ಮಂಡ್ಯ: ಜಿಲ್ಲೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಬಿಜೆಪಿ ಜಯಗಳಿಸಿದ್ದು ಜೆಡಿಎಸ್ ಕೋಟೆಯನ್ನು ಧೂಳೀಪಟ ಮಾಡಿದೆ. ತಮ್ಮ ಅವಧಿಯಲ್ಲಿ ಸಿಎಂ ಯಡಿಯೂರಪ್ಪ ಹುಟ್ಟಿದ ಜಿಲ್ಲೆಯಲ್ಲಿ ಕಮಲವನ್ನು ಅರಳಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ನಾರಾಯಣ ಗೌಡ 9,509 ಮತಗಳಿಂದ ಗೆಲ್ಲುವ ಮೂಲಕ ಮಂಡ್ಯದಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯದ ಎಲ್ಲ 7 ಕ್ಷೇತ್ರಗಳನ್ನು ಜೆಡಿಎಸ್ ಗೆದ್ದ ಹಿನ್ನೆಲೆಯಲ್ಲಿ ಈ ಬಾರಿ ಇಲ್ಲಿ ಗೆಲ್ಲುವುದು ಕಷ್ಟ ಎಂದೇ ವಿಶ್ಲೇಷಿಸಲಾಗಿತ್ತು. ಆದರೆ ಎಲ್ಲ ವಿಶ್ಲೇಷಣೆಗಳು ತಲೆಕೆಳಗಾಗಿದ್ದು ಮೊದಲ ಬಾರಿಗೆ ಬಿಜೆಪಿ ಖಾತೆ ತೆರೆದಿದೆ.
ಚುನಾವಣಾ ಪ್ರಚಾರ ಭಾಷಣದಲ್ಲಿ ಯಡಿಯೂರಪ್ಪ ನನ್ನ ಹುಟ್ಟೂರಿನಲ್ಲಿ ಬಿಜೆಪಿಯನ್ನು ಗೆಲ್ಲಿಸಿ ಎಂದು ಕೇಳಿಕೊಂಡಿದ್ದರೆ, ಕುಮಾರಸ್ವಾಮಿ ನಾರಾಯಣ ನನಗೆ ಮೋಸ ಮಾಡಿದ್ದಾರೆ ಎಂದು ಕಣ್ಣೀರು ಹಾಕಿದ್ದರು. ಆದರೆ ಮತದಾರ ಬಿಎಸ್ವೈ ಮನವಿಯನ್ನು ಪುರಸ್ಕರಿಸಿ ಬಿಜೆಪಿಯನ್ನು ಗೆಲ್ಲಿಸಿದ್ದಾರೆ.
ಮತ ಎಣಿಕೆ ಆರಂಭವಾದ ಮೊದಲ 1 ಗಂಟೆ ಜೆಡಿಎಸ್ ಮುನ್ನಡೆ ಸಾಧಿಸಿತ್ತು. 9 ಗಂಟೆಯ ನಂತರ ಒಂದು ಸುತ್ತಿನಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದರೆ ಮತ್ತೊಂದು ಸುತ್ತಿನಲ್ಲಿ ಜೆಡಿಎಸ್ ಮುನ್ನಡೆ ಸಾಧಿಸುತಿತ್ತು. ಆದರೆ ಅಂತಿಮವಾಗಿ ನಾರಾಯಣ ಗೌಡ ಮುನ್ನಡೆ ಸಾಧಿಸುತ್ತಾ ಹೋಗಿ ಜಯಗಳಿಸಿದರು.
ಫಲಿತಾಂಶಕ್ಕೂ ಮುನ್ನ ಯಡಿಯೂರಪ್ಪ ಹುಟ್ಟೂರು ಬೂಕನಕೆರೆಯ ಗೋಗಾಲಮ್ಮ ದೇವಸ್ಥಾನದಲ್ಲಿ ಬೆಂಬಲಿಗರೊಂದಿಗೆ ನಾರಾಯಣಗೌಡ ಪೂಜೆ ಸಲ್ಲಿಸಿದರು
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…