ಮಂಡ್ಯ,- ಇಂದು ಚಾಲೆಜಿಂಗ್ ಸ್ಟಾರ್ ದರ್ಶನ್ ಮಂಡ್ಯ ಜಿಲ್ಲೆಯ ಕೆಆರ್ಎಸ್ ಸೇರಿದಂತೆ ವಿವಿಧೆಡೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರ ಭರ್ಜರಿ ರೋಡ್ಶೋ ನಡೆಸಿ ಪ್ರಚಾರ ಮಾಡಿದರು.
ಯಾವುದೇ ಕಾರಣಕ್ಕೂ ಮತದಾರರು ಗೊಂದಲಕ್ಕೀಡಾಗಬಾರದು. ಸುಮಲತಾ ಎ. ಕ್ರಮ ಸಂಖ್ಯೆ 20 ಇದಕ್ಕೆ ಮತದಾನ ಮಾಡುವ ಮೂಲಕ ಅವರನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು.
ದರ್ಶನ್ ಪ್ರಚಾರದ ವೇಳೆ ಸಾವಿರಾರು ಸಂಖ್ಯೆಯಲ್ಲಿ ಅವರ ಅಭಿಮಾನಿಗಳು ಪಾಲ್ಗೊಂಡಿದ್ದರು. ಎಲ್ಲೆಲ್ಲೂ ಸುಮಲತಾ ಹಾಗೂ ದರ್ಶನ ಪರ ಘೋಷಣೆಗಳು ಮೊಳಗಿದವು. ಯಾರೂ ಆಮಿಷಗಳಿಗೆ ಒಳಗಾಗಬಾರದು, ಪ್ರಾಮಾಣಿಕವಾಗಿ ಮತದಾನ ಮಾಡಬೇಕು.ಅರ್ಹರನ್ನು ಆರಿಸಬೇಕು. ತಮ್ಮದೇ ಮತದಾನ ಮಾಡಿ ಹಕ್ಕು ಚಲಾಯಿಸಿ ಎಂದು ದಚ್ಚು ಇದೇ ವೇಳೆ ಸಲಹೆ ನೀಡಿದರು.
ಕ್ಷೇತ್ರದಲ್ಲಿ ಸುಮಲತಾ ಹೆಸರಿನ ಕೆಲವರು ಸ್ಪರ್ಧಿಸಿದ್ದಾರೆ. ಹಾಗಾಗಿ ಗೊಂದಲ ಮಾಡಿಕೊಳ್ಳದೆ ಸುಮಲತಾ ಎ. ಕ್ರಮ ಸಂಖ್ಯೆ 20ಕ್ಕೆ ನಿಮ್ಮ ಮತ ನೀಡಿ ನ್ಯಾಯವನ್ನು ಎತ್ತಿಹಿಡಿಯಬೇಕೆಂದು ದರ್ಶನ್ ಇದೇ ವೇಳೆ ಮನವಿ ಮಾಡಿದರು
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…