ಮಂಡ್ಯ: ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಮಂಡ್ಯ ಲೋಕಸಭಾ ಕ್ಷೇತ್ರದ ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಅವರನ್ನು ಕರ್ನಾಟಕ ಸರ್ಕಾರ ಮಂಗಳವಾರ ವರ್ಗಾಯಿಸಿದೆ.
ಲೋಕಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಒತ್ತಡಕ್ಕೆ ಮಣಿದು ಮೈತ್ರಿ ಅಭ್ಯರ್ಥಿ ಕೆ.ನಿಖಿಲ್ ಪರ ಏಕಪಕ್ಷೀಯವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ಹಲವು ದೂರು ದಾಖಲಾಗಿದ್ದವು. ನಿಖಿಲ್ ನಾಮಪತ್ರ ಪರಿಶೀಲನೆ ಸಂದರ್ಭದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಕಡೆ ಏಜೆಂಟರು ಆಕ್ಷೇಪಣೆ ಸಲ್ಲಿಸಿದ್ದರೂ ಅದನ್ನು ಪರಿಗಣಿಸದೇ ನಾಮಪತ್ರ ಅಂಗೀಕರಿಸಿದ್ದಾರೆ ಎಂದು ಆರೋಪಿಸಲಾಗಿತ್ತು.
ನೀತಿ–ನಿಯಮಗಳನ್ನು ಗಾಳಿಗೆ ತೂರಿ ನಿಖಿಲ್ ಗೆಲುವಿಗಾಗಿ ಜಿಲ್ಲಾ ಚುನಾವಣಾಧಿಕಾರಿ ಕೆಲಸ ಮಾಡುತ್ತಿದ್ದಾರೆ. ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಯಲು ಅವರು ಸ್ಥಾನ ತೊರೆಯಬೇಕು ಎಂದು ಸುಮಲತಾ ಒತ್ತಾಯಿಸಿದ್ದರು. ಈ ಕುರಿತು ಚುನಾವಣಾ ಆಯೋಗಕ್ಕೆ ಸರಣಿ ದೂರುಗಳು ದಾಖಲಾಗಿದ್ದವು. ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಪರಿಶೀಲನೆ ನಡೆಸಿದ್ದರು.
ಸ್ಥಳೀಯರು ಎಂಬ ಕಾರಣಕ್ಕೆ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದ ಕೆ.ಯಾಲಕ್ಕಿಗೌಡ ಅವರನ್ನು ಸರ್ಕಾರ ಈಚೆಗೆ ವರ್ಗಾವಣೆ ಮಾಡಿತ್ತು. ಎನ್.ಮಂಜುಶ್ರೀ 2017ರ ಆ.9ರಿಂದ ಮಂಡ್ಯ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…