ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕು ಕನಗನಮರಡಿ ಬಳಿ ಖಾಸಗಿ ಬಸ್ ವಿಸಿ ನಾಲೆಗೆ ಉರುಳಿದ ಪರಿಣಾಮ ಮೂವರು ಮಕ್ಕಳು ಸೇರಿ 20ಕ್ಕೂ ಜನರು ಸಾವನ್ನಪ್ಪಿದ್ದಾರೆ.
ಪಾಂಡವಪುರದಿಂದ ಮಂಡ್ಯಕ್ಕೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ನಾಲೆಗೆ ಉರುಳಿದೆ. ಖಾಸಗಿ ಬಸ್ ಪ್ರತಿನಿತ್ಯ ಎರಡು ಬಾರಿ ಸಂಚರಿಸುತ್ತಿತ್ತು. ಬಸ್ ಚಾಲಕನ ನಿರ್ಲಕ್ಷ್ಯದಿಂದ ನಿಯಂತ್ರಣ ತಪ್ಪಿ ತುಂಬಿ ಹರಿಯುತ್ತಿದ್ದ ನಾಲೆಗೆ ಉರುಳಿದೆ.
ನಾಲೆ ಆಳವಾಗಿದ್ದು, ತಡೆ ಗೋಡೆ ಇರಲಿಲ್ಲ. ಬಸ್ ಸಂಪೂರ್ಣವಾಗಿ ಮುಳುಗಿದೆ. ಬಸ್ನಲ್ಲಿ 50 ಮಂದಿ ಪ್ರಯಾಣಿಕರಿದ್ದರು ಎನ್ನಲಾಗಿದೆ. ಸ್ಥಳಕ್ಕೆ ದೌಡಾಯಿಸಿದ ಸ್ಥಳೀಯರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.
ಸುತ್ತಮುತ್ತಲಿನ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ತೆರಳಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…