ಮಂಡ್ಯ: ಜಿಲ್ಲೆಯಲ್ಲಿ ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ದಂಧೆ ಮುಂದುವರಿದಿದೆ. ಆಲೆಮನೆ, ಹೆಲ್ತ್ ಕ್ವಾಟ್ರಸ್ ಬಳಿಕ ನಾಗಮಂಗಲದ ಮಾವಿನಕೆರೆ ತೋಟದ ಮನೆಯೊಂದರಲ್ಲಿ ಭ್ರೂಣ ಹತ್ಯೆ ದಂಧೆ ಬೆಳಕಿಗೆ ಬಂದಿದೆ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಮಾವಿನಕೆರೆ ಗ್ರಾಮದ ತೋಟದ ಮನೆಯಲ್ಲಿ ಹೆಣ್ಣುಭ್ರೂಣ ಪತ್ತೆ ದಂಧೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಭ್ರೂಣಲಿಂಗ ಪತ್ತೆ ಮಾಡುತ್ತಿದ್ದಾಗಲೇ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದರಿಂದ ಆರೋಪಿಗಳಿಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಗುರುವಾರ ತಡರಾತ್ರಿ ಡಿಹೆಚ್ಒ ಡಾ. ಮೋಹನ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ, ಮನೆಯಲ್ಲಿ ಅಬಾರ್ಷನ್ ಕಿಟ್, ಸ್ಕ್ಯಾನಿಂಗ್ ಮಷಿನ್ ಪತ್ತೆಯಾಗಿದೆ. ಇದೇ ವೇಳೆ ಸ್ಥಳದಲ್ಲಿ ಹಾಸನ ಮೂಲದ ಗರ್ಭಿಣಿಯೂ ಇದ್ದರು. ಭ್ರೂಣಲಿಂಗ ಪತ್ತೆಗಾಗಿ ಗರ್ಭಿಣಿಯನ್ನು ಕರೆತರಲಾಗಿತ್ತು. ಗರ್ಭಿಣಿ ಮೂರನೇ ಹೆಣ್ಣುಭ್ರೂಣ ಅಬಾರ್ಷನ್ಗೆ ಬಂದಿದ್ದರು ಎಂಬುದೂ ಗೊತ್ತಾಗಿದೆ.
ಸದ್ಯ ಅಬಾರ್ಷನ್ ಕಿಟ್, ಸ್ಕ್ಯಾನಿಂಗ್ ಯಂತ್ರವನ್ನು ಸೀಜ್ ಮಾಡಿದ ಪೊಲೀಸರು, ಗರ್ಭಿಣಿಯ ಪತಿಯನ್ನು ಬಂಧಿಸಿದ್ದಾರೆ. ಸ್ಕ್ಯಾನಿಂಗ್ ಮಾಡುತ್ತಿದ್ದ ಪ್ರಮುಖ ಆರೋಪಿ ಅಭಿಷೇಕ್ ಪರಾರಿಯಾಗಿದ್ದಾನೆ. ಮನೆ ಮಾಲೀಕ ಧನಂಜಯ್ ಆರೋಗ್ಯ ಇಲಾಖೆ ಗ್ರೂಪ್ ಡಿ ಸಿಬ್ಬಂದಿ ಎನ್ನಲಾಗಿದೆ.
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…
ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…