರ ವಿರುದ್ಧ ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

ಮುಜರಾಯಿ ಇಲಾಖೆಗೆ ಸೇರಿರುವ ಮಂಡ್ಯದ ಅರಕೇಶ್ವರ ದೇವಾಲಯದ ಮೂವರು ಅರ್ಚಕರಾದ ಗಣೇಶ್ (35), ಪ್ರಕಾಶ್ (36), ಆನಂದ್ (33) ಎಂಬವರು ದೇವಾಲಯದ ಪೂಜೆಯೊಂದಿಗೆ ದೇವಾಲಯದ ಕಾವಲು ಕೂಡಾ ಕಾಯುತ್ತಿದ್ದರು. ಗುರುವಾರ ರಾತ್ರಿ ಅರ್ಚಕರನ್ನು ಹತ್ಯೆ ಮಾಡಿ ಹುಂಡಿಯ ಹಣವನ್ನು ದೋಚಿರುವ ಕಳ್ಳರು, ಹುಂಡಿಯಲ್ಲಿನ ನೋಟುಗಳನ್ನು ಮಾತ್ರ ತೆಗೆದುಕೊಂಡು ಚಿಲ್ಲರೆ ಇರುವ ಹುಂಡಿಯನ್ನು ಆವರಣದಲ್ಲಿ ಎಸೆದು ಹೋಗಿದ್ದಾರೆ. ಆರೋಪಿಗಳ ಪತ್ತೆಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

Vishwa News 24

Recent Posts

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

24 minutes ago

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು – vishwanews24

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…

35 minutes ago

ಅ.4ರಿಂದ ಬೆಂಗಳೂರು – ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು – vishwanews24

ಹಳಿ ನಿರ್ವಹಣೆ: ಅ.4ರಿಂದ ಬೆಂಗಳೂರು - ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು ಮಂಗಳೂರು: ಶಿರಿಬಾಗಿಲು- ಯಡಕುಮೇರಿ ರೈಲು…

42 minutes ago

ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ – vishwanews24

ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಮುಂಬೈ: ಘಾಟ್ಕೋಪರ್‌ನ ಚಿರಾಗ್ ನಗರದ ಗೌಸಿಯಾ ಚಾಲ್‌ನಲ್ಲಿ ಬುಧವಾರ…

58 minutes ago

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ – vishwanews24

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…

1 hour ago

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

22 hours ago