ಮಂಡ್ಯ: ಚಿನ್ನದ ವ್ಯಾಪಾರಿ  ‘ಬಿಜೆಪಿ ಮುಖಂಡ ಜಗನ್ನಾಥ ಶೆಟ್ಟಿ ಹನಿಟ್ರ್ಯಾಪ್ ಪ್ರಕರಣ’ಕ್ಕೆ ಬಿಗ್ ಟ್ವಿಸ್ಟ್ – Vishwanews24

Featured, ರಾಜ್ಯ ನ್ಯೂಸ್

ಮಂಡ್ಯ: ಚಿನ್ನದ ವ್ಯಾಪಾರಿ  ‘ಬಿಜೆಪಿ ಮುಖಂಡ ಜಗನ್ನಾಥ ಶೆಟ್ಟಿ ಹನಿಟ್ರ್ಯಾಪ್ ಪ್ರಕರಣ’ಕ್ಕೆ ಬಿಗ್ ಟ್ವಿಸ್ಟ್ – ಅಲ್ಲಿ ಅಸಲಿಗೆ ನಡೆದಿದ್ದೇ ಬೇರೆ 

ಮಂಡ್ಯ: ಜಿಲ್ಲೆಯ ಪ್ರಮುಖ ಬಿಜೆಪಿ ಮುಖಂಡ ಚಿನ್ನದ ವ್ಯಾಪಾರಿಯನ್ನು ಹನಿಟ್ರ್ಯಾಫ್  ಮಾಡಿದ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರು ದಾಖಲಿಸಿಕೊಂಡಿರುವಂತ ಎಫ್‌ಐಆರ್ ವಿಷಯದಲ್ಲಿನ ಅಂಶಗಳಿಂತ, ಅಲ್ಲಿ ಅಸಲಿಗೆ ನಡೆದಿದ್ದೇ ಬೇರೆಯಾಗಿದೆ.

ಮೈಸೂರಿನ ದರ್ಶನ್ ಲಾಡ್ಜ್ ನಲ್ಲಿ ಬಿಜೆಪಿ ಮುಖಂಡ ಕಂ ಚಿನ್ನದ ವ್ಯಾಪಾರಿ ಜಗನ್ನಾಥ ಶೆಟ್ಟಿ ಹನಿಟ್ರ್ಯಾಫ್ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಲ್ಮಾ ಗ್ಯಾಂಗ್ ದರ್ಶನ್ ಲಾಡ್ಜ್ ಮೇಲೆ ದಾಳಿ ನಡೆಸಿದಂತ ಸಂದರ್ಭದಲ್ಲಿ ಜಗನ್ನಾಥ ಶೆಟ್ಟಿ ಕಾಲೇಜು ಉಪನ್ಯಾಸಕ ಎಂಬುದಾಗಿ ಮಾಹಿತಿ ನೀಡಿ, ರೂಂ ಪಡೆದಿದ್ದರು ಎಂದು ತಿಳಿದು ಬಂದಿದೆ.

ಮಂಗಳೂರು ಶಿಕ್ಷಣ ಇಲಾಖೆಯ ಸೂಪರಿಂಟೆಂಡೆಂಟ್​ ಮಡಿಕೇರಿ ವಸತಿಗೃಹದಲ್ಲಿ ನೇಣಿಗೆ ಶರಣು – Vishwanews24

ವಿದ್ಯಾರ್ಥಿಯೊಬ್ಬಳನ್ನು ಲಾಡ್ಜ್‌ಗೆ ಕರೆಸಿಕೊಳ್ಳಲು ತಾನು ಲೆಕ್ಚರ್ ಎಂದು ಚಿನ್ನದ ವ್ಯಾಪಾರಿ ಜಗದೀಶ್ ಶೆಟ್ಟಿ ಪುಸಲಾಯಿಸಿದ್ದನು. ಮೈಸೂರಿನ ಲಾಡ್ಜ್‌ಗೆ ವಿದ್ಯಾರ್ಥಿನಿ ಕರೆಸಿಕೊಂಡ ವೇಳೆ ಸಲ್ಮಾ ಗ್ಯಾಂಗ್, ದಿಢೀರ್ ಅವರ ರೂಂ ಗೆ ದಾಳಿ ನಡೆಸಿತ್ತು. ದಾಳಿಯ ವೇಳೆಯಲ್ಲಿ ವೀಡಿಯೋ ಕೂಡ ಚಿತ್ರೀಕರಣ ಮಾಡಿಕೊಂಡಿತ್ತು. ಜೊತೆಗೆ ಬಿಜೆಪಿ ಮುಖಂಡ ಜಗನ್ನಾಥ ಶೆಟ್ಟಿಯವರನ್ನು ಮನಬಂಧಂತೆ ಥಳಿಸಿರೋ ವೀಡಿಯೋ ಈಗ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ.

ಫೆಬ್ರವರಿ 26ರಂದು ಮೈಸೂರಿನಲ್ಲಿ ಈ ಕೃತ್ಯ ನಡೆದಿದ್ದು, ಮಂಗಳೂರಿಗೆ ತೆರಳಲು ಆ ದಿನ ರಾತ್ರಿ ಮಂಡ್ಯದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದೆ. ಈ ವೇಳೆ ಮೈಸೂರಿಗೆ ಡ್ರಾಪ್ ಕೊಡುವುದಾಗಿ ತಿಳಿಸಿ ನಾಲ್ವರು ಕಾರಿನಲ್ಲಿ ಅವರನ್ನು ಕರೆದೊಯ್ದು ನಂತರ ಚಿನ್ನದ ಪರೀಕ್ಷೆಗೆಂದು ಅವರನ್ನು ಅಪಹರಿಸಿ ಲಾಡ್ಜ್ ರೂಮ್‍ಗೆ ಕರೆದೊಯ್ದಿದ್ದಾರೆ. ರೂಮ್‍ನಲ್ಲಿ ಯುವತಿ ಜೊತೆ ವೀಡಿಯೋ ಚಿತ್ರೀಕರಿಸಿಕೊಂಡು ಬಳಿಕ 4 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದರು ಎಂದು ಜಗನ್ನಾಥ್ ಶೆಟ್ಟಿ ಆರೋಪಿಸಿದ್ದನು.

ಮಡಿಕೇರಿ : ಎರಡು ಶಾಲಾ ಬಸ್ ಗಳ ನಡುವೆ ಮುಖಾಮುಖಿ ಢಿಕ್ಕಿ: ಹಲವು ಮಕ್ಕಳಿಗೆ ಗಾಯ – Vishwanews24

Leave a Reply