ಮಂಡ್ಯ: ಸೋಮವಾರ ರಾತ್ರಿ ಮಂಡ್ಯದಲ್ಲಿ ಬಿರುಗಾಳಿ ಸಹಿತ ಸುರಿದ ಮಳೆಗೆ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಸೋಮವಾರ ರಾತ್ರಿ ನಗರದ ಆಸ್ಪತ್ರೆ ರಸ್ತೆಯಲ್ಲಿ ನಡೆದ ದುರಂತದಲ್ಲಿ ತಾಲೂಕಿನ ಜಿ.ಬೊಮ್ಮನಹಳ್ಳಿ ಗ್ರಾಮದ ರಾಮಯ್ಯನ ಪುತ್ರ ಕಾರ್ತಿಕ್ (28) ಸಾವನ್ನಪ್ಪಿದ್ದಾರೆ. ಅದೃಷ್ಟವಶಾತ್, ಇವರ ಜೊತೆ ಕಾರಿನಲ್ಲಿದ್ದ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ.
ಮಂಗಳವಾರ ಕಾರ್ತಿಕ್ ಅವರ ಹುಟ್ಟುಹಬ್ಬವಿದ್ದ ಹಿನ್ನೆಲೆಯಲ್ಲಿ ಸ್ನೇಹಿತರಾದ ಸುನೀಲ್ ಮತ್ತು ಚೇರನಹಳ್ಳಿ ಮಂಜು ಅವರೊಂದಿಗೆ ಮಂಡ್ಯ ನಗರಕ್ಕೆ ಓಮ್ನಿ ಕಾರಿನಲ್ಲಿ ಬಟ್ಟೆ ಖರೀದಿಸಲು ಬಂದಿದ್ದರು. ಸೋಮವಾರ ರಾತ್ರಿ 8ರ ಹೊತ್ತಿಗೆ ಗಾಳಿಸಮೇತ ಮಳೆ ಆರಂಭಗೊಂಡಿದ್ದು, ಆಸ್ಪತ್ರೆ ರಸ್ತೆಯ ತಿರುವಿನಲ್ಲಿ ಮರ ಕಾರಿನ ಮೇಲೆ ಬಿದ್ದಿದೆ. ತಕ್ಷಣ ಸಾರ್ವಜನಿಕರು ರಕ್ಷಣೆಗೆ ಮುಂದಾಗಿದ್ದರು. ಆದರೆ ನಜ್ಜುಗುಜ್ಜಾಗಿದ್ದ ಕಾರಿನಲ್ಲಿ ಸಿಲುಕಿದ್ದ ಕಾರ್ತಿಕ್ ಸಾವನ್ನಪ್ಪಿದ್ದು, ಇನ್ನಿಬ್ಬರು ಪಾರಾಗಿದ್ದಾರೆ.
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…
ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …
ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್ಮಾಲ್ ಆಗಿಲ್ಲ: ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…
ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…
ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…
ಆರ್ ಎಸ್ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…