ಬೆಂಗಳೂರು : ಇತ್ತೀಚೆಗೆ ಬಿಜೆಪಿ ಸೇರಿರುವ ಸಂಸದೆ ಸುಮಲತಾರನ್ನು ‘ಅಮ್ಮಾ’ ಎಂದೇ ಕರೆಯುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇದೀಗ ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಪ್ರಚಾರಕ್ಕೆ ಮುಂದಾಗಿದ್ದು ಕುತೂಹಲ ಸೃಷ್ಟಿಸಿದೆ. ಈ ಮಧ್ಯೆ, ಮೈತ್ರಿ ಅಭ್ಯರ್ಥಿ ಜೆಡಿಎಸ್ ಪಕ್ಷದ ಹೆಚ್ಡಿ ಕುಮಾರಸ್ವಾಮಿ ಪರ ಸುಮಲತಾ ಇನ್ನೂ ಪ್ರಚಾರದ ಅಖಾಡಕ್ಕಿಲ್ಲ. ಬಿಜೆಪಿಯ ರಾಜ್ಯ, ಕೇಂದ್ರ ನಾಯಕರು ಹೇಳಿದರೆ ಕುಮಾರಸ್ವಾಮಿ ಪರ ಪ್ರಚಾರ ಮಾಡುವುದಾಗಿ ಸುಮಲತಾ ಹೇಳಿದ್ದರು. ಆದರೆ ಈವರೆಗೆ ಪ್ರಚಾರ ಮಾಡದೆ ಮೌನವಾಗಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ, ಕಾಂಗ್ರೆಸ್ ಅಭ್ಯರ್ಥಿ ಪರ ದರ್ಶನ್ ಪ್ರಚಾರಕ್ಕೆ ಮುಂದಾಗಿದ್ದಾರೆ.
ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಗಿಟ್ಟಿಸಿಕೊಳ್ಳಲು ಕೊನೆಯ ವರೆಗೂ ಶ್ರಮಿಸಿದ್ದ ಸುಮಲತಾ ಕೊನೆಗೂ ಕಣದಿಂದ ಹಿಂದೆ ಸರಿದಿದ್ದರು. ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಬಿಜೆಪಿ ಜೆಡಿಎಸ್ ಮೈತ್ರಿ ಸಮಾವೇಶದಲ್ಲಿ ಪ್ರಧಾನಿ ಮೋದಿ ಜತೆ ಭಾಗವಹಿಸಿ ಮತಯಾಚನೆ ಮಾಡಿದ್ದರು. ಆದರೆ, ಇದೀಗ ಸುಮಲತಾರ ಮಾನಸ ಪುತ್ರ ದರ್ಶನ್ ಮಾತ್ರ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಮತಬೇಟೆಗೆ ಸಜ್ಜಾಗಿದ್ದಾರೆ.
ಇಂದು ಮಂಡ್ಯ ಲೋಕಸಭಾ ಕ್ಷೇತ್ರದ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ದರ್ಶನ್ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ದರ್ಶನ್ ಪ್ರಚಾರ ನಡೆಸಲಿದ್ದಾರೆ. ಕಳೆದ ಚುನಾವಣೆಯಲ್ಲಿ ಯಶ್ ಜತೆ ಜೋಡೆತ್ತಿನಂತೆ ನಿಂತಿದ್ದ ದರ್ಶನ್ ಸುಮಲತಾ ಪರ ಬೆವರು ಸುರಿಸಿ ಮಂಡ್ಯದಲ್ಲಿ ಪ್ರಚಾರ ಮಾಡಿದ್ದರು. ಆದರೆ, ಈಗ ಸುಮಲತಾ ಬಿಜೆಪಿಯಲ್ಲಿದ್ದರೂ ದರ್ಶನ್ ಕಾಂಗ್ರೆಸ್ ಪರ ಪ್ರಚಾರಕ್ಕೆ ಹೋಗುತ್ತಿರುವುದು ಸಾಕಷ್ಟು ಅಚ್ಚರಿ ಮತ್ತು ಚರ್ಚೆಗೆ ಗ್ರಾಸವಾಗಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…