ಮಂಡ್ಯ : ಜನರ ಸೇವೆ ಮಾಡಿ ಋಣ ತೀರಿಸುತ್ತೇನೆ : ನಿಖಿಲ್ ಕುಮಾರಸ್ವಾಮಿ – Vishwanews24
ಧರ್ಮಸ್ಥಳ : ಜೆಡಿಎಸ್ ವರಿಷ್ಠರು ತೀರ್ಮಾನ ಮಾಡಿದ ಮೇಲೆ ನಾವು ಸ್ಪರ್ಧಿಸಲೇಬೇಕು. ಚುನಾವಣೆಯಲ್ಲಿ ಗೆದ್ದು ಕೊನೆ ಉಸಿರಿನವರೆಗೂ ಮಂಡ್ಯದ ಜನರ ಸೇವೆ ಮಾಡಿ ಋಣ ತೀರಿಸುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಸೋಮವಾರ ಧರ್ಮಸ್ಥಳಕ್ಕೆ ಆಗಮಿಸಿದ ವೇಳೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ತನಗೆ ಗೆಲುವು ಖಚಿತ. ಚುನಾವಣೆಯಲ್ಲಿ ಸುಮಲತಾ ಸ್ಪರ್ಧೆ ಬಗ್ಗೆ ಪ್ರಸ್ತಾಪಿಸಿದಾಗ ಈ ಬಗ್ಗೆ ತಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
ಧರ್ಮಸ್ಥಳದ ಮಂಜುನಾಥನಿಗೆ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ ಧರ್ಮಸ್ಥಳದ ಧರ್ಮಾಧಿಕಾರಿ ಹೆಗ್ಗಡೆ ಜೊತೆ ಮಾತುಕತೆ ನಡೆಸಿದರು. ಬಳಿಕ ಅನ್ನಪೂರ್ಣಕ್ಕೆ ತೆರಳಿ ಕ್ಷೇತ್ರಕ್ಕೆ ಆಗಮಿಸಿದ್ದ ಭಕ್ತರ ಜೊತೆಯಲ್ಲಿ ಸಾಮಾನ್ಯರಂತೆ ಕುಳಿತು ಭೋಜನ ಸ್ವೀಕರಿಸಿದರು.

