ಮಂಡ್ಯ: ಜಿಲ್ಲೆಯಲ್ಲಿ ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ದಂಧೆ ಮುಂದುವರಿದಿದೆ. ಆಲೆಮನೆ, ಹೆಲ್ತ್ ಕ್ವಾಟ್ರಸ್ ಬಳಿಕ ನಾಗಮಂಗಲದ ಮಾವಿನಕೆರೆ ತೋಟದ ಮನೆಯೊಂದರಲ್ಲಿ ಭ್ರೂಣ ಹತ್ಯೆ ದಂಧೆ ಬೆಳಕಿಗೆ ಬಂದಿದೆ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಮಾವಿನಕೆರೆ ಗ್ರಾಮದ ತೋಟದ ಮನೆಯಲ್ಲಿ ಹೆಣ್ಣುಭ್ರೂಣ ಪತ್ತೆ ದಂಧೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಭ್ರೂಣಲಿಂಗ ಪತ್ತೆ ಮಾಡುತ್ತಿದ್ದಾಗಲೇ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದರಿಂದ ಆರೋಪಿಗಳಿಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಗುರುವಾರ ತಡರಾತ್ರಿ ಡಿಹೆಚ್ಒ ಡಾ. ಮೋಹನ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ, ಮನೆಯಲ್ಲಿ ಅಬಾರ್ಷನ್ ಕಿಟ್, ಸ್ಕ್ಯಾನಿಂಗ್ ಮಷಿನ್ ಪತ್ತೆಯಾಗಿದೆ. ಇದೇ ವೇಳೆ ಸ್ಥಳದಲ್ಲಿ ಹಾಸನ ಮೂಲದ ಗರ್ಭಿಣಿಯೂ ಇದ್ದರು. ಭ್ರೂಣಲಿಂಗ ಪತ್ತೆಗಾಗಿ ಗರ್ಭಿಣಿಯನ್ನು ಕರೆತರಲಾಗಿತ್ತು. ಗರ್ಭಿಣಿ ಮೂರನೇ ಹೆಣ್ಣುಭ್ರೂಣ ಅಬಾರ್ಷನ್ಗೆ ಬಂದಿದ್ದರು ಎಂಬುದೂ ಗೊತ್ತಾಗಿದೆ.
ಸದ್ಯ ಅಬಾರ್ಷನ್ ಕಿಟ್, ಸ್ಕ್ಯಾನಿಂಗ್ ಯಂತ್ರವನ್ನು ಸೀಜ್ ಮಾಡಿದ ಪೊಲೀಸರು, ಗರ್ಭಿಣಿಯ ಪತಿಯನ್ನು ಬಂಧಿಸಿದ್ದಾರೆ. ಸ್ಕ್ಯಾನಿಂಗ್ ಮಾಡುತ್ತಿದ್ದ ಪ್ರಮುಖ ಆರೋಪಿ ಅಭಿಷೇಕ್ ಪರಾರಿಯಾಗಿದ್ದಾನೆ. ಮನೆ ಮಾಲೀಕ ಧನಂಜಯ್ ಆರೋಗ್ಯ ಇಲಾಖೆ ಗ್ರೂಪ್ ಡಿ ಸಿಬ್ಬಂದಿ ಎನ್ನಲಾಗಿದೆ.
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…