ಮಂಡ್ಯ: ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಮಂಡ್ಯ ಲೋಕಸಭಾ ಕ್ಷೇತ್ರದ ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಅವರನ್ನು ಕರ್ನಾಟಕ ಸರ್ಕಾರ ಮಂಗಳವಾರ ವರ್ಗಾಯಿಸಿದೆ.
ಲೋಕಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಒತ್ತಡಕ್ಕೆ ಮಣಿದು ಮೈತ್ರಿ ಅಭ್ಯರ್ಥಿ ಕೆ.ನಿಖಿಲ್ ಪರ ಏಕಪಕ್ಷೀಯವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ಹಲವು ದೂರು ದಾಖಲಾಗಿದ್ದವು. ನಿಖಿಲ್ ನಾಮಪತ್ರ ಪರಿಶೀಲನೆ ಸಂದರ್ಭದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಕಡೆ ಏಜೆಂಟರು ಆಕ್ಷೇಪಣೆ ಸಲ್ಲಿಸಿದ್ದರೂ ಅದನ್ನು ಪರಿಗಣಿಸದೇ ನಾಮಪತ್ರ ಅಂಗೀಕರಿಸಿದ್ದಾರೆ ಎಂದು ಆರೋಪಿಸಲಾಗಿತ್ತು.
ನೀತಿ–ನಿಯಮಗಳನ್ನು ಗಾಳಿಗೆ ತೂರಿ ನಿಖಿಲ್ ಗೆಲುವಿಗಾಗಿ ಜಿಲ್ಲಾ ಚುನಾವಣಾಧಿಕಾರಿ ಕೆಲಸ ಮಾಡುತ್ತಿದ್ದಾರೆ. ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಯಲು ಅವರು ಸ್ಥಾನ ತೊರೆಯಬೇಕು ಎಂದು ಸುಮಲತಾ ಒತ್ತಾಯಿಸಿದ್ದರು. ಈ ಕುರಿತು ಚುನಾವಣಾ ಆಯೋಗಕ್ಕೆ ಸರಣಿ ದೂರುಗಳು ದಾಖಲಾಗಿದ್ದವು. ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಪರಿಶೀಲನೆ ನಡೆಸಿದ್ದರು.
ಸ್ಥಳೀಯರು ಎಂಬ ಕಾರಣಕ್ಕೆ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದ ಕೆ.ಯಾಲಕ್ಕಿಗೌಡ ಅವರನ್ನು ಸರ್ಕಾರ ಈಚೆಗೆ ವರ್ಗಾವಣೆ ಮಾಡಿತ್ತು. ಎನ್.ಮಂಜುಶ್ರೀ 2017ರ ಆ.9ರಿಂದ ಮಂಡ್ಯ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…
ಉಡುಪಿ: ಮೇ 12 ರಂದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 518 ವಿದ್ಯಾರ್ಥಿಗಳಿಗೆ 42 ಲಕ್ಷ ಮೊತ್ತದ ವಿದ್ಯಾರ್ಥಿ…
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…