Featured

ಮಂಡ್ಯ : ನಿಲ್ಲದ ಹೆಣ್ಣು ಭ್ರೂಣ ಪತ್ತೆ, ಹತ್ಯೆ ದಂಧೆ: ಮೂವರು ಆರೋಪಿಗಳು ಅರೆಸ್ಟ್ – vishwanews24

ಮಂಡ್ಯ : ನಿಲ್ಲದ ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ದಂಧೆ: ಮೂವರು ಆರೋಪಿಗಳು ಅರೆಸ್ಟ್

ಮಂಡ್ಯ: ಜಿಲ್ಲೆಯಲ್ಲಿ ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ದಂಧೆ ಮುಂದುವರಿದಿದೆ. ಆಲೆಮನೆ, ಹೆಲ್ತ್ ಕ್ವಾಟ್ರಸ್ ಬಳಿಕ ನಾಗಮಂಗಲದ  ಮಾವಿನಕೆರೆ ತೋಟದ ಮನೆಯೊಂದರಲ್ಲಿ ಭ್ರೂಣ ಹತ್ಯೆ ದಂಧೆ ಬೆಳಕಿಗೆ ಬಂದಿದೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಮಾವಿನಕೆರೆ ಗ್ರಾಮದ ತೋಟದ ಮನೆಯಲ್ಲಿ ಹೆಣ್ಣುಭ್ರೂಣ ಪತ್ತೆ ದಂಧೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಭ್ರೂಣಲಿಂಗ ಪತ್ತೆ ಮಾಡುತ್ತಿದ್ದಾಗಲೇ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದರಿಂದ ಆರೋಪಿಗಳಿಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಗುರುವಾರ ತಡ‌ರಾತ್ರಿ ಡಿಹೆಚ್​ಒ ಡಾ. ಮೋಹನ್ ‌ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ, ಮನೆಯಲ್ಲಿ ಅಬಾರ್ಷನ್ ಕಿಟ್, ಸ್ಕ್ಯಾನಿಂಗ್ ಮಷಿನ್ ಪತ್ತೆಯಾಗಿದೆ. ಇದೇ ವೇಳೆ ಸ್ಥಳದಲ್ಲಿ‌ ಹಾಸನ ಮೂಲದ ಗರ್ಭಿಣಿಯೂ ಇದ್ದರು. ಭ್ರೂಣಲಿಂಗ ಪತ್ತೆಗಾಗಿ ಗರ್ಭಿಣಿಯನ್ನು ಕರೆತರಲಾಗಿತ್ತು. ಗರ್ಭಿಣಿ ಮೂರನೇ ಹೆಣ್ಣುಭ್ರೂಣ ಅಬಾರ್ಷನ್​ಗೆ ಬಂದಿದ್ದರು ಎಂಬುದೂ ಗೊತ್ತಾಗಿದೆ.

ಸದ್ಯ ಅಬಾರ್ಷನ್ ಕಿಟ್, ಸ್ಕ್ಯಾನಿಂಗ್ ಯಂತ್ರವನ್ನು ಸೀಜ್ ಮಾಡಿದ ಪೊಲೀಸರು, ಗರ್ಭಿಣಿಯ ಪತಿಯನ್ನು ಬಂಧಿಸಿದ್ದಾರೆ. ಸ್ಕ್ಯಾನಿಂಗ್ ಮಾಡುತ್ತಿದ್ದ ಪ್ರಮುಖ ಆರೋಪಿ ಅಭಿಷೇಕ್ ಪರಾರಿಯಾಗಿದ್ದಾನೆ. ಮನೆ ಮಾಲೀಕ ಧನಂಜಯ್ ಆರೋಗ್ಯ ಇಲಾಖೆ ಗ್ರೂಪ್​ ಡಿ ಸಿಬ್ಬಂದಿ ಎನ್ನಲಾಗಿದೆ.

 

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

6 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago