ಬೆಂಗಳೂರು : ಇತ್ತೀಚೆಗೆ ಬಿಜೆಪಿ ಸೇರಿರುವ ಸಂಸದೆ ಸುಮಲತಾರನ್ನು ‘ಅಮ್ಮಾ’ ಎಂದೇ ಕರೆಯುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇದೀಗ ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಪ್ರಚಾರಕ್ಕೆ ಮುಂದಾಗಿದ್ದು ಕುತೂಹಲ ಸೃಷ್ಟಿಸಿದೆ. ಈ ಮಧ್ಯೆ, ಮೈತ್ರಿ ಅಭ್ಯರ್ಥಿ ಜೆಡಿಎಸ್ ಪಕ್ಷದ ಹೆಚ್ಡಿ ಕುಮಾರಸ್ವಾಮಿ ಪರ ಸುಮಲತಾ ಇನ್ನೂ ಪ್ರಚಾರದ ಅಖಾಡಕ್ಕಿಲ್ಲ. ಬಿಜೆಪಿಯ ರಾಜ್ಯ, ಕೇಂದ್ರ ನಾಯಕರು ಹೇಳಿದರೆ ಕುಮಾರಸ್ವಾಮಿ ಪರ ಪ್ರಚಾರ ಮಾಡುವುದಾಗಿ ಸುಮಲತಾ ಹೇಳಿದ್ದರು. ಆದರೆ ಈವರೆಗೆ ಪ್ರಚಾರ ಮಾಡದೆ ಮೌನವಾಗಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ, ಕಾಂಗ್ರೆಸ್ ಅಭ್ಯರ್ಥಿ ಪರ ದರ್ಶನ್ ಪ್ರಚಾರಕ್ಕೆ ಮುಂದಾಗಿದ್ದಾರೆ.
ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಗಿಟ್ಟಿಸಿಕೊಳ್ಳಲು ಕೊನೆಯ ವರೆಗೂ ಶ್ರಮಿಸಿದ್ದ ಸುಮಲತಾ ಕೊನೆಗೂ ಕಣದಿಂದ ಹಿಂದೆ ಸರಿದಿದ್ದರು. ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಬಿಜೆಪಿ ಜೆಡಿಎಸ್ ಮೈತ್ರಿ ಸಮಾವೇಶದಲ್ಲಿ ಪ್ರಧಾನಿ ಮೋದಿ ಜತೆ ಭಾಗವಹಿಸಿ ಮತಯಾಚನೆ ಮಾಡಿದ್ದರು. ಆದರೆ, ಇದೀಗ ಸುಮಲತಾರ ಮಾನಸ ಪುತ್ರ ದರ್ಶನ್ ಮಾತ್ರ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಮತಬೇಟೆಗೆ ಸಜ್ಜಾಗಿದ್ದಾರೆ.
ಇಂದು ಮಂಡ್ಯ ಲೋಕಸಭಾ ಕ್ಷೇತ್ರದ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ದರ್ಶನ್ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ದರ್ಶನ್ ಪ್ರಚಾರ ನಡೆಸಲಿದ್ದಾರೆ. ಕಳೆದ ಚುನಾವಣೆಯಲ್ಲಿ ಯಶ್ ಜತೆ ಜೋಡೆತ್ತಿನಂತೆ ನಿಂತಿದ್ದ ದರ್ಶನ್ ಸುಮಲತಾ ಪರ ಬೆವರು ಸುರಿಸಿ ಮಂಡ್ಯದಲ್ಲಿ ಪ್ರಚಾರ ಮಾಡಿದ್ದರು. ಆದರೆ, ಈಗ ಸುಮಲತಾ ಬಿಜೆಪಿಯಲ್ಲಿದ್ದರೂ ದರ್ಶನ್ ಕಾಂಗ್ರೆಸ್ ಪರ ಪ್ರಚಾರಕ್ಕೆ ಹೋಗುತ್ತಿರುವುದು ಸಾಕಷ್ಟು ಅಚ್ಚರಿ ಮತ್ತು ಚರ್ಚೆಗೆ ಗ್ರಾಸವಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…