ಮಂಡ್ಯ: ಸೋಮವಾರ ರಾತ್ರಿ ಮಂಡ್ಯದಲ್ಲಿ ಬಿರುಗಾಳಿ ಸಹಿತ ಸುರಿದ ಮಳೆಗೆ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಸೋಮವಾರ ರಾತ್ರಿ ನಗರದ ಆಸ್ಪತ್ರೆ ರಸ್ತೆಯಲ್ಲಿ ನಡೆದ ದುರಂತದಲ್ಲಿ ತಾಲೂಕಿನ ಜಿ.ಬೊಮ್ಮನಹಳ್ಳಿ ಗ್ರಾಮದ ರಾಮಯ್ಯನ ಪುತ್ರ ಕಾರ್ತಿಕ್ (28) ಸಾವನ್ನಪ್ಪಿದ್ದಾರೆ. ಅದೃಷ್ಟವಶಾತ್, ಇವರ ಜೊತೆ ಕಾರಿನಲ್ಲಿದ್ದ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ.
ಮಂಗಳವಾರ ಕಾರ್ತಿಕ್ ಅವರ ಹುಟ್ಟುಹಬ್ಬವಿದ್ದ ಹಿನ್ನೆಲೆಯಲ್ಲಿ ಸ್ನೇಹಿತರಾದ ಸುನೀಲ್ ಮತ್ತು ಚೇರನಹಳ್ಳಿ ಮಂಜು ಅವರೊಂದಿಗೆ ಮಂಡ್ಯ ನಗರಕ್ಕೆ ಓಮ್ನಿ ಕಾರಿನಲ್ಲಿ ಬಟ್ಟೆ ಖರೀದಿಸಲು ಬಂದಿದ್ದರು. ಸೋಮವಾರ ರಾತ್ರಿ 8ರ ಹೊತ್ತಿಗೆ ಗಾಳಿಸಮೇತ ಮಳೆ ಆರಂಭಗೊಂಡಿದ್ದು, ಆಸ್ಪತ್ರೆ ರಸ್ತೆಯ ತಿರುವಿನಲ್ಲಿ ಮರ ಕಾರಿನ ಮೇಲೆ ಬಿದ್ದಿದೆ. ತಕ್ಷಣ ಸಾರ್ವಜನಿಕರು ರಕ್ಷಣೆಗೆ ಮುಂದಾಗಿದ್ದರು. ಆದರೆ ನಜ್ಜುಗುಜ್ಜಾಗಿದ್ದ ಕಾರಿನಲ್ಲಿ ಸಿಲುಕಿದ್ದ ಕಾರ್ತಿಕ್ ಸಾವನ್ನಪ್ಪಿದ್ದು, ಇನ್ನಿಬ್ಬರು ಪಾರಾಗಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…