ಮಂಡ್ಯ: ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಮಂಡ್ಯ ಲೋಕಸಭಾ ಕ್ಷೇತ್ರದ ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಅವರನ್ನು ಕರ್ನಾಟಕ ಸರ್ಕಾರ ಮಂಗಳವಾರ ವರ್ಗಾಯಿಸಿದೆ.
ಲೋಕಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಒತ್ತಡಕ್ಕೆ ಮಣಿದು ಮೈತ್ರಿ ಅಭ್ಯರ್ಥಿ ಕೆ.ನಿಖಿಲ್ ಪರ ಏಕಪಕ್ಷೀಯವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ಹಲವು ದೂರು ದಾಖಲಾಗಿದ್ದವು. ನಿಖಿಲ್ ನಾಮಪತ್ರ ಪರಿಶೀಲನೆ ಸಂದರ್ಭದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಕಡೆ ಏಜೆಂಟರು ಆಕ್ಷೇಪಣೆ ಸಲ್ಲಿಸಿದ್ದರೂ ಅದನ್ನು ಪರಿಗಣಿಸದೇ ನಾಮಪತ್ರ ಅಂಗೀಕರಿಸಿದ್ದಾರೆ ಎಂದು ಆರೋಪಿಸಲಾಗಿತ್ತು.
ನೀತಿ–ನಿಯಮಗಳನ್ನು ಗಾಳಿಗೆ ತೂರಿ ನಿಖಿಲ್ ಗೆಲುವಿಗಾಗಿ ಜಿಲ್ಲಾ ಚುನಾವಣಾಧಿಕಾರಿ ಕೆಲಸ ಮಾಡುತ್ತಿದ್ದಾರೆ. ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಯಲು ಅವರು ಸ್ಥಾನ ತೊರೆಯಬೇಕು ಎಂದು ಸುಮಲತಾ ಒತ್ತಾಯಿಸಿದ್ದರು. ಈ ಕುರಿತು ಚುನಾವಣಾ ಆಯೋಗಕ್ಕೆ ಸರಣಿ ದೂರುಗಳು ದಾಖಲಾಗಿದ್ದವು. ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಪರಿಶೀಲನೆ ನಡೆಸಿದ್ದರು.
ಸ್ಥಳೀಯರು ಎಂಬ ಕಾರಣಕ್ಕೆ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದ ಕೆ.ಯಾಲಕ್ಕಿಗೌಡ ಅವರನ್ನು ಸರ್ಕಾರ ಈಚೆಗೆ ವರ್ಗಾವಣೆ ಮಾಡಿತ್ತು. ಎನ್.ಮಂಜುಶ್ರೀ 2017ರ ಆ.9ರಿಂದ ಮಂಡ್ಯ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…