Featured

ಮಂಡ್ಯ : ಜೆಡಿಎಸ್ ಕೋಟೆ ಧೂಳೀಪಟ , ಅರಳಿದ ಕಮಲ; ಮೊದಲ ಬಾರಿಗೆ ಜಯಗಳಿಸಿದ ಬಿಜೆಪಿ -Vishwanews24

ಮಂಡ್ಯ: ಜಿಲ್ಲೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಬಿಜೆಪಿ ಜಯಗಳಿಸಿದ್ದು ಜೆಡಿಎಸ್ ಕೋಟೆಯನ್ನು ಧೂಳೀಪಟ ಮಾಡಿದೆ. ತಮ್ಮ ಅವಧಿಯಲ್ಲಿ ಸಿಎಂ ಯಡಿಯೂರಪ್ಪ ಹುಟ್ಟಿದ ಜಿಲ್ಲೆಯಲ್ಲಿ ಕಮಲವನ್ನು ಅರಳಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ನಾರಾಯಣ ಗೌಡ 9,509 ಮತಗಳಿಂದ ಗೆಲ್ಲುವ ಮೂಲಕ ಮಂಡ್ಯದಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯದ ಎಲ್ಲ 7 ಕ್ಷೇತ್ರಗಳನ್ನು ಜೆಡಿಎಸ್ ಗೆದ್ದ ಹಿನ್ನೆಲೆಯಲ್ಲಿ ಈ ಬಾರಿ ಇಲ್ಲಿ ಗೆಲ್ಲುವುದು ಕಷ್ಟ ಎಂದೇ ವಿಶ್ಲೇಷಿಸಲಾಗಿತ್ತು. ಆದರೆ ಎಲ್ಲ ವಿಶ್ಲೇಷಣೆಗಳು ತಲೆಕೆಳಗಾಗಿದ್ದು ಮೊದಲ ಬಾರಿಗೆ ಬಿಜೆಪಿ ಖಾತೆ ತೆರೆದಿದೆ.

ಚುನಾವಣಾ ಪ್ರಚಾರ ಭಾಷಣದಲ್ಲಿ ಯಡಿಯೂರಪ್ಪ ನನ್ನ ಹುಟ್ಟೂರಿನಲ್ಲಿ ಬಿಜೆಪಿಯನ್ನು ಗೆಲ್ಲಿಸಿ ಎಂದು ಕೇಳಿಕೊಂಡಿದ್ದರೆ, ಕುಮಾರಸ್ವಾಮಿ ನಾರಾಯಣ ನನಗೆ ಮೋಸ ಮಾಡಿದ್ದಾರೆ ಎಂದು ಕಣ್ಣೀರು ಹಾಕಿದ್ದರು. ಆದರೆ ಮತದಾರ ಬಿಎಸ್‍ವೈ ಮನವಿಯನ್ನು ಪುರಸ್ಕರಿಸಿ ಬಿಜೆಪಿಯನ್ನು ಗೆಲ್ಲಿಸಿದ್ದಾರೆ.

ಮತ ಎಣಿಕೆ ಆರಂಭವಾದ ಮೊದಲ 1 ಗಂಟೆ ಜೆಡಿಎಸ್ ಮುನ್ನಡೆ ಸಾಧಿಸಿತ್ತು. 9 ಗಂಟೆಯ ನಂತರ ಒಂದು ಸುತ್ತಿನಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದರೆ ಮತ್ತೊಂದು ಸುತ್ತಿನಲ್ಲಿ ಜೆಡಿಎಸ್ ಮುನ್ನಡೆ ಸಾಧಿಸುತಿತ್ತು. ಆದರೆ ಅಂತಿಮವಾಗಿ ನಾರಾಯಣ ಗೌಡ ಮುನ್ನಡೆ ಸಾಧಿಸುತ್ತಾ ಹೋಗಿ ಜಯಗಳಿಸಿದರು.

 

ಫಲಿತಾಂಶಕ್ಕೂ ಮುನ್ನ ಯಡಿಯೂರಪ್ಪ ಹುಟ್ಟೂರು ಬೂಕನಕೆರೆಯ ಗೋಗಾಲಮ್ಮ ದೇವಸ್ಥಾನದಲ್ಲಿ ಬೆಂಬಲಿಗರೊಂದಿಗೆ ನಾರಾಯಣಗೌಡ ಪೂಜೆ ಸಲ್ಲಿಸಿದರು

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

4 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

4 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

4 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

5 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

5 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

5 hours ago